1:02 AM Tuesday3 - March 2026
ಬ್ರೇಕಿಂಗ್ ನ್ಯೂಸ್
ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಆಡಳಿತದಲ್ಲಿ ಸಾರ್ವಜನಿಕರು ಬೀದಿಗಿಳಿದರೆ ಮಾತ್ರ ಸ್ಪಂದನೆ; ಜೈಲ್ ಜಾಮರ್ ಪ್ರತಿಭಟನೆಯಲ್ಲಿ ಶಾಸಕ ವೇದವ್ಯಾಸ ಕಾಮತ್

05/04/2025, 21:14

ಮಂಗಳೂರು(reporterkarnataka.com): ನಗರದ ಬಿಜೈನಲ್ಲಿರುವ ಸಬ್ ಜೈಲ್ ನ ಜಾಮರ್ ಸಮಸ್ಯೆಯನ್ನು ಖಂಡಿಸಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ವತಿಯಿಂದ ನಗರದ ಜೈಲು ಮುಂಭಾಗ ರಾಸ್ತಾ ರೋಕೋ ಪ್ರತಿಭಟನೆ ನಡೆಯಿತು.


ಈ ವೇಳೆ ಆಕ್ರೋಶದಿಂದ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ಅವರು, ಒಂದೋ ಜಾಮರ್ ಸಮಸ್ಯೆ ಸರಿಪಡಿಸಿ. ಅಥವಾ ಅದನ್ನು ಕಿತ್ತೊಗೆಯಿರಿ, ಇಲ್ಲವೇ ನಾವೇ ತೆಗೆದು ಬಿಸಾಕುತ್ತೇವೆ ಎಂದು, ಜೈಲು ಅಧಿಕಾರಿಗಳಿಂದ ಹಿಡಿದು ಕಮಿಷನರ್, ಜಿಲ್ಲಾಧಿಕಾರಿ, ಕೊನೆಗೆ ಗೃಹ ಸಚಿವರಿಗೂ ಹೇಳಿ ಆಗಿದೆ. ಕಾಂಗ್ರೆಸ್ಸಿನ ಪರಿಷತ್ ಸದಸ್ಯರೊಬ್ಬರಂತೂ ಕೂಡಲೇ ಈ ಸಮಸ್ಯೆಯನ್ನು ಬಗೆಹರಿಸಲಾಗುವುದು ಎಂದು ಪತ್ರಿಕಾ ಹೇಳಿಕೆ ಕೊಟ್ಟರೂ ಸಮಸ್ಯೆ ಮಾತ್ರ ಹಾಗೆಯೇ ಇದ್ದು ಕಾಂಗ್ರೆಸ್ ಆಡಳಿತದಲ್ಲಿ ಸಾರ್ವಜನಿಕರು ಬೀದಿಗಿಳಿದರೆ ಮಾತ್ರ ಸ್ಪಂದನೆ ಸಿಗುತ್ತಿದೆ. ಜೈಲು ಅಧಿಕಾರಿಗಳು ಸರಿಯಾಗಿದ್ದರೆ ಜಾಮರ್ ಅವಶ್ಯಕತೆಯೇ ಬರುವುದಿಲ್ಲ. ವಿಪರ್ಯಾಸವೆಂದರೆ ಈಗಲೂ ಜೈಲಿನೊಳಗೆ ಮೊಬೈಲ್ ನೆಟ್ವರ್ಕ್ ಸಿಗುತ್ತಿದೆ. ಹೊರಗಿರುವ ಜನರಿಗೇ ಸಿಗುತ್ತಿಲ್ಲ. ಇವರ ಬೇಜವಾಬ್ದಾರಿಯಿಂದಾಗಿ ಇತ್ತೀಚೆಗೆ ರೋಗಿಯೊಬ್ಬರು ತುರ್ತು ಚಿಕಿತ್ಸೆ ಸಿಗದೇ ಮೃತಪಟ್ಟ ಘಟನೆ ನಡೆದಿದೆ. ಈ ಸಾವಿನ ಹೊಣೆ ಯಾರು ಹೊರುತ್ತಾರೆ? ಜೈಲು ಅಧಿಕಾರಿಗಳೇ? ಉಸ್ತುವಾರಿ ಸಚಿವರೇ? ಅಥವಾ ಮುಖ್ಯಮಂತ್ರಿಗಳೇ? ಎಂದು ಪ್ರಶ್ನಿಸಿದರು.
ಆಕ್ರೋಶಿತ ಬಿಜೆಪಿ ಕಾರ್ಯಕರ್ತರು, ಜೈಲಿಗೆ ಹಾಕಲಾಗಿದ್ದ ಬ್ಯಾರಿಕೇಡ್ ನತ್ತ ನುಗ್ಗಿದಾಗ ಪೊಲೀಸರು ತಡೆಯಲು ಯತ್ನಿಸಿದರು. ಈ ವೇಳೆ ನಡೆದ ತಳ್ಳಾಟದಲ್ಲಿ ಕಂಬ್ಳ ವಾರ್ಡಿನ ಬಿಜೆಪಿ ನಿಕಟಪೂರ್ವ ಪಾಲಿಕೆ ಸದಸ್ಯೆ ಲೀಲಾವತಿ ಪ್ರಕಾಶ್ ರವರು ಅಸ್ವಸ್ಥಗೊಂಡು ಕೆಎಂಸಿ ಜ್ಯೋತಿ ಆಸ್ಪತ್ರೆಗೆ ದಾಖಲಾದರು.
ಪ್ರತಿಭಟನೆಯಲ್ಲಿ ರಮೇಶ್ ಕಂಡೆಟ್ಟು, ರವಿಶಂಕರ್ ಮಿಜಾರು, ಪೂರ್ಣಿಮಾ, ಪ್ರೇಮಾನಂದ ಶೆಟ್ಟಿ, ದಿವಾಕರ ಪಾಂಡೇಶ್ವರ, ರಮೇಶ್ ಹೆಗ್ಡೆ, ಲಲ್ಲೇಶ್ ಕುಮಾರ್, ಸುಧೀರ್ ಶೆಟ್ಟಿ ಕಣ್ಣೂರು, ಕಿಶೋರ್ ಕೊಟ್ಟಾರಿ, ಭಾನುಮತಿ, ಮನೋಹರ್ ಕದ್ರಿ, ಶಕೀಲಾ ಖಾವ, ಅಶ್ವಿತ್ ಕೊಟ್ಟಾರಿ ಸಹಿತ ಅನೇಕ ಬಿಜೆಪಿ ಪ್ರಮುಖರು, ಕಾರ್ಯಕರ್ತರು ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು