2:03 PM Monday20 - July 2026
ಬ್ರೇಕಿಂಗ್ ನ್ಯೂಸ್
ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ… ಬಂಟ್ವಾಳ, ಬಾದಾಮಿ ಸಹಿತ ರಾಜ್ಯದ 4 ರೈಲು ನಿಲ್ದಾಣಗಳಿಗೆ ನ್ಯೂ ಲುಕ್: ಏರ್‌ಪೋರ್ಟ್… ಕೊಡಗಿನಲ್ಲಿ ಅಕ್ರಮ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಗುಂಡೇಟು: ಮಾಲು ಸಮೇತ ಇಬ್ಬರು… ವಿರಾಜಪೇಟೆ | ಬೇತ್ರಿ ಸೇತುವೆ ಮೇಲಿಂದ ಯುವತಿಯ ಕಾವೇರಿ ನದಿಗೆ ತಳ್ಳಿ ಕೊಲೆಗೆ… ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ… ಮೂಡಿಗೆರೆ ಕಾಂಗ್ರೆಸ್ ನಲ್ಲಿ ಶೀತಲ ಸಮರ: ಚಿಕ್ಕಮಗಳೂರಿನಲ್ಲಿ ಭಿನ್ನಮತೀಯರ ಸಭೆ; ಶಾಸಕಿ ನಯನಾ…

ಇತ್ತೀಚಿನ ಸುದ್ದಿ

ಉಳ್ಳಾಲ: ಮನೆ ಮೇಲೆ ಆವರಣ ಗೋಡೆ ಕುಸಿದು ಒಂದೇ ಕುಟುಂಬದ 4 ಮಂದಿ ದಾರುಣ ಸಾವು; ಸ್ಪೀಕರ್ ಖಾದರ್ ಸ್ಥಳಕ್ಕೆ ದೌಡು

26/06/2024, 11:40

ಮಂಗಳೂರು(reporterkarnataka.com): ಮನೆ ಮೇಲೆ ಕಾಂಪೌಂಡ್ ಕುಸಿದು ಬಿದ್ದು ಮಕ್ಕಳು ಸಹಿತ ನಾಲ್ವರು ಸಾವನ್ನಪ್ಪಿದ ದಾರುಣ ಘಟನೆ
ಕುತ್ತಾರು ಸಮೀಪ ಮದನಿ ನಗರದಲ್ಲಿ ಬುಧವಾರ ನಡೆದಿದೆ.
ಉಳ್ಳಾಲ ತಾಲೂಕಿನ ಮುನ್ನೂರು ಗ್ರಾಮದ ಕುತ್ತಾರು ಸಮೀಪ ಮದನಿ ನಗರ ಎಂಬಲ್ಲಿ ಬುಧವಾರ ಮನೆಯ ಹಿಂಬದಿಯ ಗೋಡೆ ಕುಸಿದು ಬಿದ್ದ ಪರಿಣಾಮ ಈ ದುರ್ಘಟನೆ ನಡೆದಿದೆ.


ಮನೆಯೊಳಗಿದ್ದ ಯಾಸಿರ್ (45), ಪತ್ನಿ ಮಾರಿಯಮ್ಮ( 40), ಮಕ್ಕಳಾದ ರಿಯನ ಮತ್ತು ರೀಫನಾ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಡೌಡಾಯಿಸಿದ್ದಾರೆ. ಸ್ಥಳೀಯರ ಸಹಾಯದಿಂದ ಶವವನ್ನು ಹೊರ ತೆಗೆಯುವ ಕಾರ್ಯ ನಡೆಯುತ್ತಿದೆ.
ಜಿಲ್ಲಾಧಿಕಾರಿ ಕಚೇರಿ ನಡೆಯಲಿರುವ ಪ್ರಗತಿ ಪರಿಶೀನ ಸಭೆ ಆಗಮಿಸಿದ್ದ ಸ್ಪೀಕರ್ ಯು. ಟಿ. ಖಾದರ್ ನೇರವಾಗಿ ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು