5:22 PM Tuesday31 - March 2026
ಬ್ರೇಕಿಂಗ್ ನ್ಯೂಸ್
ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್… ಗ್ಯಾಸ್ ಸಿಲಿಂಡರ್ ಗೆ ರೆಗ್ಯುಲೇಟರಿ ಅಳವಡಿಸುವಾಗ ಏಕಾಏಕಿ ಸ್ಫೋಟ: ಮನೆ ಛಿದ್ರಛಿದ್ರ; 4… ಭಕ್ತ ಸಾಗರದ ಹರ್ಷೋದ್ಗಾರದೊಂದಿಗೆ ನಡೆದ ನಂಜನಗೂಡಿನ ದೊಡ್ಡ ಜಾತ್ರೆ: ಶ್ರೀ ಗೌತಮ ಪಂಚ… ನಿಯಂತ್ರಣ ತಪ್ಪಿದ ಸರಕಾರಿ ಬಸ್: ಮಡಿಕೇರಿ ಬಸ್ ನಿಲ್ದಾಣದಲ್ಲಿ ತಪ್ಪಿದ ಭಾರಿ ದುರಂತ Madikeri | ಕೊಡಗು ಜಿಲ್ಲೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ. ಎಂ.…

ಇತ್ತೀಚಿನ ಸುದ್ದಿ

ಉಳ್ಳಾಲ ಲಕ್ಷ್ಮೀ ನರಸಿಂಹ ದೇವಳಕ್ಕೆ ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿ ಆಗಮನ  

07/06/2022, 17:41

ಚಿತ್ರ : ಮಂಜು ನೀರೇಶ್ವಾಲ್ಯ

ಮಂಗಳೂರು(reporterkarnataka.com): ಉಳ್ಳಾಲ ಕ್ಷೇತ್ರದ ತಿರುಮಲ ತಥಾ ಶ್ರೀ ಲಕ್ಷ್ಮೀ ನರಸಿಂಹ ದೇವಸ್ಥಾನದ ಪುನಃ ಪ್ರತಿಷ್ಠಾ ಶತಮಾನೋತ್ಸವ ಪ್ರಯುಕ್ತ ಶ್ರೀ ದೇವಳದಲ್ಲಿ ಶ್ರೀ ಮಹಾ ವಿಷ್ಣು ಯಾಗ ಆಯೋಜಿಸಲಾಗಿದ್ದು, ಈ ಕಾರ್ಯಕ್ರಮಕ್ಕೆ ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರು ಶ್ರೀ ದೇವಳಕ್ಕೆ ಚಿತ್ತೈಸಿದರು.


ಶ್ರೀಗಳವರಿಗೆ ಉಳ್ಳಾಲ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಸಮಾಜ ಭಾಂಧವರು ಪೂರ್ಣ ಕುಂಭ ಸ್ವಾಗತದಿಂದ ಬರಮಾಡಿಕೊಂಡರು . ಶ್ರೀ ಮಹಾ ವಿಷ್ಣು ಯಾಗವು ಸೋಮವಾರದಿಂದ ಪ್ರಾರಂಭಗೊಂಡಿದ್ದು ಬುಧವಾರದವರೆಗೆ ನಡೆಯಲಿರುವುದು . ದಿನಾಂಕ ೦೮ . ೦೬ . ೨೦೨೨ ರಂದು ಶ್ರೀಗಳವರ ಅಮೃತ ಹಸ್ತಗಳಿಂದ ಮಹಾ ಪೂರ್ಣಾಹುತಿ ನಡೆಯಲಿರುವುದು . ಮಂಗಳವಾರ ಶ್ರೀಗಳವರಿಂದ ಸಮಾಜ ಬಾಂಧವರಿಗೆ ತಪ್ತ ಮುದ್ರಾಧಾರಣೆ , ಶ್ರೀದೇವರಿಗೆ ಶತ ಕಲಶಾಭಿಷೇಕ ನಡೆಯಲಿರುವುದು . ಈ ಎಲ್ಲಾ ಕಾರ್ಯಕ್ರಮದಲ್ಲಿ ಸಮಾಜ ಬಾಂಧವರು ಪಾಲ್ಗೊಳ್ಳಬೇಕಾಗಿ ದೇವಳದ ಆಡಳಿತ ಮಂಡಳಿ ವಿನಂತಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು