3:15 AM Tuesday11 - November 2025
ಬ್ರೇಕಿಂಗ್ ನ್ಯೂಸ್
ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ… ಕೇಂದ್ರ ಸರ್ಕಾರದ ಸಾಲ ಕೊಡಿಸುವುದಾಗಿ ಮಹಿಳೆಯರಿಗೆ ಲಕ್ಷಕ್ಕೂ ಅಧಿಕ ವಂಚನೆ: ಮಡಿಕೇರಿ ನಿವಾಸಿ… Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ… ಸದ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ ಕಬ್ಬು ಬೆಳೆಗಾರರ ಕಿವಿಗೆ ಹೂವು ಇಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಿಗೆ ಸಿಎಂ ಪತ್ರ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಇತ್ತೀಚಿನ ಸುದ್ದಿ

ಉಂಡು ಹೋದ ಕೊಂಡು ಹೋದ: ಉಚಿತ ಮನೆ ನೀಡಿದ ಮಾಲೀಕನ ಲಕ್ಷಾಂತರ ರೂ. ನಗದು ಹಾಗೂ ಚಿನ್ನಾಭರಣ ಕಳ್ಳತನ‌

16/10/2022, 10:48

ಉಡುಪಿ(reporterkarnataka.com):
ಉಚಿತವಾಗಿ ಮನೆಯಲ್ಲಿ ಇರಲು ವ್ಯವಸ್ಥೆ ಮಾಡಿದ ಮನೆ ಮಾಲೀಕನ ಬ್ಯಾಂಕ್ ಹಣ ಲಪಟಾಯಿಸಿ, ಮಾಲಿಕನ ಮನೆಯಲ್ಲೂ ಕಳ್ಳತನ ನಡೆಸಿದ ಘಟನೆ ಉಡುಪಿ ನಗರದ ಬನ್ನಂಜೆಯಲ್ಲಿ ನಡೆದಿದೆ.

ಇಲ್ಲಿನ ಮೂಡನಿಡಂಬೂರು ಗ್ರಾಮದ 79 ವರ್ಷದ ಎಂ .ಬಾಲಕೃಷ್ಣ ನಾಯಕ್ ಸಿಂಡಿಕೇಟ್‌ ಬ್ಯಾಂಕ್‌ನಲ್ಲಿ ಸೇವೆ ಸಲ್ಲಿಸಿ ಸದ್ಯ ನಿವೃತ್ತ ಜೀವನ ನಡೆಸುತ್ತಿದ್ದರು. ಏಕಾಂಗಿಯಾಗಿ ವಾಸವಿದ್ದ ಅವರು, ಸರ್ಕಾರಿ ಆಸ್ಪತ್ರೆಯಲ್ಲಿ ವಾರ್ಡ್‌ ಬಾಯ್‌ ಆಗಿ ಕೆಲಸ ಮಾಡಿಕೊಂಡಿರುವ ಹಾವೇರಿಯ ರಮೇಶ್‌ ಮತ್ತು ಆತನ ಪತ್ನಿಗೆ ಮನೆಯಲ್ಲಿ ಉಚಿತ ರೂಮ್‌ ನೀಡಿ ವಾಸಕ್ಕೆ ವ್ಯವಸ್ಥೆ ಮಾಡಿದ್ದರು. ಮನೆ ಮಾಲೀಕ ಬಾಲಕೃಷ್ಣ ನಾಯಕ್ ಅವರ ಎಟಿಎಂ ಕಾರ್ಡ್‌ ಹಾಗೂ ಮೊಬೈಲ್‌ ಒಟಿಪಿ ಬಳಸಿಕೊಂಡು ಬೇರೆ ಬೇರೆ ದಿನಗಳಲ್ಲಿ ರಮೇಶ್ ವಿವಿಧ ಎಟಿಎಂಗಳಿಂದ ಒಟ್ಟು ರೂಪಾಯಿ 9,75,500/- ನ್ನು ಡ್ರಾ ಮಾಡಿ ವಂಚನೆ ಮಾಡಿದ್ದಾನೆ ಅಂತ ಬಾಲಕೃಷ್ಣ ನಾಯಕ್ ಅವರು ಆರೋಪಿಸಿದ್ದಾರೆ.

ಅಲ್ಲದೇ ಮನೆಯಲ್ಲಿದ್ದ 2 ಚಿನ್ನದ ಉಂಗುರಗಳು ಕಾಣೆಯಾಗಿದ್ದು, ಇವುಗಳನ್ನೂ ಸಹ ಆರೋಪಿತನು ತೆಗೆದುಕೊಂಡು ಹೋಗಿರುವ ಬಗ್ಗೆ ಸಂಶಯ ಇರುವುದಾಗಿ ಮನೆ ಮಾಲಿಕ ಬಾಲಕೃಷ್ಣ ಅವರು ದೂರು ನೀಡಿದ್ದಾರೆ. ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು