1:04 AM Thursday2 - April 2026
ಬ್ರೇಕಿಂಗ್ ನ್ಯೂಸ್
ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;…

ಇತ್ತೀಚಿನ ಸುದ್ದಿ

ಉಳಿತಾಯ ಮಾಡುತ್ತಾ ಜೀವನ ಸಾಗಿಸಿದರೆ ಕುಟುಂಬದ ಆರ್ಥಿಕ ಅಭಿವೃದ್ಧಿ ಸಾಧ್ಯ: ವಿಜ್ಞಾನಿ ಡಾ ಆದರ್ಶ ಗೌಡ

02/08/2024, 20:22

ಸಂತೋಷ್ ಬೆಳಗಾವಿ

info.reporterkarnataka@gmail.com

ಸ್ವಾರ್ಥ ಭಾವನೆ ಬಿಟ್ಟು ಪ್ರಾಮಾಣಿಕವಾಗಿ ಕೆಲಸ ಕಾರ್ಯ ನಿರ್ವಹಿಸುತ್ತಿರುವರಿಗೆ ತಕ್ಕ ಪ್ರತಿಫಲ ಸಿಕ್ಕೇ ಸಿಗುತ್ತದೆ. ಹಣವನ್ನು ವಿನಾಕಾರಣ ಖರ್ಚು ಮಾಡದೆ ಉಳಿತಾಯ ಮಾಡುತ್ತಾ ಜೀವನ ಸಾಗಿಸಿದರೆ ಕುಟುಂಬದ ಆರ್ಥಿಕ ಅಭಿವೃದ್ಧಿಯಾಗುತ್ತದೆ ಎಂದು ಮೀನುಗಾರಿಕಾ ವಿಜ್ಞಾನಿ ಡಾ ಆದರ್ಶ ಗೌಡ ಹೇಳಿದರು.
ಅವರು ಹಳ್ಳೂರ ಗ್ರಾಮದ ಶಿವಶಂಕರ ನಗರದ ಬಾಗೋಡಿ ತೋಟದಲ್ಲಿ ನಡೆದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೃಷಿ ವಿಸ್ತರಣಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಹಣ ಕೂಡಿಸುವ ಸರಿಯಾದ ಮಾರ್ಗ ಹುಡುಕಿ ಸ್ವಾರ್ಥ ಭಾವನೆ ಬಿಟ್ಟು ಇನ್ನೊಬ್ಬರಿಗೆ ಸಹಾಯ, ಸಹಕಾರ ಮಾಡುವ ಮನೋಭಾವ ಬೆಳೆಸಿಕೊಂಡು ಹೋದರೆ ಒಳ್ಳೆಯ ಅವಕಾಶ ಬರುತ್ತವೆ. ಬಡತನವೇ ಕಷ್ಟ ಅಂತ ಹೇಳಿ ಕುಳಿತರೆ ಪ್ರಯೋಜನವಿಲ್ಲ. ಭೂಮಿಯಲ್ಲಿ ಕೃಷಿ ಪದ್ಧತಿ ಅಳವಡಿಸಿಕೊಂಡು ಉತ್ತಮ ಬೆಳೆ ಬೆಳೆದು ಮೌಲ್ಯವರ್ಧನೆ ಮಾಡಿ ಹೆಚ್ಚಿನ ಲಾಭ ಗಳಿಸಬಹುದೆಂದು ಹೇಳಿದರು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಮುರಿಗೆಪ್ಪ ಮಾಲಗಾರ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಾಕಷ್ಟು ಬಡ ಕುಟುಂಬದ ಆರ್ಥಿಕ ಅಭಿವೃದ್ಧಿಯಾಗುತ್ತಿದೆ. ಹಣ ಉಳಿತಾಯ ಮಾಡಲು ಸಾವಿರಾರು ದಾರಿ ಇದೆ. ಮಾಡುವ ಮನಸ್ಸು ಇದ್ದರೆ ಬಡತನ ಮೀರಿ ಯೋಚನೆ ಮಾಡಿದರೆ ಬಡತನ ನಿರ್ಮೂಲನೆ ಆಗುವುದು. ಹೈನುಗಾರಿಕೆ ಸಾಕಷ್ಟು ಜನ ಹೆಚ್ಚು ಲಾಭವನ್ನು ಪಡೆಯಬಹುದು. ಬೇರೆ ಬೇರೆ ರೀತಿಯ ಕೆಲಸ ಕಾರ್ಯ ಮಾಡಬಹುದು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು