1:41 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಉಳ್ಳಾಲ: ಮಳೆಗೆ ಕಿನ್ಯಾ ಬೆಳರಿಂಗೆಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮೇಲ್ಚಾವಣಿ ಕುಸಿತ

17/05/2022, 22:38

ಉಳ್ಳಾಲ(reporterkarnataka.com): ಸೋಮವಾರ ರಾತ್ರಿ ಸುರಿದ ಭಾರೀ ಮಳೆಗೆ ಶಿಥಿಲಾವಸ್ಥೆಯಲ್ಲಿದ್ದ ಕಿನ್ಯಾ ಬೆಳರಿಂಗೆಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಹಳೇ ಕಟ್ಟಡ ಕುಸಿದು ಬಿದ್ದಿದೆ. 

ಸಮೀಪದಲ್ಲೇ ಹೊಸ ಕಟ್ಟಡ ನಿರ್ಮಿಸಲಾಗಿದ್ದು, ಅದರಲ್ಲಿ ತರಗತಿಗಳು ನಡೆಯುತ್ತಿದ್ದುದರಿಂದ ತರಗತಿ ನಡೆಸಲು ಅಡಚಣೆಯಾಗಿಲ್ಲ.

ಸ್ಥಳಕ್ಕೆ ಶಾಸಕ ಯು.ಟಿ.ಖಾದರ್, ಶಿಕ್ಷಣಾ ಇಲಾಖೆಯ ಅಧಿಕಾರಿಗಳು, ಗ್ರಾಮ ಪಂಚಾಯತ್ ಮುಖ್ಯಸ್ಥರು, ಕಂದಾಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.


ಕಿನ್ಯ ಬೆಳರಿಂಗೆ ಶಾಲೆಯಲ್ಲಿ ಹಿರಿಯ ಪ್ರಾಥಮಿಕ ಶಾಲೆಯ ಸುಮಾರು 25 ವರ್ಷಕ್ಕೂ ಹಳೆ ಕಟ್ಟಡ ಕಳೆದ ಎರಡು ವರ್ಷಗಳಿಂದ ಶಿಥಿಲಾವಸ್ಥೆಯಲ್ಲಿತ್ತು. ಶಾಲೆಗೆ ನೂತನ ತರಗತಿ ಕೊಠಡಿ ನಿರ್ಮಾಣ ಕಾರ್ಯ ಮುಗಿದು ಮುಂದಿನವಾರ ಉದ್ಘಾಟನೆಗೊಳ್ಳಲಿದೆ. ಈ ನಡುವೆ ಹಳೆಯ ಕಟ್ಟಡವನ್ನು ತೆರವುಗೊಳಿಸಲು ಜಿಲ್ಲಾ ಪಂಚಾಯತ್ ಮತ್ತು ಶಿಕ್ಷಣ ಇಲಾಖೆಗೆ ಶಾಲಾಭಿವೃದ್ಧಿ ಸಮಿತಿ ಮನವಿ ಸಲ್ಲಿಸಿತ್ತು. ಈ ಕಟ್ಟಡದಲ್ಲಿ ಒಟ್ಟು ಐದು ತರಗತಿಗಳಿದ್ದು, 2020ರ ಬಳಿಕ ಈ ಕಟ್ಟಡದಲ್ಲಿ ತರಗತಿಯನ್ನು ಸ್ಥಗಿತಗೊಳಿಸಲಾಗಿತ್ತು. ಕೋವಿಡ್ ಬಳಿಕ 2021ರಲ್ಲಿ ಶಾಲಾ ಪ್ರಾರಂಭದ ಸಂದರ್ಭದಲ್ಲಿ ಮೂರು ತರಗತಿಗಳ ವಿದ್ಯಾರ್ಥಿಗಳನ್ನು ಸ್ಥಳೀಯ ಮದರಸ ಕಟ್ಟಡಕ್ಕೆ ಸ್ಥಳಾಂತರಗೊಳಿಸಲಾಗಿತ್ತು. ಇದೀಗ ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡ ಸೋಮವಾರ ರಾತ್ರಿ ಸುರಿದ ಮಳೆಗೆ ಛಾವಣಿ ಮುರಿದು ಬಿದ್ದಿದ್ದು, ರಾತ್ರಿ ಘಟನೆ ನಡೆದ ಕಾರಣ ವಿದ್ಯಾರ್ಥಿಗಳು ಅಪಾಯದಿಂದ ಪಾರಾದಂತಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು