6:15 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಉಳ್ಳಾಲ: ರೂಪದರ್ಶಿ ಪ್ರೇಕ್ಷಾ ಆತ್ಮಹತ್ಯೆ ಪ್ರಕರಣದ ಆರೋಪಿ ನೇಣಿಗೆ ಶರಣು

11/05/2023, 18:45

ಉಳ್ಳಾಲ(reporterkarnataka.com): ಭಾರೀ ಸುದ್ದಿ ಮಾಡಿದ್ದ ಉದಯೋನ್ಮುಖ
ರೂಪದರ್ಶಿ ಕುಂಪಲದ ಪ್ರೇಕ್ಷಾ ಆತ್ಮಹತ್ಯೆ ಪ್ರಕರಣದ ಆರೋಪಿ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಕುಂಪಲದ ಆಶ್ರಯ ಕಾಲನಿಯ ನಿವಾಸಿ ಪ್ರೇಕ್ಷಾಳ ಮೃತದೇಹ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿ ಯಲ್ಲಿ ಎರಡು ವರ್ಷಗಳ ಹಿಂದೆ ಅವರ ಮನೆಯಲ್ಲಿ ಪತ್ತೆಯಾಗಿತ್ತು. ಕುತ್ತಾರು, ಮುಂಡೋಳಿ ನಿವಾಸಿ ಯತಿರಾಜ್ ಗಟ್ಟಿ (20) ಎಂಬಾತ ಪ್ರೇಕ್ಷಾ ಸಾವಿಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿದ್ದ. ಇದೀಗ ಯತಿರಾಜ್ ಬುಧವಾರ ದಿನ ತನ್ನ ಮನೆಯ ಹಿಂದಿನ ಚಿಕ್ಕಮ್ಮನ ಮನೆಯ ಎದುರಿನ ಸಿಟ್ ಔಟ್ ನ ಕಬ್ಬಿಣದ ಹುಕ್ಸ್ ಒಂದಕ್ಕೆ ನೇಣು ಬಿಗಿದು ಆತ್ಮ ಹತ್ಯೆಗೈದಿದ್ದಾನೆ. ನಿನ್ನೆ ರಾತ್ರಿ 11 ರ ವೇಳೆ ಮನೆಗೆ ಬಂದಿದ್ದ ಯತಿರಾಜ್, ಚಿಕ್ಕಮ್ಮ ಮನೆಯಲ್ಲಿರದ ವೇಳೆ ನೇಣು ಬಿಗಿದಿದ್ದಾನೆ.

ಇಂದು ಬೆಳಿಗ್ಗೆ ಯತಿರಾಜ್ ನ ಮಾವ ಹುಡುಕಾಡಿದಾಗ ಆತ್ಮಹತ್ಯೆಗೈದಿರುವುದು ಬೆಳಕಿಗೆ ಬಂದಿದೆ. ಕೂಡಲೇ ಮನೆಮಂದಿ ನೇಣು ಕುಣಿಕೆಯನ್ನ ಕಡಿದರೂ ಅದಾಗಲೇ ಯತಿರಾಜ್ ಮೃತಪಟ್ಟಿದ್ದ. ಸ್ಥಳಕ್ಕೆ ಬಂದ ಉಳ್ಳಾಲ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು