6:47 AM Tuesday5 - August 2025
ಬ್ರೇಕಿಂಗ್ ನ್ಯೂಸ್
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ‘ರಿದಂ ಆಫ್ ಬಿಎಲ್‌ಆರ್‌’: ವಿಶಿಷ್ಟ ಧ್ವನಿ ಗುರುತು… ಶಿಬು ಸೊರೇನ್ ನಿಧನ: ಮತಗಳ್ಳತನ ವಿರುದ್ಧ ಪ್ರತಿಭಟನಾ ಸಭೆ ಆ. 8ಕ್ಕೆ ಮುಂದೂಡಿಕೆ:… ವಿಶ್ವ ವಿಖ್ಯಾತ ಮೈಸೂರು ದಸರಾ: ಪುಷ್ಪಾರ್ಚನೆ ಮೂಲಕ ಅಭಿಮನ್ಯು ನೇತೃತ್ವದ ಗಜ ಪಯಣಕ್ಕೆ… Shivamogga | ತೀರ್ಥಹಳ್ಳಿ: ಮನೆಗಾಗಿ ಸಾಲ; ಮನನೊಂದ ವೃದ್ದ ದಂಪತಿ ಒಂದೇ ಮರಕ್ಕೆ… Kodagu | ಬೆಕ್ಕೆಸುಡ್ಲೂರಿನಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಪಲ್ಟಿ: ಕುಟ್ಟ- ಪೊನ್ನಂಪೇಟೆ… Kodagu | ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ: ರ್‍ಯಾಂಬುಟನ್ ಹಣ್ಣು ಮಾರಾಟಕ್ಕೆ ನಿರ್ಬಂಧ; ವ್ಯಾಪಾರಸ್ಥರ… SIT | ಧರ್ಮಸ್ಥಳ ಪ್ರಕರಣ: ದೂರು ನೀಡಲು ಮತ್ತೊಬ್ಬ ದೂರುದಾರ ಎಸ್ಐಟಿ ಕಚೇರಿಗೆ… ಸುಹಾಸ್ ಶೆಟ್ಟಿ ಮರ್ಡರ್ ಕೇಸ್: ಕಾಫಿನಾಡು ಕಳಸದಲ್ಲಿ ಎನ್ಐಎ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ Bangaluru | ನಮ್ಮ ಮೆಟ್ರೋದಲ್ಲಿ ಮೊದಲ ಬಾರಿಗೆ ಯಕೃತ್‌ ರವಾನೆ: ಸ್ಪರ್ಶ್‌ ಆಸ್ಪತ್ರೆಯಲ್ಲಿ… ರಾಹುಲ್ ಗಾಂಧಿ ನೀಡಿರುವ ‘ಮತ ಕಳ್ಳತನ’ ಪದವು ಭಾರತೀಯ ರಾಜಕೀಯ ಶಬ್ದಕೋಶಕ್ಕೆ ಸೇರ್ಪಡೆ:…

ಇತ್ತೀಚಿನ ಸುದ್ದಿ

ಉಳ್ಳಾಲ: ಮಾಜಿ ಶಾಸಕರ ಪುತ್ರನ ನಿವಾಸಕ್ಕೆ ಎನ್ಐಎ ದಾಳಿ;ಐಸಿಸ್‌ ಸಂಘಟನೆಯ ಜತೆ ಸಂಪರ್ಕ ಶಂಕೆ

04/08/2021, 12:48

ಮಂಗಳೂರು(reporterkarnataka.com) : 

ಮಂಗಳೂರು(ಉಳ್ಳಾಲ)ಕ್ಷೇತ್ರದ ಮಾಜಿ ಶಾಸಕರೊಬ್ಬರ ಪುತ್ರನ ಮನೆಯ ಮೇಲೆ ಬುಧವಾರ ಎನ್ ಐಎ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಐಸಿಸ್‌ ಸಂಘಟನೆಯ ಜತೆ ಇದೆಯೆನ್ನಲಾದ ನಂಟಿನ ಆರೋಪದ ಕುರಿತು ತನಿಖೆ ನಡೆಸುತ್ತಿದ್ದಾರೆ.

ಮಾಜಿ ಶಾಸಕ ಬಿ.ಎಂ. ಇದಿನಬ್ಬ ಪುತ್ರ ಬಿ.ಎಂ.ಬಾಷಾ ಅವರ ಉಳ್ಳಾಲದ ಮಾಸ್ತಿಕಟ್ಟೆ ಬಳಿ ಇರುವ ನಿವಾಸ ಮೇಲೆ ಇಂದು ಮುಂಜಾನೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸುಮಾರು 20ಕ್ಕೂ ಅಧಿಕ ಮಂದಿ ಇದ್ದ ಅಧಿಕಾರಿಗಳ ತಂಡ ಈ ದಾಳಿಯನ್ನು ನಡೆಸಿದೆ.ಸಿರಿಯಾ ಮೂಲದ ಐಸಿಸ್‌ ಸಂಘಟನೆಯ ಜೊತೆ ನಂಟು ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎನ್ನಲಾಗುತ್ತಿದೆ.

ಮಂಗಳೂರು ನಗರ ಪೊಲೀಸರು ಕೂಡ ಎನ್‌ಐಎ ತಂಡಕ್ಕ ಸಾಥ್ ನೀಡಿದ್ದಾರೆ. ಎನ್‌ಐಎ ಅಧಿಕಾರಿಗಳ ತಂಡ ಮನೆಯಲ್ಲಿ ಪರಿಶೀಲನೆಯನ್ನು ನಡೆಸುತ್ತಿದ್ದು, ಕುಟುಂಬಸ್ಥರಿಂದ ಮಾಹಿತಿಯನ್ನು ಕಲೆ ಹಾಕುತ್ತಿದೆ.

ಭಾಷಾ ಅವರ ಮೊಮ್ಮಗಳ ವಿವಾಹ ಕಾಸರಗೋಡು ಮೂಲದ ಸಿಯಾಝ್‌ ಎಂಬಾತನ ಜತೆಗೆ ನಡೆದಿತ್ತು. ಆಕೆಯ ಪತಿ ಸಿರಿಯಾ ಮೂಲದ ಉಗ್ರ ಸಂಘಟನೆಯ ಜತೆಗೆ ಸಂಪರ್ಕ ಹೊಂದಿದ್ದಾನೆ ಎಂದು ಆರೋಪಿಸಲಾಗಿದೆ. ಆತ ಮಗು ಹಾಗೂ ಪತಿಯೊಂದಿಗೆ ಶ್ರೀಲಂಕಾ ಮಾರ್ಗವಾಗಿ ಕತಾರ್‌ಗೆ ತೆರಳಿ ಅಲ್ಲಿಂದ ಸಿರಿಯಾದಲ್ಲಿ ಐಸಿಎಸ್‌ ಸಂಘಟನೆ ಸೇರಿಕೊಂಡಿದ್ದಾನೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದೆ ಎನ್ನಲಾಗುತ್ತಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು