6:11 AM Wednesday22 - April 2026
ಬ್ರೇಕಿಂಗ್ ನ್ಯೂಸ್
ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ…

ಇತ್ತೀಚಿನ ಸುದ್ದಿ

ಉಳ್ಳಾಲ: ಮಾಜಿ ಶಾಸಕರ ಪುತ್ರನ ನಿವಾಸಕ್ಕೆ ಎನ್ಐಎ ದಾಳಿ;ಐಸಿಸ್‌ ಸಂಘಟನೆಯ ಜತೆ ಸಂಪರ್ಕ ಶಂಕೆ

04/08/2021, 12:48

ಮಂಗಳೂರು(reporterkarnataka.com) : 

ಮಂಗಳೂರು(ಉಳ್ಳಾಲ)ಕ್ಷೇತ್ರದ ಮಾಜಿ ಶಾಸಕರೊಬ್ಬರ ಪುತ್ರನ ಮನೆಯ ಮೇಲೆ ಬುಧವಾರ ಎನ್ ಐಎ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಐಸಿಸ್‌ ಸಂಘಟನೆಯ ಜತೆ ಇದೆಯೆನ್ನಲಾದ ನಂಟಿನ ಆರೋಪದ ಕುರಿತು ತನಿಖೆ ನಡೆಸುತ್ತಿದ್ದಾರೆ.

ಮಾಜಿ ಶಾಸಕ ಬಿ.ಎಂ. ಇದಿನಬ್ಬ ಪುತ್ರ ಬಿ.ಎಂ.ಬಾಷಾ ಅವರ ಉಳ್ಳಾಲದ ಮಾಸ್ತಿಕಟ್ಟೆ ಬಳಿ ಇರುವ ನಿವಾಸ ಮೇಲೆ ಇಂದು ಮುಂಜಾನೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸುಮಾರು 20ಕ್ಕೂ ಅಧಿಕ ಮಂದಿ ಇದ್ದ ಅಧಿಕಾರಿಗಳ ತಂಡ ಈ ದಾಳಿಯನ್ನು ನಡೆಸಿದೆ.ಸಿರಿಯಾ ಮೂಲದ ಐಸಿಸ್‌ ಸಂಘಟನೆಯ ಜೊತೆ ನಂಟು ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎನ್ನಲಾಗುತ್ತಿದೆ.

ಮಂಗಳೂರು ನಗರ ಪೊಲೀಸರು ಕೂಡ ಎನ್‌ಐಎ ತಂಡಕ್ಕ ಸಾಥ್ ನೀಡಿದ್ದಾರೆ. ಎನ್‌ಐಎ ಅಧಿಕಾರಿಗಳ ತಂಡ ಮನೆಯಲ್ಲಿ ಪರಿಶೀಲನೆಯನ್ನು ನಡೆಸುತ್ತಿದ್ದು, ಕುಟುಂಬಸ್ಥರಿಂದ ಮಾಹಿತಿಯನ್ನು ಕಲೆ ಹಾಕುತ್ತಿದೆ.

ಭಾಷಾ ಅವರ ಮೊಮ್ಮಗಳ ವಿವಾಹ ಕಾಸರಗೋಡು ಮೂಲದ ಸಿಯಾಝ್‌ ಎಂಬಾತನ ಜತೆಗೆ ನಡೆದಿತ್ತು. ಆಕೆಯ ಪತಿ ಸಿರಿಯಾ ಮೂಲದ ಉಗ್ರ ಸಂಘಟನೆಯ ಜತೆಗೆ ಸಂಪರ್ಕ ಹೊಂದಿದ್ದಾನೆ ಎಂದು ಆರೋಪಿಸಲಾಗಿದೆ. ಆತ ಮಗು ಹಾಗೂ ಪತಿಯೊಂದಿಗೆ ಶ್ರೀಲಂಕಾ ಮಾರ್ಗವಾಗಿ ಕತಾರ್‌ಗೆ ತೆರಳಿ ಅಲ್ಲಿಂದ ಸಿರಿಯಾದಲ್ಲಿ ಐಸಿಎಸ್‌ ಸಂಘಟನೆ ಸೇರಿಕೊಂಡಿದ್ದಾನೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದೆ ಎನ್ನಲಾಗುತ್ತಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು