9:02 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಉಳ್ಳಾಲ: ಮಾಜಿ ಶಾಸಕರ ಪುತ್ರನ ನಿವಾಸಕ್ಕೆ ಎನ್ಐಎ ದಾಳಿ;ಐಸಿಸ್‌ ಸಂಘಟನೆಯ ಜತೆ ಸಂಪರ್ಕ ಶಂಕೆ

04/08/2021, 12:48

ಮಂಗಳೂರು(reporterkarnataka.com) : 

ಮಂಗಳೂರು(ಉಳ್ಳಾಲ)ಕ್ಷೇತ್ರದ ಮಾಜಿ ಶಾಸಕರೊಬ್ಬರ ಪುತ್ರನ ಮನೆಯ ಮೇಲೆ ಬುಧವಾರ ಎನ್ ಐಎ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಐಸಿಸ್‌ ಸಂಘಟನೆಯ ಜತೆ ಇದೆಯೆನ್ನಲಾದ ನಂಟಿನ ಆರೋಪದ ಕುರಿತು ತನಿಖೆ ನಡೆಸುತ್ತಿದ್ದಾರೆ.

ಮಾಜಿ ಶಾಸಕ ಬಿ.ಎಂ. ಇದಿನಬ್ಬ ಪುತ್ರ ಬಿ.ಎಂ.ಬಾಷಾ ಅವರ ಉಳ್ಳಾಲದ ಮಾಸ್ತಿಕಟ್ಟೆ ಬಳಿ ಇರುವ ನಿವಾಸ ಮೇಲೆ ಇಂದು ಮುಂಜಾನೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸುಮಾರು 20ಕ್ಕೂ ಅಧಿಕ ಮಂದಿ ಇದ್ದ ಅಧಿಕಾರಿಗಳ ತಂಡ ಈ ದಾಳಿಯನ್ನು ನಡೆಸಿದೆ.ಸಿರಿಯಾ ಮೂಲದ ಐಸಿಸ್‌ ಸಂಘಟನೆಯ ಜೊತೆ ನಂಟು ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎನ್ನಲಾಗುತ್ತಿದೆ.

ಮಂಗಳೂರು ನಗರ ಪೊಲೀಸರು ಕೂಡ ಎನ್‌ಐಎ ತಂಡಕ್ಕ ಸಾಥ್ ನೀಡಿದ್ದಾರೆ. ಎನ್‌ಐಎ ಅಧಿಕಾರಿಗಳ ತಂಡ ಮನೆಯಲ್ಲಿ ಪರಿಶೀಲನೆಯನ್ನು ನಡೆಸುತ್ತಿದ್ದು, ಕುಟುಂಬಸ್ಥರಿಂದ ಮಾಹಿತಿಯನ್ನು ಕಲೆ ಹಾಕುತ್ತಿದೆ.

ಭಾಷಾ ಅವರ ಮೊಮ್ಮಗಳ ವಿವಾಹ ಕಾಸರಗೋಡು ಮೂಲದ ಸಿಯಾಝ್‌ ಎಂಬಾತನ ಜತೆಗೆ ನಡೆದಿತ್ತು. ಆಕೆಯ ಪತಿ ಸಿರಿಯಾ ಮೂಲದ ಉಗ್ರ ಸಂಘಟನೆಯ ಜತೆಗೆ ಸಂಪರ್ಕ ಹೊಂದಿದ್ದಾನೆ ಎಂದು ಆರೋಪಿಸಲಾಗಿದೆ. ಆತ ಮಗು ಹಾಗೂ ಪತಿಯೊಂದಿಗೆ ಶ್ರೀಲಂಕಾ ಮಾರ್ಗವಾಗಿ ಕತಾರ್‌ಗೆ ತೆರಳಿ ಅಲ್ಲಿಂದ ಸಿರಿಯಾದಲ್ಲಿ ಐಸಿಎಸ್‌ ಸಂಘಟನೆ ಸೇರಿಕೊಂಡಿದ್ದಾನೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದೆ ಎನ್ನಲಾಗುತ್ತಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು