4:37 PM Friday4 - July 2025
ಬ್ರೇಕಿಂಗ್ ನ್ಯೂಸ್
ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ

ಇತ್ತೀಚಿನ ಸುದ್ದಿ

ಉಳಿತಾಯ ಮಾಡುತ್ತಾ ಜೀವನ ಸಾಗಿಸಿದರೆ ಕುಟುಂಬದ ಆರ್ಥಿಕ ಅಭಿವೃದ್ಧಿ ಸಾಧ್ಯ: ವಿಜ್ಞಾನಿ ಡಾ ಆದರ್ಶ ಗೌಡ

02/08/2024, 20:22

ಸಂತೋಷ್ ಬೆಳಗಾವಿ

info.reporterkarnataka@gmail.com

ಸ್ವಾರ್ಥ ಭಾವನೆ ಬಿಟ್ಟು ಪ್ರಾಮಾಣಿಕವಾಗಿ ಕೆಲಸ ಕಾರ್ಯ ನಿರ್ವಹಿಸುತ್ತಿರುವರಿಗೆ ತಕ್ಕ ಪ್ರತಿಫಲ ಸಿಕ್ಕೇ ಸಿಗುತ್ತದೆ. ಹಣವನ್ನು ವಿನಾಕಾರಣ ಖರ್ಚು ಮಾಡದೆ ಉಳಿತಾಯ ಮಾಡುತ್ತಾ ಜೀವನ ಸಾಗಿಸಿದರೆ ಕುಟುಂಬದ ಆರ್ಥಿಕ ಅಭಿವೃದ್ಧಿಯಾಗುತ್ತದೆ ಎಂದು ಮೀನುಗಾರಿಕಾ ವಿಜ್ಞಾನಿ ಡಾ ಆದರ್ಶ ಗೌಡ ಹೇಳಿದರು.
ಅವರು ಹಳ್ಳೂರ ಗ್ರಾಮದ ಶಿವಶಂಕರ ನಗರದ ಬಾಗೋಡಿ ತೋಟದಲ್ಲಿ ನಡೆದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೃಷಿ ವಿಸ್ತರಣಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಹಣ ಕೂಡಿಸುವ ಸರಿಯಾದ ಮಾರ್ಗ ಹುಡುಕಿ ಸ್ವಾರ್ಥ ಭಾವನೆ ಬಿಟ್ಟು ಇನ್ನೊಬ್ಬರಿಗೆ ಸಹಾಯ, ಸಹಕಾರ ಮಾಡುವ ಮನೋಭಾವ ಬೆಳೆಸಿಕೊಂಡು ಹೋದರೆ ಒಳ್ಳೆಯ ಅವಕಾಶ ಬರುತ್ತವೆ. ಬಡತನವೇ ಕಷ್ಟ ಅಂತ ಹೇಳಿ ಕುಳಿತರೆ ಪ್ರಯೋಜನವಿಲ್ಲ. ಭೂಮಿಯಲ್ಲಿ ಕೃಷಿ ಪದ್ಧತಿ ಅಳವಡಿಸಿಕೊಂಡು ಉತ್ತಮ ಬೆಳೆ ಬೆಳೆದು ಮೌಲ್ಯವರ್ಧನೆ ಮಾಡಿ ಹೆಚ್ಚಿನ ಲಾಭ ಗಳಿಸಬಹುದೆಂದು ಹೇಳಿದರು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಮುರಿಗೆಪ್ಪ ಮಾಲಗಾರ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಾಕಷ್ಟು ಬಡ ಕುಟುಂಬದ ಆರ್ಥಿಕ ಅಭಿವೃದ್ಧಿಯಾಗುತ್ತಿದೆ. ಹಣ ಉಳಿತಾಯ ಮಾಡಲು ಸಾವಿರಾರು ದಾರಿ ಇದೆ. ಮಾಡುವ ಮನಸ್ಸು ಇದ್ದರೆ ಬಡತನ ಮೀರಿ ಯೋಚನೆ ಮಾಡಿದರೆ ಬಡತನ ನಿರ್ಮೂಲನೆ ಆಗುವುದು. ಹೈನುಗಾರಿಕೆ ಸಾಕಷ್ಟು ಜನ ಹೆಚ್ಚು ಲಾಭವನ್ನು ಪಡೆಯಬಹುದು. ಬೇರೆ ಬೇರೆ ರೀತಿಯ ಕೆಲಸ ಕಾರ್ಯ ಮಾಡಬಹುದು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು