6:44 AM Thursday12 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಉಳ್ಳಾಲ ಲಕ್ಷ್ಮೀ ನರಸಿಂಹ ದೇವಳಕ್ಕೆ ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿ ಆಗಮನ  

07/06/2022, 17:41

ಚಿತ್ರ : ಮಂಜು ನೀರೇಶ್ವಾಲ್ಯ

ಮಂಗಳೂರು(reporterkarnataka.com): ಉಳ್ಳಾಲ ಕ್ಷೇತ್ರದ ತಿರುಮಲ ತಥಾ ಶ್ರೀ ಲಕ್ಷ್ಮೀ ನರಸಿಂಹ ದೇವಸ್ಥಾನದ ಪುನಃ ಪ್ರತಿಷ್ಠಾ ಶತಮಾನೋತ್ಸವ ಪ್ರಯುಕ್ತ ಶ್ರೀ ದೇವಳದಲ್ಲಿ ಶ್ರೀ ಮಹಾ ವಿಷ್ಣು ಯಾಗ ಆಯೋಜಿಸಲಾಗಿದ್ದು, ಈ ಕಾರ್ಯಕ್ರಮಕ್ಕೆ ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರು ಶ್ರೀ ದೇವಳಕ್ಕೆ ಚಿತ್ತೈಸಿದರು.


ಶ್ರೀಗಳವರಿಗೆ ಉಳ್ಳಾಲ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಸಮಾಜ ಭಾಂಧವರು ಪೂರ್ಣ ಕುಂಭ ಸ್ವಾಗತದಿಂದ ಬರಮಾಡಿಕೊಂಡರು . ಶ್ರೀ ಮಹಾ ವಿಷ್ಣು ಯಾಗವು ಸೋಮವಾರದಿಂದ ಪ್ರಾರಂಭಗೊಂಡಿದ್ದು ಬುಧವಾರದವರೆಗೆ ನಡೆಯಲಿರುವುದು . ದಿನಾಂಕ ೦೮ . ೦೬ . ೨೦೨೨ ರಂದು ಶ್ರೀಗಳವರ ಅಮೃತ ಹಸ್ತಗಳಿಂದ ಮಹಾ ಪೂರ್ಣಾಹುತಿ ನಡೆಯಲಿರುವುದು . ಮಂಗಳವಾರ ಶ್ರೀಗಳವರಿಂದ ಸಮಾಜ ಬಾಂಧವರಿಗೆ ತಪ್ತ ಮುದ್ರಾಧಾರಣೆ , ಶ್ರೀದೇವರಿಗೆ ಶತ ಕಲಶಾಭಿಷೇಕ ನಡೆಯಲಿರುವುದು . ಈ ಎಲ್ಲಾ ಕಾರ್ಯಕ್ರಮದಲ್ಲಿ ಸಮಾಜ ಬಾಂಧವರು ಪಾಲ್ಗೊಳ್ಳಬೇಕಾಗಿ ದೇವಳದ ಆಡಳಿತ ಮಂಡಳಿ ವಿನಂತಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು