6:54 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಉಂದು ನಾಟಕ..ಬಲೆ ಬುಲಿಪಾಲೆ ಸೀಸನ್ 3 ಉದ್ಘಾಟನೆ: ಸಾಧಕಿ ಮಹಿಳೆಯರಿಂದ ಚಾಲನೆ; ಪ್ರಥಮ ಬಹುಮಾನ 2 ಲಕ್ಷ

20/06/2023, 18:46

ಮಂಗಳೂರು(reporterkarnataka.com): ಕರಾವಳಿ ಕರ್ನಾಟಕದ ನಾಡಿಮಿಡಿತ ನಮ್ಮ ಟಿವಿಯ ಜನಪ್ರಿಯ ಕಾರ್ಯಕ್ರಮ ಉಂದು ನಾಟಕ…ಬಲೆ ಬುಲಿಪಾಲೆ ಸ್ಪರ್ಧೆಯ ಮೂರನೇ ಆವೃತ್ತಿಯನ್ನು ಸಾಧಕ ಮಹಿಳೆಯರಾದ ಹರೇಕಳದ ನಫೀಸಾ ಹಾಗೂ ಅವರ ಮಗಳು ನಜ್ರೀನ ಇತ್ತೀಚೆಗೆ ಉದ್ಘಾಟಿಸಿದರು.


ಉಂದು ನಾಟಕ ಬಲೆ ಬುಲೆಪಾಲೆಯ 2 ಆವೃತ್ತಿಗಳು ಈಗಾಗಲೇ ಅಪಾರ ಜನಪ್ರಿಯತೆಯನ್ನು ಪಡೆದುಕೊಂಡಿದ್ದು ಹಲವಾರು ಕಲಾವಿದರು ಮುನ್ನಡೆಗೆ ಬರುವಂತೆ ಮಾಡಿದೆ. ಮಾತ್ರವಲ್ಲದೆ ಈ ಕಾರ್ಯಕ್ರಮದ ಮೂಲಕ ಹಲವಾರು ಕಲಾವಿದರಿಗೆ ಸಿನಿಮಾಗಳಲ್ಲಿ ಅವಕಾಶಗಳು ದೊರಕಿವೆ. ಇತ್ತೀಚೆಗೆ ಇದರ ಮೂರನೇ ಆವೃತ್ತಿಯ ಚಿತ್ರೀಕರಣ ಆರಂಭಗೊಂಡಿದ್ದು, ಇತ್ತೀಚೆಗೆ ಮಂಗಳೂರಿನ ಪುರಭವನದಲ್ಲಿ ಉದ್ಘಾಟನೆಗೊಂಡಿತು.
ಬಡತನದ ಬೇಗೆಯಲ್ಲಿ ಬೆಂದರೂ ಸಾಧಿಸುವ ಛಲ ದೊಂದಿಗೆ ಹೈನುಗಾರಿಕೆಯನ್ನು ಆರಂಭಿಸಿ, ಇದೀಗ ಸುಮಾರು 75 ಗೋವುಗಳನ್ನು ಸ್ವತಹ ತಾವೇ ಸಾಕುವ ಮೂಲಕ ಯಶಸ್ಸನ್ನು ಕಂಡಿರುವ, ಮಾತ್ರವಲ್ಲದೆ ಹೈನುಗಾರಿಕೆಯಿಂದ ಬರುವ ಲಾಭಾಂಶದ ಬಹುಪಾಲನ್ನು ಸಮಾಜಮುಖಿ ಕಾರ್ಯಗಳಿಗೆ ವಿನಿಯೋಗಿಸಿ ಮಾದರಿಯಾಗಿರುವ ಹರೇಕಳದ ನಫೀಸಾ ಮತ್ತು ಆಕೆಯ ಮಗಳು ನಜ್ರೀನಾ ಉಂದು ನಾಟಕ ಬಲಿಬುಲಿಪಾಲೆ ಮೂರನೇ ಆವೃತ್ತಿಯನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.
ಕಿತ್ತಲೆ ಹಣ್ಣು ಮಾರಿ ಬಂದ ದುಡ್ಡಿನಲ್ಲಿ ಶಾಲೆ ನಿರ್ಮಿಸಿ ಸಹಸ್ರಾರು ಮಕ್ಕಳಿಗೆ ವಿದ್ಯಾಭ್ಯಾಸವನ್ನು ಕಲ್ಪಿಸಿಕೊಟ್ಟು ಪದ್ಮಶ್ರೀ ಪ್ರಶಸ್ತಿಯಿಂದ ಪುರಸ್ಕೃತರಾಗಿರುವ ಹಾಜಬ್ಬರಿಂದಾಗಿ ರಾಜ್ಯಾದ್ಯಂತ ಸುದ್ದಿಯಾಗಿರುವ
ಹರೇಕಳ ಎಂಬ ಊರು ಇದೀಗ ಮತ್ತೊಮ್ಮೆ ಈ ಸಾಧಕ ಮಹಿಳೆಯರಿಂದ ಸುದ್ದಿಯಾಗುತ್ತಿದೆ. ಬಡತನದಲ್ಲಿರುವ ವಿದ್ಯಾರ್ಥಿಗಳಿಗೆ ವಿದ್ಯೆಗೆ ಸಹಾಯ, ಬಡ ರೋಗಿಗಳ ಚಿಕಿತ್ಸೆಗೆ ಹಣ, ಕಷ್ಟದಲ್ಲಿರುವ ಕುಟುಂಬದ ಹೆಣ್ಣು ಮಗಳ ಮದುವೆಗೆ ಆರ್ಥಿಕ ನೆರವು, ಹೀಗೆ ಹಲವಾರು ಉತ್ತಮ ಕಾರ್ಯಗಳನ್ನು ನಡೆಸುತ್ತಾ ಬಂದಿರುವ ನಫೀಸಾ ಹಾಗೂ ಅವರ ಮಗಳು ನಜ್ರೀನಾ ಇತರರಿಗೆ ಮಾದರಿಯಾಗಿದ್ದಾರೆ. ಅದರಲ್ಲೂ ನಜ್ರೀನಾ ಇಂಜಿನಿಯರಿಂಗ್ ಪದವೀಧರೆಯಾಗಿದ್ದರು ಹಸು ಕರುಗಳ ಮೇಲೆ ವಿಶೇಷ ಅಕ್ಕರೆಯನ್ನು ಹೊಂದಿದ್ದು ,ಅವುಗಳ ಆರೈಕೆಗಾಗಿ ತನ್ನ ಜೀವನವನ್ನು ಮುಡಿಪಾಗಿಟ್ಟಿದ್ದು ವಿಶೇಷ.ಉಂದು ನಾಟಕ ಬಲೆ ಬಲಿಪಾಲೆಯ ತೀರ್ಪುಗಾರರಾಗಿರುವ ತುಳುರಂಗಭೂಮಿ ಹಾಗೂ ಸಿನಿಮಾ ಕ್ಷೇತ್ರದ ದಿಗ್ಗಜ ನಿರ್ದೇಶಕರಾಗಿರುವ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಹಾಗೂ ತೆಲಿಕೆದ ಬೊಳ್ಳಿ ಡಾ. ದೇವದಾಸ್ ಕಾಪಿಕಾಡ್ ಉದ್ಘಾಟನಾ ಸಮಾರಂಭದಲ್ಲಿ ತಾರಾ ಮೆರುಗು ನೀಡಿದರು.
ಉಂದು ನಾಟಕ ಬಲೆ ಬುಲೆಪಾಲೆಯ ಮೂರನೇ ಆವೃತ್ತಿಯ ಸ್ಪರ್ಧೆಯ ಪ್ರಥಮ ಸ್ಥಾನಿಗೆ ರೂಪಾಯಿ ಎರಡು ಲಕ್ಷ ಹಾಗೂ ದ್ವಿತೀಯ ಸ್ಥಾನಿಗೆ ರುಪಾಯಿ ಒಂದು ಲಕ್ಷ ನಗದು ಬಹುಮಾನ ದೊರೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು