6:51 AM Monday22 - December 2025
ಬ್ರೇಕಿಂಗ್ ನ್ಯೂಸ್
ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ ಉರುಳಿಗೆ ಸಿಲುಕಿ ಹುಲಿ ಸಾವಿನ ಪ್ರಕರಣ: ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ…

ಇತ್ತೀಚಿನ ಸುದ್ದಿ

ಉಳ್ಳಾಲ ಕುಡಿಯುವ ನೀರಿನ ಮೊದಲ ಹಂತದ ಯೋಜನೆ ಉದ್ಘಾಟನೆಗೆ ಮುಖ್ಯಮಂತ್ರಿ ಆಗಮನ: ಸ್ಪೀಕರ್ ಖಾದರ್

14/06/2024, 15:24

ಮಂಗಳೂರು(reporterkarnataka.com): ಚುನಾವಣೆ ಸಂದರ್ಭದಲ್ಲಿ ಕ್ಷೇತ್ರutದ ಜನತೆಗೆ ದಿನದ 24 ಗಂಟೆಯೂ ಕುಡಿಯುವ ನೀರು ಒದಗಿಸುವ ಯೋಜನೆ ಬಗ್ಗೆ ಹೇಳಿದ್ದೆ. ಈಗ ಅದರ ಮೊದಲ ಹಂತದ ಕೆಲಸ ಪೂರ್ಣಗೊಂಡಿದೆ. ಮೊದಲ ಹಂತದ ಉದ್ಘಾಟನೆ ಹಾಗೂ ಎರಡನೇ ಹಂತದ ಕಾಮಗಾರಿಗೆ ಚಾಲನೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಲಿದ್ದಾರೆ ಎಂದು ಸ್ಪೀಕರ್ ಯು.ಟಿ. ಖಾದರ್ ಹೇಳಿದರು.
ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇಡೀ ಉಳ್ಳಾಲ ನಗರಕ್ಕೆ 70 ಲಕ್ಷ ಲೀಟರ್ ನೀರು ಸಂಗ್ರಹಿಸುವ ಸಾಮರ್ಥ್ಯದ ಸಿಂಗಲ್ ಟ್ಯಾಂಕ್ ನಿರ್ಮಾಣವಾಗಿದೆ. ನಗರಾಭಿವೃದ್ಧಿ ಸಚಿವನಾಗಿದ್ದಾಗ ಬಿಡುಗಡೆಯಾದ 249 ಕೋಟಿ ರೂ.ಗಳ ಕಾಮಗಾರಿ ನಡೆದಿದೆ. ಇನ್ನು ಮನೆ ಮನೆಗಳಿಗೆ ನೀರು ಪೂರೈಕೆ ಕೆಲಸ ಆಗಬೇಕಿದೆ ಎಂದರು.
ಕುಡಿಯುವ ನೀರು ಯೋಜನೆಗೆ 386 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಮೊದಲ ಹಂತದ ಉದ್ಘಾಟನೆ ಹಾಗೂ ಎರಡನೇ ಹಂತದ ಚಾಲನೆಗೆ ಸಿಎಂ ಸಿದ್ದರಾಮಯ್ಯ ಅವರು ಆಗಮಿಸುತ್ತಾರೆ. ರಸ್ತೆ, ವಿದ್ಯುತ್, ಶಿಕ್ಷಣಕ್ಕೆ ಅನುದಾನ ಮೀಸಲಿಡಲಾಗಿದೆ. ಅಬ್ಬಕ್ಕ ಭವನ ಹಾಗೂ ಬ್ಯಾರಿ ಭವನ ಕೆಲಸ ಅಗಲಿದೆ. ಕಡಲ್ಕೊರೆತ ಸಂಬಂಧ ಎನ್ಐಟಿಕೆ ಅಧ್ಯಯನದ ವರದಿ ಆಧರಿಸಿ ಕ್ರಮ ಕೈಗೊಳ್ಳಲಾಗುವುದು. ಟೆಕ್ನಿಕಲ್ ಎಕ್ಸ್ ಪರ್ಟ್ ಜೊತೆ ಚರ್ಚಿಸಿ ಕಡಲ್ಕೊರೆತ ತಡೆ ಕಾರ್ಯ ನಡೆಸಲಾಗುವುದು. ಸಮುದ್ರ ಒಂದೊಂದು ಕಡೆ ಒಂದೊಂದು ರೀತಿ ಇರುತ್ತದೆ. ಕೆಲಸ ಆದ ಬಳಿಕ ಸರ್ಕಾರ ಅದರ ನಿರ್ವಹಣೆಗೂ ಹಣ ಕೊಡಬೇಕು. ಸಮುದ್ರದಲ್ಲಿ ಮಾಡಿದ ಕಾರ್ಯಕ್ಕೆ ನಿರ್ವಹಣೆ ಅಗತ್ಯ ಇದೆ. ನಾವು ತಾತ್ಕಾಲಿಕ ಕೆಲಸ ಮಾಡಿ ಮನೆಗಳು ನಾಶ ಆಗದಂತೆ ನೋಡಿದ್ದೇವೆ.
ಈ ಬಾರಿ ಹೆಚ್ಚು ಅಪಾಯ ಇರೋ ಜಾಗಗಳಲ್ಲಿ ಕೆಲಸ ಮಾಡಲು ಸೂಚಿಸಲಾಗಿದೆ.
ಉಚ್ಚಿಲದ ಬಟ್ಟಪಾಡಿ ಕಡಲ ತೀರ ರಕ್ಷಣೆಯ ಕೆಲಸ ಆಗಬೇಕಿದೆ. ಇದಕ್ಕಾಗಿ ಎನ್ ಐಟಿಕೆ ಅಧ್ಯಯನ ಮಾಡಲು ಸೂಚಿಸಲಾಗಿದೆ ಎಂದು ಸ್ಪೀಕರ್ ಹೇಳಿದರು.
ಬಾಂಬೆಯಿಂದ ಕೊಚ್ಚಿಗೆ ಹೋಗುವ ಕ್ರೂಸ್ ಗೆ ಮಂಗಳೂರಿನಲ್ಲಿ ವ್ಯವಸ್ಥೆ ಬೇಕಾಗಿದೆ. ಸೋಮೇಶ್ವರದಲ್ಲಿ ಟೂರಿಸಂ ಬಂದರು ನಿರ್ಮಾಣದ ಯೋಜನೆ ಮಾಡಲಾಗಿದೆ. ರಾಜ್ಯ ಸರ್ಕಾರದಿಂದ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಅವರು ನುಡಿದರು.
ನಾನು ಸಚಿವನಾಗಿದ್ದಾಗ ಜಿಲ್ಲೆಯಲ್ಲಿ ಎಲ್ಲಾ ಸ್ಕಿಲ್ ಗೇಮ್, ಮಸಾಜ್ ಪಾರ್ಲರ್ ಬಂದ್ ಮಾಡಿಸಿದ್ದೇನೆ. ತುಂಬಾ ಒತ್ತಡ ಇದ್ದರೂ ನಾನು ಎಲ್ಲ ಅಕ್ರಮ ಬಂದ್ ಮಾಡಿಸಿದೆ. ನಾನು ಸಚಿವ ಆಗಿದ್ದಾಗ ಎಲ್ಲವೂ ಸಂಪೂರ್ಣ ಬಂದ್ ಆಗಿತ್ತು.
ಆದರೆ ಹೊಸ ಸರ್ಕಾರ ಬಂದು ಮತ್ತೊಬ್ಬರು ಸಚಿವರಾದರು. ಆಗ ಯಾರು ಅದನ್ನ ನಿಲ್ಲಿಸೋ ಕೆಲಸ ಮಾಡಿಲ್ಲ.‌ಈಗ ನನ್ನ ಕ್ಷೇತ್ರದಲ್ಲಿ ಅದನ್ನ ನಿಲ್ಲಿಸಿದ್ದೇನೆ. ಯಾವುದೇ ಅಕ್ರಮ ಇಲ್ಲ. ಉಳಿದಂತೆ‌ ಬೇರೆ ಕಡೆ ಇದ್ದರೆ ಅದಕ್ಕೆ ನಾನು ಏನು ಮಾಡೋದು?. ನಾನು ಅಧಿಕಾರದಲ್ಲಿದ್ದಾಗ ಸಂಪೂರ್ಣ ಕೆಲಸ ಮಾಡಿದ್ದೇನೆ. ಹಿಂದಿನ ಉಸ್ತುವಾರಿ ಸಚಿವರು ಎಷ್ಟು ಬಾರಿ ಮಂಗಳೂರಿನಲ್ಲಿ ಸಭೆ ಮಾಡಿದ್ದಾರೆ. ಈಗಿನ ಸಚಿವರು ಬೆಂಗಳೂರು ಹಾಗೂ ಜಿಲ್ಲೆಯಲ್ಲಿ ಸಭೆ ಮಾಡ್ತಾರೆ. ಹಿಂದಿನ ಸಚಿವರು ಯಾರ ಕೈಗಾದ್ರೂ ಸಿಗ್ತಾ ಇದ್ರಾ? ಎಂದು ಅವರು ಪ್ರಶ್ನಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು