9:32 PM Saturday1 - November 2025
ಬ್ರೇಕಿಂಗ್ ನ್ಯೂಸ್
ನವಕಲಬುರಗಿ ನಿರ್ಮಾಣಕ್ಕೆ ನೀಲಿ ನಕ್ಷೆ ಸಿದ್ದ, ಲೀಪ್ ಯೋಜನೆಯ ಅಡಿಯಲ್ಲಿ ಅಭಿವೃದ್ದಿಗೆ ಒತ್ತು:… ಡಿಜಿಟಲ್ ಅರೆಸ್ಟ್ ಮೂಲಕ ಹಣ ವರ್ಗಾವಣೆಯಾಗದಂತೆ ತಡೆದ ಪೊಲೀಸರು: ಮಂಗಳೂರು ಪೊಲೀಸರ ಕಾರ್ಯಕ್ಕೆ… Kodagu | ಪೊನ್ನಂಪೇಟೆಯಲ್ಲಿ ಮಿತಿ ಮೀರಿದ ಬೀದಿ ನಾಯಿ ಹಾವಳಿ: ಶ್ವಾನ ದಾಳಿಗೆ… ರಾಜ್ಯ ಸರ್ಕಾರ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡದಿದ್ದರೆ ರೈತರ ಚಳವಳಿ ಎದುರಿಸಬೇಕಾಗುತ್ತದೆ:… Bangalore | ರಾಜ್ಯದಲ್ಲಿ‌ ಕುಡಿಯುವ ನೀರು, ಒಳಚರಂಡಿ ಯೋಜನೆ: ಕೇಂದ್ರಕ್ಕೆ 6,500 ಕೋಟಿ… ಸೋಮವಾರಪೇಟೆ | ಸುಮಾರು 2.4 ಲಕ್ಷ ರೂ. ಮೌಲ್ಯದ ಕಾಳು ಮೆಣಸು ಕಳ್ಳತನ:… ಸಂವಿಧಾನ ರಕ್ಷಣೆ | ರಾಹುಲ್ ಗಾಂಧಿ, ಸಿದ್ದರಾಮಯ್ಯ ಹೇಳುವುದು ಆಚಾರ, ತಿನ್ನುವುದು ಬದನೆಕಾಯಿ:… ಕನ್ನಡ ರಾಜ್ಯೋತ್ಸವ ಆಚರಣೆಗೆ ಅವಕಾಶ ನೀಡದ ಕೇಂದ್ರ ಸಂಸ್ಥೆಗಳ ವಿರುದ್ಧ ಕ್ರಮಕ್ಕೆ ಶಿಫಾರಸ್ಸು:… Kodagu | ಮಡಿಕೇರಿ: 15 ದಿನಗಳಿಂದ ನಾಪತ್ತೆಯಾಗಿದ್ದ ಯುವಕ ಕೊನೆಗೂ ಕಾಡಿನಲ್ಲಿ ಪತ್ತೆ ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ ಮಾಡುವುದಿಲ್ಲ: ಮಾಜಿ ಸಚಿವ ರೇಣುಕಾಚಾರ್ಯ ಭವಿಷ್ಯ

ಇತ್ತೀಚಿನ ಸುದ್ದಿ

ಉಳ್ಳಾಲ ಕುಡಿಯುವ ನೀರಿನ ಮೊದಲ ಹಂತದ ಯೋಜನೆ ಉದ್ಘಾಟನೆಗೆ ಮುಖ್ಯಮಂತ್ರಿ ಆಗಮನ: ಸ್ಪೀಕರ್ ಖಾದರ್

14/06/2024, 15:24

ಮಂಗಳೂರು(reporterkarnataka.com): ಚುನಾವಣೆ ಸಂದರ್ಭದಲ್ಲಿ ಕ್ಷೇತ್ರutದ ಜನತೆಗೆ ದಿನದ 24 ಗಂಟೆಯೂ ಕುಡಿಯುವ ನೀರು ಒದಗಿಸುವ ಯೋಜನೆ ಬಗ್ಗೆ ಹೇಳಿದ್ದೆ. ಈಗ ಅದರ ಮೊದಲ ಹಂತದ ಕೆಲಸ ಪೂರ್ಣಗೊಂಡಿದೆ. ಮೊದಲ ಹಂತದ ಉದ್ಘಾಟನೆ ಹಾಗೂ ಎರಡನೇ ಹಂತದ ಕಾಮಗಾರಿಗೆ ಚಾಲನೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಲಿದ್ದಾರೆ ಎಂದು ಸ್ಪೀಕರ್ ಯು.ಟಿ. ಖಾದರ್ ಹೇಳಿದರು.
ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇಡೀ ಉಳ್ಳಾಲ ನಗರಕ್ಕೆ 70 ಲಕ್ಷ ಲೀಟರ್ ನೀರು ಸಂಗ್ರಹಿಸುವ ಸಾಮರ್ಥ್ಯದ ಸಿಂಗಲ್ ಟ್ಯಾಂಕ್ ನಿರ್ಮಾಣವಾಗಿದೆ. ನಗರಾಭಿವೃದ್ಧಿ ಸಚಿವನಾಗಿದ್ದಾಗ ಬಿಡುಗಡೆಯಾದ 249 ಕೋಟಿ ರೂ.ಗಳ ಕಾಮಗಾರಿ ನಡೆದಿದೆ. ಇನ್ನು ಮನೆ ಮನೆಗಳಿಗೆ ನೀರು ಪೂರೈಕೆ ಕೆಲಸ ಆಗಬೇಕಿದೆ ಎಂದರು.
ಕುಡಿಯುವ ನೀರು ಯೋಜನೆಗೆ 386 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಮೊದಲ ಹಂತದ ಉದ್ಘಾಟನೆ ಹಾಗೂ ಎರಡನೇ ಹಂತದ ಚಾಲನೆಗೆ ಸಿಎಂ ಸಿದ್ದರಾಮಯ್ಯ ಅವರು ಆಗಮಿಸುತ್ತಾರೆ. ರಸ್ತೆ, ವಿದ್ಯುತ್, ಶಿಕ್ಷಣಕ್ಕೆ ಅನುದಾನ ಮೀಸಲಿಡಲಾಗಿದೆ. ಅಬ್ಬಕ್ಕ ಭವನ ಹಾಗೂ ಬ್ಯಾರಿ ಭವನ ಕೆಲಸ ಅಗಲಿದೆ. ಕಡಲ್ಕೊರೆತ ಸಂಬಂಧ ಎನ್ಐಟಿಕೆ ಅಧ್ಯಯನದ ವರದಿ ಆಧರಿಸಿ ಕ್ರಮ ಕೈಗೊಳ್ಳಲಾಗುವುದು. ಟೆಕ್ನಿಕಲ್ ಎಕ್ಸ್ ಪರ್ಟ್ ಜೊತೆ ಚರ್ಚಿಸಿ ಕಡಲ್ಕೊರೆತ ತಡೆ ಕಾರ್ಯ ನಡೆಸಲಾಗುವುದು. ಸಮುದ್ರ ಒಂದೊಂದು ಕಡೆ ಒಂದೊಂದು ರೀತಿ ಇರುತ್ತದೆ. ಕೆಲಸ ಆದ ಬಳಿಕ ಸರ್ಕಾರ ಅದರ ನಿರ್ವಹಣೆಗೂ ಹಣ ಕೊಡಬೇಕು. ಸಮುದ್ರದಲ್ಲಿ ಮಾಡಿದ ಕಾರ್ಯಕ್ಕೆ ನಿರ್ವಹಣೆ ಅಗತ್ಯ ಇದೆ. ನಾವು ತಾತ್ಕಾಲಿಕ ಕೆಲಸ ಮಾಡಿ ಮನೆಗಳು ನಾಶ ಆಗದಂತೆ ನೋಡಿದ್ದೇವೆ.
ಈ ಬಾರಿ ಹೆಚ್ಚು ಅಪಾಯ ಇರೋ ಜಾಗಗಳಲ್ಲಿ ಕೆಲಸ ಮಾಡಲು ಸೂಚಿಸಲಾಗಿದೆ.
ಉಚ್ಚಿಲದ ಬಟ್ಟಪಾಡಿ ಕಡಲ ತೀರ ರಕ್ಷಣೆಯ ಕೆಲಸ ಆಗಬೇಕಿದೆ. ಇದಕ್ಕಾಗಿ ಎನ್ ಐಟಿಕೆ ಅಧ್ಯಯನ ಮಾಡಲು ಸೂಚಿಸಲಾಗಿದೆ ಎಂದು ಸ್ಪೀಕರ್ ಹೇಳಿದರು.
ಬಾಂಬೆಯಿಂದ ಕೊಚ್ಚಿಗೆ ಹೋಗುವ ಕ್ರೂಸ್ ಗೆ ಮಂಗಳೂರಿನಲ್ಲಿ ವ್ಯವಸ್ಥೆ ಬೇಕಾಗಿದೆ. ಸೋಮೇಶ್ವರದಲ್ಲಿ ಟೂರಿಸಂ ಬಂದರು ನಿರ್ಮಾಣದ ಯೋಜನೆ ಮಾಡಲಾಗಿದೆ. ರಾಜ್ಯ ಸರ್ಕಾರದಿಂದ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಅವರು ನುಡಿದರು.
ನಾನು ಸಚಿವನಾಗಿದ್ದಾಗ ಜಿಲ್ಲೆಯಲ್ಲಿ ಎಲ್ಲಾ ಸ್ಕಿಲ್ ಗೇಮ್, ಮಸಾಜ್ ಪಾರ್ಲರ್ ಬಂದ್ ಮಾಡಿಸಿದ್ದೇನೆ. ತುಂಬಾ ಒತ್ತಡ ಇದ್ದರೂ ನಾನು ಎಲ್ಲ ಅಕ್ರಮ ಬಂದ್ ಮಾಡಿಸಿದೆ. ನಾನು ಸಚಿವ ಆಗಿದ್ದಾಗ ಎಲ್ಲವೂ ಸಂಪೂರ್ಣ ಬಂದ್ ಆಗಿತ್ತು.
ಆದರೆ ಹೊಸ ಸರ್ಕಾರ ಬಂದು ಮತ್ತೊಬ್ಬರು ಸಚಿವರಾದರು. ಆಗ ಯಾರು ಅದನ್ನ ನಿಲ್ಲಿಸೋ ಕೆಲಸ ಮಾಡಿಲ್ಲ.‌ಈಗ ನನ್ನ ಕ್ಷೇತ್ರದಲ್ಲಿ ಅದನ್ನ ನಿಲ್ಲಿಸಿದ್ದೇನೆ. ಯಾವುದೇ ಅಕ್ರಮ ಇಲ್ಲ. ಉಳಿದಂತೆ‌ ಬೇರೆ ಕಡೆ ಇದ್ದರೆ ಅದಕ್ಕೆ ನಾನು ಏನು ಮಾಡೋದು?. ನಾನು ಅಧಿಕಾರದಲ್ಲಿದ್ದಾಗ ಸಂಪೂರ್ಣ ಕೆಲಸ ಮಾಡಿದ್ದೇನೆ. ಹಿಂದಿನ ಉಸ್ತುವಾರಿ ಸಚಿವರು ಎಷ್ಟು ಬಾರಿ ಮಂಗಳೂರಿನಲ್ಲಿ ಸಭೆ ಮಾಡಿದ್ದಾರೆ. ಈಗಿನ ಸಚಿವರು ಬೆಂಗಳೂರು ಹಾಗೂ ಜಿಲ್ಲೆಯಲ್ಲಿ ಸಭೆ ಮಾಡ್ತಾರೆ. ಹಿಂದಿನ ಸಚಿವರು ಯಾರ ಕೈಗಾದ್ರೂ ಸಿಗ್ತಾ ಇದ್ರಾ? ಎಂದು ಅವರು ಪ್ರಶ್ನಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು