7:58 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಉಂಡು ಹೋದ ಕೊಂಡು ಹೋದ: ಉಚಿತ ಮನೆ ನೀಡಿದ ಮಾಲೀಕನ ಲಕ್ಷಾಂತರ ರೂ. ನಗದು ಹಾಗೂ ಚಿನ್ನಾಭರಣ ಕಳ್ಳತನ‌

16/10/2022, 10:48

ಉಡುಪಿ(reporterkarnataka.com):
ಉಚಿತವಾಗಿ ಮನೆಯಲ್ಲಿ ಇರಲು ವ್ಯವಸ್ಥೆ ಮಾಡಿದ ಮನೆ ಮಾಲೀಕನ ಬ್ಯಾಂಕ್ ಹಣ ಲಪಟಾಯಿಸಿ, ಮಾಲಿಕನ ಮನೆಯಲ್ಲೂ ಕಳ್ಳತನ ನಡೆಸಿದ ಘಟನೆ ಉಡುಪಿ ನಗರದ ಬನ್ನಂಜೆಯಲ್ಲಿ ನಡೆದಿದೆ.

ಇಲ್ಲಿನ ಮೂಡನಿಡಂಬೂರು ಗ್ರಾಮದ 79 ವರ್ಷದ ಎಂ .ಬಾಲಕೃಷ್ಣ ನಾಯಕ್ ಸಿಂಡಿಕೇಟ್‌ ಬ್ಯಾಂಕ್‌ನಲ್ಲಿ ಸೇವೆ ಸಲ್ಲಿಸಿ ಸದ್ಯ ನಿವೃತ್ತ ಜೀವನ ನಡೆಸುತ್ತಿದ್ದರು. ಏಕಾಂಗಿಯಾಗಿ ವಾಸವಿದ್ದ ಅವರು, ಸರ್ಕಾರಿ ಆಸ್ಪತ್ರೆಯಲ್ಲಿ ವಾರ್ಡ್‌ ಬಾಯ್‌ ಆಗಿ ಕೆಲಸ ಮಾಡಿಕೊಂಡಿರುವ ಹಾವೇರಿಯ ರಮೇಶ್‌ ಮತ್ತು ಆತನ ಪತ್ನಿಗೆ ಮನೆಯಲ್ಲಿ ಉಚಿತ ರೂಮ್‌ ನೀಡಿ ವಾಸಕ್ಕೆ ವ್ಯವಸ್ಥೆ ಮಾಡಿದ್ದರು. ಮನೆ ಮಾಲೀಕ ಬಾಲಕೃಷ್ಣ ನಾಯಕ್ ಅವರ ಎಟಿಎಂ ಕಾರ್ಡ್‌ ಹಾಗೂ ಮೊಬೈಲ್‌ ಒಟಿಪಿ ಬಳಸಿಕೊಂಡು ಬೇರೆ ಬೇರೆ ದಿನಗಳಲ್ಲಿ ರಮೇಶ್ ವಿವಿಧ ಎಟಿಎಂಗಳಿಂದ ಒಟ್ಟು ರೂಪಾಯಿ 9,75,500/- ನ್ನು ಡ್ರಾ ಮಾಡಿ ವಂಚನೆ ಮಾಡಿದ್ದಾನೆ ಅಂತ ಬಾಲಕೃಷ್ಣ ನಾಯಕ್ ಅವರು ಆರೋಪಿಸಿದ್ದಾರೆ.

ಅಲ್ಲದೇ ಮನೆಯಲ್ಲಿದ್ದ 2 ಚಿನ್ನದ ಉಂಗುರಗಳು ಕಾಣೆಯಾಗಿದ್ದು, ಇವುಗಳನ್ನೂ ಸಹ ಆರೋಪಿತನು ತೆಗೆದುಕೊಂಡು ಹೋಗಿರುವ ಬಗ್ಗೆ ಸಂಶಯ ಇರುವುದಾಗಿ ಮನೆ ಮಾಲಿಕ ಬಾಲಕೃಷ್ಣ ಅವರು ದೂರು ನೀಡಿದ್ದಾರೆ. ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು