2:09 AM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಅನ್ ಲಾಕ್ ಆಗುತ್ತಿದ್ದಂತೆ ಮತ್ತೆ ಡೆಲ್ಟಾ ಪ್ಲಸ್ ಆತಂಕ: ಕಂಟೈನ್ಮೆಂಟ್ ಝೋನ್ ಜಾರಿಗೆ ಕೇಂದ್ರ ಆರೋಗ್ಯ ಕಾರ್ಯದರ್ಶಿ ಸೂಚನೆ

27/06/2021, 08:09

ಬೆಂಗಳೂರು(reporterkarnataka news) : ರಾಜ್ಯದಲ್ಲಿ ಕೊರೊನಾ ವೈರಸ್ 2ನೇ ಅಲೆ ಅಬ್ಬರ ಕಡಿಮೆಯಾಗಿ ಇಡೀ ರಾಜ್ಯ ಅನ್‌ಲಾಕ್ ಆಗುತ್ತಿದ್ದಂತೆ ಮತ್ತೆ ಆತಂಕ ಎದುರಾಗಿದೆ. ಇದೀಗ ಡೆಲ್ಟಾ ಫ್ಲಸ್ ಆರ್ಭಟ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಟ್ಟುನಿಟ್ಟಿನ ನಿರ್ಬಂಧ ಹೇರುವಂತೆ ಕೇಂದ್ರ ಸರಕಾರ ರಾಜ್ಯಕ್ಕೆ ಸೂಚನೆ ನೀಡಿದೆ.

ಕೇಂದ್ರ ಸರಕಾರದ ಆರೋಗ್ಯ ಇಲಾಖೆ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್‌ ಅವರಿಗೆ ಈ ಕುರಿತು ಪತ್ರ ರವಾನಿಸಿದ್ದಾರೆ. ಡೆಲ್ಲಾ ಪ್ಲಸ್ ವೈರಸ್ ಪತ್ತೆ ಯಾಗುತ್ತಿರುವ ಕಾರಣ ಕಂಟೈನ್ಮೆಂಟ್ ಝೋನ್ ನಿರ್ಬಂಧ ಜಾರಿಗೆ ತರಲು ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಮಹಾರಾಷ್ಟ್ರ, ಕರ್ನಾಟಕ, ಕೇರಳದಲ್ಲಿ ಈಗಾಗಲೇ ಡೆಲ್ಟಾ ಪ್ಲಸ್ ವೈರಸ್ ಕಾಣಿಸಿಕೊಂಡಿದ್ದು, ದಕ್ಷಿಣ ಭಾರತದಾದ್ಯಂತ ವ್ಯಾಪಿಸೋ ಆತಂಕವಿದೆ‌.

ಮೈಸೂರಿನಲ್ಲಿ ಡೆಲ್ಟಾ ಪ್ಲಸ್ ವೈರಸ್ ಕಾಣಿಸಿಕೊಂಡ ಬೆನ್ನಲ್ಲೇ ಕೇಂದ್ರ ಸರಕಾರದ ಆರೋಗ್ಯ ಇಲಾಖೆ ಕಾರ್ಯದರ್ಶಿ ರಾಜೇಶ್ ಭೂಷಣ್ ಪತ್ರ ಬರೆದಿದ್ದಾರೆ.

ಡೆಲ್ಟಾ ಪ್ಲಸ್ ವೇರಿಯೆಂಟ್ ಅತೀ ವೇಗದಲ್ಲಿ ಹರಡುತ್ತಿದೆ. ಅಷ್ಟೇ ವೇಗದಲ್ಲಿ ಶ್ವಾಸಕೋಶಕ್ಕೆ ಅವರಿಸಿಕೊಳ್ಳುತ್ತಿದೆ. ಕೊರೋನಾ ವೈರಸ್ ಪೈಕಿ ಡೆಲ್ಟಾ ಪ್ಲಸ್ ಅತ್ಯಂತ ಅಪಾಯ ಕಾರಿ ಅನ್ನೋದು ಈಗಾಗಲೇ ಸಾಬೀತಾಗಿದೆ. ಹೀಗಾಗಿ ಸೂಕ್ತ ಕ್ರಮ ಕೈಗೊಳ್ಳುವಂತೆ ರಾಜ್ಯಕ್ಕೆ ಪತ್ರದಲ್ಲಿ ಸೂಚಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು