8:48 AM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಉಲೈಬೆಟ್ಟು ಕಾಯರಪದವು: ನೀರು ತುಂಬಿದ ಕಲ್ಲಿನ ಕ್ವಾರೆಯಲ್ಲಿ ಈಜಲು ಹೋದ ತರುಣ ಮುಳುಗಿ ಸಾವು

24/07/2022, 23:46

ಮಂಗಳೂರು(reporterkarnataka.com): ನಗರದ ಹೊರವಲಯದ ಉಲೈಬೆಟ್ಟು ಕಾಯರಪದವು ಎಂಬಲ್ಲಿ ಕೆಂಪು ಕಲ್ಲಿನ ಕ್ವಾರೆಯಲ್ಲಿ ಈಜಲು ಹೋದ ಶಿಯಾಬ್ (21) ಎಂಬ ತರುಣ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ.

ಭಾನಯವಾರ ಸಂಜೆ 5-30 ಗಂಟೆಗೆ ಮಂಗಳೂರು ಗ್ರಾಮಾಂತರ ಠಾಣೆ ವ್ಯಾಪ್ತಿಯ ಉಲೈಬೆಟ್ಟು ಕಾಯರಪದವು ಎಂಬಲ್ಲಿ ಶಿಯಾಬ್ ಹಾಗೂ ಆತನ ಗೆಳೆಯರು ಕ್ರಿಕೆಟ್ ಆಟವಾಡಿದ್ದರು..ನಂತರ ಅಲ್ಲಿಯೇ ಆಟದ ಮೈದಾನದ ಪಕ್ಕದ್ದಲ್ಲಿ ಕೆಂಪು ಕಲ್ಲಿನ ಕ್ವಾರೆ ಮಳೆಗಾಲದ ನೀರು ತುಂಬಿದ ಹೊಂಡದಲ್ಲಿ ಈಜಲು ಶಿಯಾಬ್ ಹೋಗಿದ್ದ.ದುರದೃಷ್ಟವಶಾತ್
ಜೋಕಟ್ಟೆ ನಿವಾಸಿಯಾದ ಶಿಯಾಬ್ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು