1:20 AM Saturday10 - May 2025
ಬ್ರೇಕಿಂಗ್ ನ್ಯೂಸ್
Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ… Vatican City | ನೂತನ ಪೋಪ್‌ ಆಗಿ ಅಮೆರಿಕದ ರಾಬರ್ಟ್ ಫ್ರಾನ್ಸಿಸ್‌ ಪ್ರಿವೊಸ್ಟ್‌… Indo- Pak | ಯುದ್ಧ ಕಾರ್ಮೋಡ: ಹೊರನಾಡು ಅನ್ನಪೂರ್ಣೇಶ್ವರಿ ಕ್ಷೇತ್ರದಿಂದ ಭಾರತೀಯ ಸೇನೆಗೆ… ಮಾರಣಾಂತಿಕ ಹೀಮೋಫೀಲಿಯಾ ಬಾಧಿತ ಗರ್ಭಿಣಿ ಮಹಿಳೆಗೆ ಯಶಸ್ವೀ ಶಸ್ತ್ರಚಿಕಿತ್ಸೆ: ತಾಯಿ – ಮಗುವಿಗೆ… Airport | ಕಲಬುರಗಿ ವಿಮಾನ ನಿಲ್ದಾಣ: ಭದ್ರತಾ ತಪಾಸಣೆ; ನಿಗದಿತ ಸಮಯಕ್ಕೆ ಪ್ರಯಾಣಿಕರು… J&K | ಆಪರೇಶನ್ ಸಿಂಧೂರ್: ಕರ್ನಲ್ ಸೋಫಿಯಾ ಖುರೇಷಿ: ಕರ್ನಾಟಕದ ಸೊಸೆ ರೀ..!! Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ…

ಇತ್ತೀಚಿನ ಸುದ್ದಿ

ಅಜ್ಞಾತ ಸ್ಥಳದಿಂದ ಸಂಸದ ಪ್ರಜ್ವಲ್ ರೇವಣ್ಣ ವೀಡಿಯೊ: ಅಶ್ಲೀಲ ವೀಡಿಯೊ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ 31ಕ್ಕೆ ಎಸ್ ಐಟಿ ಎದುರು ಹಾಜರು

27/05/2024, 21:35

ಬೆಂಗಳೂರು(reporterkarnataka.com): ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿರುವ ಸಂಸದ ಪ್ರಜ್ವಲ್ ರೇವಣ್ಣ ಅವರು ವಿದೇಶಕ್ಕೆ ಹಾರಿದ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಮೇ 31ಕ್ಕೆ ಬೆಂಗಳೂರಿಗೆ ಬಂದು ಎಸ್ ಐಟಿ ಎದುರು ಹಾಜರಾಗುವುದಾಗಿ ತಿಳಿಸಿದ್ದಾರೆ.
ತಂದೆ, ತಾಯಿ, ಕುಮಾರಣ್ಣ, ಹಾಸನದ ಜೆಡಿಎಸ್ ಕಾರ್ಯಕರ್ತರು, ಮುಖಂಡರಿಗೆ ಕ್ಷಮೆ ಕೇಳುತ್ತೇನೆ,
ತನ್ನ ಮೇಲಿನ ಆರೋಪಗಳಿಗೆ ಸಂಬಂಧಿಸಿದಂತೆ ಮೇ 31ರಂದು ಬೆಳಗ್ಗೆ 10 ಗಂಟೆಗೆ ಎಸ್ ಐಟಿ ಮುಂದೆ ಹಾಜರಾಗುತ್ತೇನೆ.
ನ್ಯಾಯಾಲಯದ ಮೇಲೆ ನನಗೆ ಸಂಪೂರ್ಣ ನಂಬಿಕೆ ಇದೆ.
ಸುಳ್ಳಿನ ಪ್ರಕರಣಗಳಿಂದ ಆಚೆ ಬರುತ್ತೇನೆ ಎಂದು ಪ್ರಜ್ವಲ್ ರೇವಣ್ಣ ಹೇಳಿದ್ದಾರೆ.
ನನ್ನ ವಿರುದ್ದ ಷಡ್ಯಂತ್ರ ನಡೆದಿದೆ. ಇದನ್ನು ತಿಳಿದು ಬೇಸರಗೊಂಡು ದೂರವಾಗಿದ್ದೆ. ಮೇ 31ಕ್ಕೆ ಬರುತ್ತೇನೆ. ತಾತ, ತಂದೆ, ತಾಯಿ ಹಾಗೂ ಪಕ್ಷದ ಕಾರ್ಯಕರ್ತರ ಕ್ಷಮೆ ಕೋರುತ್ತೇನೆ ಎಂದು ತಿಳಿಸಿದ್ದಾರೆ.
ನಾನು ವಿದೇಶಕ್ಕೆ ಹೋಗುವುದು ಮೊದಲೇ ನಿಗದಿಯಾಗಿತ್ತು.
ಪೂರ್ವನಿಗದಿ ಕಾರ್ಯಕ್ರಮದಂತೆ ವಿದೇಶಕ್ಕೆ ಹೋಗಿದ್ದೇನೆ. ಆಗ ನನ್ನ ಮೇಲೆ ಯಾವುದೇ ಪ್ರಕರಣ, ಕೇಸ್ ಆಗಲಿ ಇರಲಿಲ್ಲ. ಎಸ್ ಐಟಿ ರಚನೆಯೂ ಆಗಿರಲಿಲ್ಲ. ನಾನು ವಿದೇಶಕ್ಕೆ ಹೋದ ಬಳಿಕ ನ್ಯೂಸ್ ಚಾನೆಲ್ ಹಾಗೂ ಯೂಟ್ಯೂಬ್ ನೋಡಿದಾಗ ಈ ಮಾಹಿತಿ ಸಿಕ್ಕಿತು ಎಂದು ಹೇಳಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು