2:25 PM Sunday11 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ಉಕ್ರೇನ್ ನಿಂದ 15 ವಿಮಾನಗಳ ಮೂಲಕ 3,352 ಭಾರತೀಯರ ಸ್ಥಳಾಂತರ: ಭಾರತೀಯ ವಿದೇಶಾಂಗ ಸಚಿವಾಲಯ

03/03/2022, 12:03

ಹೊಸದಿಲ್ಲಿ(reporterkarnataka.com):

ಉಕ್ರೇನ್ ನಲ್ಲಿ ಸಿಲುಕಿರುವ 3.352 ಭಾರತೀಯರನ್ನು15 ವಿಮಾನಗಳ ಮೂಲಕ ಸುರಕ್ಷಿತವಾಗಿ ಸ್ವದೇಶಕ್ಕೆ ಕರೆತರಲಾಗಿದೆ ಎಂದು ಭಾರತೀಯ ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದೆ.

ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಭಾರತೀಯ ವಿದೇಶಾಂಗ ಸಚಿವಾಲಯ ವಕ್ತಾರ ಅರಿಂದಾಮ್ ಬಾಗ್ಚಿ, ಉಕ್ರೇನ್ನಿಂದ ಸುಮಾರು 17,000 ಭಾರತೀಯರು ಗಡಿಗಳನ್ನು ತೊರೆದಿದ್ದಾರೆ ಎಂದು ಅಂದಾಜಿಸಲಾಗಿದೆ.

ಇನ್ನು ಮುಂದಿನ 24 ಗಂಟೆಗಳಲ್ಲಿ ಉಕ್ರೇನ್ ನಿಂದ 15 ವಿಮಾನಗಳು ಭಾರತದತ್ತ ಬರಲಿದ್ದು, ಈಗಾಗಲೇ ಕೆಲವು ಮಾರ್ಗಮಧ್ಯದಲ್ಲಿವೆ ಎಂದು ಮಾಹಿತಿ ನೀಡಿದರು.

ಕಳೆದ 24 ಗಂಟೆಗಳಲ್ಲಿ 6 ವಿಮಾನಗಳು ಸ್ವದೇಶಕ್ಕೆ ಬಂದಿಳಿದೆ.ಇಲ್ಲಿಯವರೆಗೆ 3,352 ಭಾರತೀಯರನ್ನು ಉಕ್ರೇನ್ ನಿಂದ ಸ್ಥಳಾಂತರಿಸಲಾಗಿದೆ ಎಂದರು.

ಆಪರೇಷನ್ ಗಂಗಾ ಕಾರ್ಯಾಚರಣೆಯಲ್ಲಿ ಭಾರತೀಯ ವಾಯುಪಡೆಯ ವಿಮಾನಗಳು ತಮ್ಮ ಸೇವೆ ನೀಡುತ್ತಿದ್ದು, ಬುಚಾರೆಸ್ಟ್ (ರೊಮೇನಿಯಾ) ನಿಂದ ಮೊದಲ ಸಿ-17 ವಿಮಾನ ಈಗಾಗಲೇ ಹೊರಟಿವೆ. ಇಂದು ರಾತ್ರಿ ದೆಹಲಿಗೆ ತಲುಪುವ ನಿರೀಕ್ಷೆಯಿದೆ.

ಇದಲ್ಲದೇ ಬುಡಾಪೆಸ್ಟ್ (ಹಂಗೇರಿ), ಬುಚಾರೆಸ್ಟ್ (ರೊಮೇನಿಯಾ) ಮತ್ತು ರ್ಜೆಸ್ಜೋವ್ (ಪೋಲೆಂಡ್) ಅರಿಂದಾಮ್ ಬಾಗ್ಚಿ ನಿಂದಲೂ ಇನ್ನೂ 3 ಐಎಎಫ್ ವಿಮಾನಗಳು ಉಕ್ರೇನ್ ನಲ್ಲಿರುವ ಭಾರತೀಯರನ್ನು ಕರೆತರಲು ಹೊರಟಿವೆ ಎಂದು ಮಾಹಿತಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು