1:52 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಉಕ್ರೇನ್ ನಿಂದ 15 ವಿಮಾನಗಳ ಮೂಲಕ 3,352 ಭಾರತೀಯರ ಸ್ಥಳಾಂತರ: ಭಾರತೀಯ ವಿದೇಶಾಂಗ ಸಚಿವಾಲಯ

03/03/2022, 12:03

ಹೊಸದಿಲ್ಲಿ(reporterkarnataka.com):

ಉಕ್ರೇನ್ ನಲ್ಲಿ ಸಿಲುಕಿರುವ 3.352 ಭಾರತೀಯರನ್ನು15 ವಿಮಾನಗಳ ಮೂಲಕ ಸುರಕ್ಷಿತವಾಗಿ ಸ್ವದೇಶಕ್ಕೆ ಕರೆತರಲಾಗಿದೆ ಎಂದು ಭಾರತೀಯ ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದೆ.

ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಭಾರತೀಯ ವಿದೇಶಾಂಗ ಸಚಿವಾಲಯ ವಕ್ತಾರ ಅರಿಂದಾಮ್ ಬಾಗ್ಚಿ, ಉಕ್ರೇನ್ನಿಂದ ಸುಮಾರು 17,000 ಭಾರತೀಯರು ಗಡಿಗಳನ್ನು ತೊರೆದಿದ್ದಾರೆ ಎಂದು ಅಂದಾಜಿಸಲಾಗಿದೆ.

ಇನ್ನು ಮುಂದಿನ 24 ಗಂಟೆಗಳಲ್ಲಿ ಉಕ್ರೇನ್ ನಿಂದ 15 ವಿಮಾನಗಳು ಭಾರತದತ್ತ ಬರಲಿದ್ದು, ಈಗಾಗಲೇ ಕೆಲವು ಮಾರ್ಗಮಧ್ಯದಲ್ಲಿವೆ ಎಂದು ಮಾಹಿತಿ ನೀಡಿದರು.

ಕಳೆದ 24 ಗಂಟೆಗಳಲ್ಲಿ 6 ವಿಮಾನಗಳು ಸ್ವದೇಶಕ್ಕೆ ಬಂದಿಳಿದೆ.ಇಲ್ಲಿಯವರೆಗೆ 3,352 ಭಾರತೀಯರನ್ನು ಉಕ್ರೇನ್ ನಿಂದ ಸ್ಥಳಾಂತರಿಸಲಾಗಿದೆ ಎಂದರು.

ಆಪರೇಷನ್ ಗಂಗಾ ಕಾರ್ಯಾಚರಣೆಯಲ್ಲಿ ಭಾರತೀಯ ವಾಯುಪಡೆಯ ವಿಮಾನಗಳು ತಮ್ಮ ಸೇವೆ ನೀಡುತ್ತಿದ್ದು, ಬುಚಾರೆಸ್ಟ್ (ರೊಮೇನಿಯಾ) ನಿಂದ ಮೊದಲ ಸಿ-17 ವಿಮಾನ ಈಗಾಗಲೇ ಹೊರಟಿವೆ. ಇಂದು ರಾತ್ರಿ ದೆಹಲಿಗೆ ತಲುಪುವ ನಿರೀಕ್ಷೆಯಿದೆ.

ಇದಲ್ಲದೇ ಬುಡಾಪೆಸ್ಟ್ (ಹಂಗೇರಿ), ಬುಚಾರೆಸ್ಟ್ (ರೊಮೇನಿಯಾ) ಮತ್ತು ರ್ಜೆಸ್ಜೋವ್ (ಪೋಲೆಂಡ್) ಅರಿಂದಾಮ್ ಬಾಗ್ಚಿ ನಿಂದಲೂ ಇನ್ನೂ 3 ಐಎಎಫ್ ವಿಮಾನಗಳು ಉಕ್ರೇನ್ ನಲ್ಲಿರುವ ಭಾರತೀಯರನ್ನು ಕರೆತರಲು ಹೊರಟಿವೆ ಎಂದು ಮಾಹಿತಿ ನೀಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು