2:23 AM Thursday20 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಉಳ್ಳಾಲ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಿಂದ ನಾಳೆ ಉಚಿತ ವೈದ್ಯಕೀಯ, ಕಣ್ಣಿನ ಮತ್ತು ದಂತ ತಪಾಸಣಾ ಶಿಬಿರ

14/06/2025, 20:57

ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಉಳ್ಳಾಲ ಶಾಖೆಯ ದಶಮಾನೋತ್ಸವದ ಪ್ರಯುಕ್ತ ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಪ್ರಕಾಶನ ಮತ್ತು ಚಾರಿಟೇಬಲ್ ಟ್ರಸ್ಟ್ (ರಿ.) ಪಡೀಲ್, ಮಂಗಳೂರು, ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸೇವಾ ಸಂಘ (ರಿ.) ಮತ್ತು ಮಹಿಳಾ ವಿಭಾಗ, ಬಂಡಿಕೊಟ್ಯ, ಉಳ್ಳಾಲ ಮತ್ತು ವಿದ್ಯಾರಣ್ಯ ಯುವಕ ವೃಂದ (ರಿ.) ಮತ್ತು ವಿದ್ಯಾರಣ್ಯ ಕಲಾವೃಂದ ಉಳ್ಳಾಲ, ಶಿವಶಕ್ತಿ ಯುವಕ ಮಂಡಲ (ರಿ.) ಉಳ್ಳಾಲ ಇವರ ಜಂಟಿ ಸಹಯೋಗದೊಂದಿಗೆ ಉಚಿತ ವೈದ್ಯಕೀಯ, ಕಣ್ಣಿನ ತಪಾಸಣೆ ಮತ್ತು ದಂತ ತಪಾಸಣಾ ಶಿಬಿರವನ್ನು ಜೂನ್ 15ರಂದು ಭಾನುವಾರ ಪೂರ್ವಾಹ್ನ ಸಮಯ 9.30ರಿಂದ ಮಧ್ಯಾಹ್ನ 12.30ರ ವರೆಗೆ ಸಮುದಾಯ ಭವನ, ಉಳ್ಳಾಲ ನಗರಸಭೆ ಆವರಣ, ಉಳ್ಳಾಲ ಇಲ್ಲಿ ಆಯೋಜಿಸಲಾಗಿದೆ.
ವೈದ್ಯಕೀಯ ಶಿಬಿರದಲ್ಲಿ ಕೆಎಂಸಿ ಆಸ್ಪತ್ರೆ ಅತ್ತಾವರ ಮತ್ತು ಮಣಿಪಾಲ ಕಾಲೇಜ್ ಆಫ್ ಡೆಂಟಲ್ ಸಾಯನ್ಸಸ್, ಮಂಗಳೂರು, ಇವರ ನುರಿತ ವೈದ್ಯರ ತಂಡದಿಂದ ಕಣ್ಣಿನ ತಪಾಸಣೆ, ಅಗತ್ಯವುಳ್ಳವರಿಗೆ ಕಣ್ಣಿನ ಪೊರೆಯ ಶಸ್ತ್ರ ಚಿಕಿತ್ಸೆ, ಮಧುಮೇಹ, ಬಿ.ಪಿ. ತಪಾಸಣೆ, ಸಾಮಾನ್ಯ ವೈದ್ಯಕೀಯ ಸಮಾಲೋಚನೆ, ಕಿವಿ, ಮೂಗು ಮತ್ತು ಗಂಟಲು ತಪಾಸಣೆ, ಅನಾರೋಗ್ಯಕರ ಹಲ್ಲುಗಳನ್ನು ಕೀಳುವುದು, ಹುಳುಕು ಹಲ್ಲುಗಳಿಗೆ ಸಿಮೆಂಟ್ ತುಂಬಿಸುವುದು, ಹಲ್ಲುಗಳನ್ನು ಸ್ವಚ್ಚಗೊಳಿಸುವುದು, ಉಚಿತ ಔಷಧಿ ವಿತರಣೆ, ಇನ್ನಿತರ ವೈದ್ಯಕೀಯ ಸೇವೆಗಳು, ಹೆಚ್ಚಿನ ಚಿಕಿತ್ಸೆಗೆ ಹಸಿರು ಕಾರ್ಡನ್ನು ನೀಡುವುದು ಹಾಗೂ ಸಂಘದ ವತಿಯಿಂದ ಉಚಿತ ಕನ್ನಡಕ ವಿತರಣೆ ಮಾಡಲಾಗುವುದು.
ಸಂಘದ ಸದಸ್ಯರು ಮತ್ತು ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯಬೇಕಾಗಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು