3:51 AM Tuesday4 - August 2026
ಬ್ರೇಕಿಂಗ್ ನ್ಯೂಸ್
ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ…

ಇತ್ತೀಚಿನ ಸುದ್ದಿ

ಅನ್ ಲಾಕ್ ಆಗುತ್ತಿದ್ದಂತೆ ಮತ್ತೆ ಡೆಲ್ಟಾ ಪ್ಲಸ್ ಆತಂಕ: ಕಂಟೈನ್ಮೆಂಟ್ ಝೋನ್ ಜಾರಿಗೆ ಕೇಂದ್ರ ಆರೋಗ್ಯ ಕಾರ್ಯದರ್ಶಿ ಸೂಚನೆ

27/06/2021, 08:09

ಬೆಂಗಳೂರು(reporterkarnataka news) : ರಾಜ್ಯದಲ್ಲಿ ಕೊರೊನಾ ವೈರಸ್ 2ನೇ ಅಲೆ ಅಬ್ಬರ ಕಡಿಮೆಯಾಗಿ ಇಡೀ ರಾಜ್ಯ ಅನ್‌ಲಾಕ್ ಆಗುತ್ತಿದ್ದಂತೆ ಮತ್ತೆ ಆತಂಕ ಎದುರಾಗಿದೆ. ಇದೀಗ ಡೆಲ್ಟಾ ಫ್ಲಸ್ ಆರ್ಭಟ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಟ್ಟುನಿಟ್ಟಿನ ನಿರ್ಬಂಧ ಹೇರುವಂತೆ ಕೇಂದ್ರ ಸರಕಾರ ರಾಜ್ಯಕ್ಕೆ ಸೂಚನೆ ನೀಡಿದೆ.

ಕೇಂದ್ರ ಸರಕಾರದ ಆರೋಗ್ಯ ಇಲಾಖೆ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್‌ ಅವರಿಗೆ ಈ ಕುರಿತು ಪತ್ರ ರವಾನಿಸಿದ್ದಾರೆ. ಡೆಲ್ಲಾ ಪ್ಲಸ್ ವೈರಸ್ ಪತ್ತೆ ಯಾಗುತ್ತಿರುವ ಕಾರಣ ಕಂಟೈನ್ಮೆಂಟ್ ಝೋನ್ ನಿರ್ಬಂಧ ಜಾರಿಗೆ ತರಲು ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಮಹಾರಾಷ್ಟ್ರ, ಕರ್ನಾಟಕ, ಕೇರಳದಲ್ಲಿ ಈಗಾಗಲೇ ಡೆಲ್ಟಾ ಪ್ಲಸ್ ವೈರಸ್ ಕಾಣಿಸಿಕೊಂಡಿದ್ದು, ದಕ್ಷಿಣ ಭಾರತದಾದ್ಯಂತ ವ್ಯಾಪಿಸೋ ಆತಂಕವಿದೆ‌.

ಮೈಸೂರಿನಲ್ಲಿ ಡೆಲ್ಟಾ ಪ್ಲಸ್ ವೈರಸ್ ಕಾಣಿಸಿಕೊಂಡ ಬೆನ್ನಲ್ಲೇ ಕೇಂದ್ರ ಸರಕಾರದ ಆರೋಗ್ಯ ಇಲಾಖೆ ಕಾರ್ಯದರ್ಶಿ ರಾಜೇಶ್ ಭೂಷಣ್ ಪತ್ರ ಬರೆದಿದ್ದಾರೆ.

ಡೆಲ್ಟಾ ಪ್ಲಸ್ ವೇರಿಯೆಂಟ್ ಅತೀ ವೇಗದಲ್ಲಿ ಹರಡುತ್ತಿದೆ. ಅಷ್ಟೇ ವೇಗದಲ್ಲಿ ಶ್ವಾಸಕೋಶಕ್ಕೆ ಅವರಿಸಿಕೊಳ್ಳುತ್ತಿದೆ. ಕೊರೋನಾ ವೈರಸ್ ಪೈಕಿ ಡೆಲ್ಟಾ ಪ್ಲಸ್ ಅತ್ಯಂತ ಅಪಾಯ ಕಾರಿ ಅನ್ನೋದು ಈಗಾಗಲೇ ಸಾಬೀತಾಗಿದೆ. ಹೀಗಾಗಿ ಸೂಕ್ತ ಕ್ರಮ ಕೈಗೊಳ್ಳುವಂತೆ ರಾಜ್ಯಕ್ಕೆ ಪತ್ರದಲ್ಲಿ ಸೂಚಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು