5:53 AM Monday16 - February 2026
ಬ್ರೇಕಿಂಗ್ ನ್ಯೂಸ್
ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ…

ಇತ್ತೀಚಿನ ಸುದ್ದಿ

ಉಳಿತಾಯ ಮಾಡುತ್ತಾ ಜೀವನ ಸಾಗಿಸಿದರೆ ಕುಟುಂಬದ ಆರ್ಥಿಕ ಅಭಿವೃದ್ಧಿ ಸಾಧ್ಯ: ವಿಜ್ಞಾನಿ ಡಾ ಆದರ್ಶ ಗೌಡ

02/08/2024, 20:22

ಸಂತೋಷ್ ಬೆಳಗಾವಿ

info.reporterkarnataka@gmail.com

ಸ್ವಾರ್ಥ ಭಾವನೆ ಬಿಟ್ಟು ಪ್ರಾಮಾಣಿಕವಾಗಿ ಕೆಲಸ ಕಾರ್ಯ ನಿರ್ವಹಿಸುತ್ತಿರುವರಿಗೆ ತಕ್ಕ ಪ್ರತಿಫಲ ಸಿಕ್ಕೇ ಸಿಗುತ್ತದೆ. ಹಣವನ್ನು ವಿನಾಕಾರಣ ಖರ್ಚು ಮಾಡದೆ ಉಳಿತಾಯ ಮಾಡುತ್ತಾ ಜೀವನ ಸಾಗಿಸಿದರೆ ಕುಟುಂಬದ ಆರ್ಥಿಕ ಅಭಿವೃದ್ಧಿಯಾಗುತ್ತದೆ ಎಂದು ಮೀನುಗಾರಿಕಾ ವಿಜ್ಞಾನಿ ಡಾ ಆದರ್ಶ ಗೌಡ ಹೇಳಿದರು.
ಅವರು ಹಳ್ಳೂರ ಗ್ರಾಮದ ಶಿವಶಂಕರ ನಗರದ ಬಾಗೋಡಿ ತೋಟದಲ್ಲಿ ನಡೆದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೃಷಿ ವಿಸ್ತರಣಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಹಣ ಕೂಡಿಸುವ ಸರಿಯಾದ ಮಾರ್ಗ ಹುಡುಕಿ ಸ್ವಾರ್ಥ ಭಾವನೆ ಬಿಟ್ಟು ಇನ್ನೊಬ್ಬರಿಗೆ ಸಹಾಯ, ಸಹಕಾರ ಮಾಡುವ ಮನೋಭಾವ ಬೆಳೆಸಿಕೊಂಡು ಹೋದರೆ ಒಳ್ಳೆಯ ಅವಕಾಶ ಬರುತ್ತವೆ. ಬಡತನವೇ ಕಷ್ಟ ಅಂತ ಹೇಳಿ ಕುಳಿತರೆ ಪ್ರಯೋಜನವಿಲ್ಲ. ಭೂಮಿಯಲ್ಲಿ ಕೃಷಿ ಪದ್ಧತಿ ಅಳವಡಿಸಿಕೊಂಡು ಉತ್ತಮ ಬೆಳೆ ಬೆಳೆದು ಮೌಲ್ಯವರ್ಧನೆ ಮಾಡಿ ಹೆಚ್ಚಿನ ಲಾಭ ಗಳಿಸಬಹುದೆಂದು ಹೇಳಿದರು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಮುರಿಗೆಪ್ಪ ಮಾಲಗಾರ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಾಕಷ್ಟು ಬಡ ಕುಟುಂಬದ ಆರ್ಥಿಕ ಅಭಿವೃದ್ಧಿಯಾಗುತ್ತಿದೆ. ಹಣ ಉಳಿತಾಯ ಮಾಡಲು ಸಾವಿರಾರು ದಾರಿ ಇದೆ. ಮಾಡುವ ಮನಸ್ಸು ಇದ್ದರೆ ಬಡತನ ಮೀರಿ ಯೋಚನೆ ಮಾಡಿದರೆ ಬಡತನ ನಿರ್ಮೂಲನೆ ಆಗುವುದು. ಹೈನುಗಾರಿಕೆ ಸಾಕಷ್ಟು ಜನ ಹೆಚ್ಚು ಲಾಭವನ್ನು ಪಡೆಯಬಹುದು. ಬೇರೆ ಬೇರೆ ರೀತಿಯ ಕೆಲಸ ಕಾರ್ಯ ಮಾಡಬಹುದು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು