7:09 AM Friday28 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಉಳ್ಳಾಲ: ಹಾಸನ ಮೂಲದ ಬೆಂಗಳೂರು ನಿವಾಸಿ ಯುವಕನ ಮೃತದೇಹ ತೊಕ್ಕೊಟ್ಟು ಬಾವಿಯಲ್ಲಿ ಪತ್ತೆ

05/12/2022, 14:31

ಉಳ್ಳಾಲ(reporterkarnataka.com):
ತೊಕ್ಕೊಟ್ಟು ಸಮೀಪದ ಬಾವಿಯೊಂದರಲ್ಲಿ ಬೆಂಗಳೂರು ಮೂಲದ ಯುವಕನೊಬ್ಬನ ಮೃತದೇಹ ಪತ್ತೆಯಾಗಿದೆ.

ಉಳ್ಳಾಲ ಪೊಲೀಸರು, ಅಗ್ನಿಶಾಮಕ ದಳದ ಸಹಕಾರದಿಂದ ಮೃತದೇಹ ಮೇಲಕ್ಕೆತ್ತಿದ್ದಾರೆ.

ಮೃತ ವ್ಯಕ್ತಿಯನ್ನು ಮೂಲತಃ ಹಾಸನ ಜಿಲ್ಲೆಯ ಅರಸೀಕೆರೆ ನಿವಾಸಿ, ಸದ್ಯ ಬೆಂಗಳೂರಿನಲ್ಲಿ ವಾಸವಾಗಿರುವ ಮಹಂತೇಶ್ ಎ.ಎಸ್‌ (36) ಎಂದು ಗುರುತಿಸಲಾಗಿದೆ.

ಬೆಂಗಳೂರಿನಿಂದ ತೊಕ್ಕೊಟ್ಟು ಬಂದಿದ್ದ ಮಹಾಂತೇಶ್ ರಾ.ಹೆ.66 ರಲ್ಲಿರುವ ಕಾಪಿಕಾಡಿನ ನಿರ್ವಿಕಲ್ಪ ಲಾಡ್ಜ್ ನಲ್ಲಿ ತಂಗಿದ್ದರು. ಅಂದು ರಾತ್ರಿ ಅಲ್ಲಿಂದ ತೆರಳಿದವರು ವಾಪಸ್ಸಾಗಿರಲಿಲ್ಲ.ಡಿ.1 ರಂದು ಸಂಜೆ ಲಾಡ್ಜ್ ರೂಮಿನ ಅವಧಿ ಮುಗಿದ ಹಿನ್ನೆಲೆ ರೂಮ್ ಬಾಯ್ ರೂಮಿಗೆ ಬಂದು ತಪಾಸಣೆ ನಡೆಸಿದಾಗ ಮಹಾಂತೇಶ್ ಇರಲಿಲ್ಲ. ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು.

ನ.2 ರಂದು ಬೆಂಗಳೂರಿನ ಮಹಾಂತೇಶ್ ಸಹೋದರಿ ಉಳ್ಳಾಲ ಠಾಣೆಯಲ್ಲಿ ಸಹೋದರ ನಾಪತ್ತೆ ಕುರಿತು ದೂರು ದಾಖಲಿಸಿದ್ದಾರೆ. ಇಂದು ಮಧ್ಯಾಹ್ನದ ವೇಳೆಗೆ ಅಂಬಿಕಾ ರೋಡ್ ಹೆದ್ದಾರಿ ಅಂಚಿನಲ್ಲಿರುವ ಅಬ್ದುಲ್ ಸಮದ್ ಎಂಬವರ ಮನೆಯ ಹಿಂದಿನ ಬಾವಿಯಲ್ಲಿ ಮಹಂತೇಶ್ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸಮದ್ ಮನೆ ಕೆಲಸದಾಕೆ ಸುಗಂಧಿ ಎಂಬವರು ಬಾವಿಯೊಳಗೆ ದುರ್ವಾಸನೆ ಬರುತ್ತಿರುವುದನ್ನ ಗ್ರಹಿಸಿ ಬಾವಿ ನೋಡಿದಾಗ ಅಪರಿಚಿತ ವ್ಯಕ್ತಿಯ ಶವ ಕಂಡು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು