1:50 AM Friday9 - May 2025
ಬ್ರೇಕಿಂಗ್ ನ್ಯೂಸ್
Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ… Ex CM | ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಮಾಜಿ ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಉಳ್ಳಾಲ: ಮಳೆಗೆ ಕಿನ್ಯಾ ಬೆಳರಿಂಗೆಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮೇಲ್ಚಾವಣಿ ಕುಸಿತ

17/05/2022, 22:38

ಉಳ್ಳಾಲ(reporterkarnataka.com): ಸೋಮವಾರ ರಾತ್ರಿ ಸುರಿದ ಭಾರೀ ಮಳೆಗೆ ಶಿಥಿಲಾವಸ್ಥೆಯಲ್ಲಿದ್ದ ಕಿನ್ಯಾ ಬೆಳರಿಂಗೆಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಹಳೇ ಕಟ್ಟಡ ಕುಸಿದು ಬಿದ್ದಿದೆ. 

ಸಮೀಪದಲ್ಲೇ ಹೊಸ ಕಟ್ಟಡ ನಿರ್ಮಿಸಲಾಗಿದ್ದು, ಅದರಲ್ಲಿ ತರಗತಿಗಳು ನಡೆಯುತ್ತಿದ್ದುದರಿಂದ ತರಗತಿ ನಡೆಸಲು ಅಡಚಣೆಯಾಗಿಲ್ಲ.

ಸ್ಥಳಕ್ಕೆ ಶಾಸಕ ಯು.ಟಿ.ಖಾದರ್, ಶಿಕ್ಷಣಾ ಇಲಾಖೆಯ ಅಧಿಕಾರಿಗಳು, ಗ್ರಾಮ ಪಂಚಾಯತ್ ಮುಖ್ಯಸ್ಥರು, ಕಂದಾಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.


ಕಿನ್ಯ ಬೆಳರಿಂಗೆ ಶಾಲೆಯಲ್ಲಿ ಹಿರಿಯ ಪ್ರಾಥಮಿಕ ಶಾಲೆಯ ಸುಮಾರು 25 ವರ್ಷಕ್ಕೂ ಹಳೆ ಕಟ್ಟಡ ಕಳೆದ ಎರಡು ವರ್ಷಗಳಿಂದ ಶಿಥಿಲಾವಸ್ಥೆಯಲ್ಲಿತ್ತು. ಶಾಲೆಗೆ ನೂತನ ತರಗತಿ ಕೊಠಡಿ ನಿರ್ಮಾಣ ಕಾರ್ಯ ಮುಗಿದು ಮುಂದಿನವಾರ ಉದ್ಘಾಟನೆಗೊಳ್ಳಲಿದೆ. ಈ ನಡುವೆ ಹಳೆಯ ಕಟ್ಟಡವನ್ನು ತೆರವುಗೊಳಿಸಲು ಜಿಲ್ಲಾ ಪಂಚಾಯತ್ ಮತ್ತು ಶಿಕ್ಷಣ ಇಲಾಖೆಗೆ ಶಾಲಾಭಿವೃದ್ಧಿ ಸಮಿತಿ ಮನವಿ ಸಲ್ಲಿಸಿತ್ತು. ಈ ಕಟ್ಟಡದಲ್ಲಿ ಒಟ್ಟು ಐದು ತರಗತಿಗಳಿದ್ದು, 2020ರ ಬಳಿಕ ಈ ಕಟ್ಟಡದಲ್ಲಿ ತರಗತಿಯನ್ನು ಸ್ಥಗಿತಗೊಳಿಸಲಾಗಿತ್ತು. ಕೋವಿಡ್ ಬಳಿಕ 2021ರಲ್ಲಿ ಶಾಲಾ ಪ್ರಾರಂಭದ ಸಂದರ್ಭದಲ್ಲಿ ಮೂರು ತರಗತಿಗಳ ವಿದ್ಯಾರ್ಥಿಗಳನ್ನು ಸ್ಥಳೀಯ ಮದರಸ ಕಟ್ಟಡಕ್ಕೆ ಸ್ಥಳಾಂತರಗೊಳಿಸಲಾಗಿತ್ತು. ಇದೀಗ ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡ ಸೋಮವಾರ ರಾತ್ರಿ ಸುರಿದ ಮಳೆಗೆ ಛಾವಣಿ ಮುರಿದು ಬಿದ್ದಿದ್ದು, ರಾತ್ರಿ ಘಟನೆ ನಡೆದ ಕಾರಣ ವಿದ್ಯಾರ್ಥಿಗಳು ಅಪಾಯದಿಂದ ಪಾರಾದಂತಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು