11:30 AM Tuesday3 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಉಳ್ಳಾಲ: ಮಾಜಿ ಶಾಸಕರ ಪುತ್ರನ ನಿವಾಸಕ್ಕೆ ಎನ್ಐಎ ದಾಳಿ;ಐಸಿಸ್‌ ಸಂಘಟನೆಯ ಜತೆ ಸಂಪರ್ಕ ಶಂಕೆ

04/08/2021, 12:48

ಮಂಗಳೂರು(reporterkarnataka.com) : 

ಮಂಗಳೂರು(ಉಳ್ಳಾಲ)ಕ್ಷೇತ್ರದ ಮಾಜಿ ಶಾಸಕರೊಬ್ಬರ ಪುತ್ರನ ಮನೆಯ ಮೇಲೆ ಬುಧವಾರ ಎನ್ ಐಎ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಐಸಿಸ್‌ ಸಂಘಟನೆಯ ಜತೆ ಇದೆಯೆನ್ನಲಾದ ನಂಟಿನ ಆರೋಪದ ಕುರಿತು ತನಿಖೆ ನಡೆಸುತ್ತಿದ್ದಾರೆ.

ಮಾಜಿ ಶಾಸಕ ಬಿ.ಎಂ. ಇದಿನಬ್ಬ ಪುತ್ರ ಬಿ.ಎಂ.ಬಾಷಾ ಅವರ ಉಳ್ಳಾಲದ ಮಾಸ್ತಿಕಟ್ಟೆ ಬಳಿ ಇರುವ ನಿವಾಸ ಮೇಲೆ ಇಂದು ಮುಂಜಾನೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸುಮಾರು 20ಕ್ಕೂ ಅಧಿಕ ಮಂದಿ ಇದ್ದ ಅಧಿಕಾರಿಗಳ ತಂಡ ಈ ದಾಳಿಯನ್ನು ನಡೆಸಿದೆ.ಸಿರಿಯಾ ಮೂಲದ ಐಸಿಸ್‌ ಸಂಘಟನೆಯ ಜೊತೆ ನಂಟು ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎನ್ನಲಾಗುತ್ತಿದೆ.

ಮಂಗಳೂರು ನಗರ ಪೊಲೀಸರು ಕೂಡ ಎನ್‌ಐಎ ತಂಡಕ್ಕ ಸಾಥ್ ನೀಡಿದ್ದಾರೆ. ಎನ್‌ಐಎ ಅಧಿಕಾರಿಗಳ ತಂಡ ಮನೆಯಲ್ಲಿ ಪರಿಶೀಲನೆಯನ್ನು ನಡೆಸುತ್ತಿದ್ದು, ಕುಟುಂಬಸ್ಥರಿಂದ ಮಾಹಿತಿಯನ್ನು ಕಲೆ ಹಾಕುತ್ತಿದೆ.

ಭಾಷಾ ಅವರ ಮೊಮ್ಮಗಳ ವಿವಾಹ ಕಾಸರಗೋಡು ಮೂಲದ ಸಿಯಾಝ್‌ ಎಂಬಾತನ ಜತೆಗೆ ನಡೆದಿತ್ತು. ಆಕೆಯ ಪತಿ ಸಿರಿಯಾ ಮೂಲದ ಉಗ್ರ ಸಂಘಟನೆಯ ಜತೆಗೆ ಸಂಪರ್ಕ ಹೊಂದಿದ್ದಾನೆ ಎಂದು ಆರೋಪಿಸಲಾಗಿದೆ. ಆತ ಮಗು ಹಾಗೂ ಪತಿಯೊಂದಿಗೆ ಶ್ರೀಲಂಕಾ ಮಾರ್ಗವಾಗಿ ಕತಾರ್‌ಗೆ ತೆರಳಿ ಅಲ್ಲಿಂದ ಸಿರಿಯಾದಲ್ಲಿ ಐಸಿಎಸ್‌ ಸಂಘಟನೆ ಸೇರಿಕೊಂಡಿದ್ದಾನೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದೆ ಎನ್ನಲಾಗುತ್ತಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು