5:53 PM Thursday23 - April 2026
ಬ್ರೇಕಿಂಗ್ ನ್ಯೂಸ್
ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು…

ಇತ್ತೀಚಿನ ಸುದ್ದಿ

ನಿವೇಶನ ವಾಪಸ್ ಪಡೆಯದಿದ್ದರೆ ಬಿಜೆಪಿಯಿಂದ ಬೃಹತ್ ಹೋರಾಟ: ಕೇಂದ್ರ ಸಚಿವ ಜೋಶಿ ಎಚ್ಚರಿಕೆ

18/02/2026, 20:12

ನವದೆಹಲಿ(reporterkarnataka.com): ನಾಗರಿಕರಿಗೆ ಮೂಲಸೌಕರ್ಯ ಒದಗಿಸಬೇಕಾದ 24ಕ್ಕೂ ಹೆಚ್ಚು ನಿವೇಶನಗಳನ್ನು ಕಾಂಗ್ರೆಸ್ ಕಚೇರಿಗಳಿಗೆ ಬಳಸಲು ಅದೇನು ಕಾಂಗ್ರೆಸ್ ಪಿತ್ರಾರ್ಜಿತ ಆಸ್ತಿಯೇ? ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಕೆಂಡ ಕಾರಿದ್ದಾರೆ.
ರಾಜ್ಯದಲ್ಲಿ ನಾಗರಿಕ ಸೌಲಭ್ಯದ(CA) ನಿವೇಶನಗಳನ್ನು ಕಡಿಮೆ ಬೆಲೆಗೆ, ಕಾಂಗ್ರೆಸ್ ಪಕ್ಷದ ಕಚೇರಿಗಳ ನಿರ್ಮಾಣಕ್ಕೆ ಹಂಚಿಕೆ ಮಾಡಿರುವುದು ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ಪರಮಾವಧಿ ಎಂದು ಕಿಡಿ ಕಾರಿದ್ದಾರೆ.
ಸಾರ್ವಜನಿಕ ಉದ್ಯಾನವನ, ಗ್ರಂಥಾಲಯ, ಆಸ್ಪತ್ರೆಗಳಿಗೆ ಬಳಕೆ ಆಗಬೇಕಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಭೂಮಿಯನ್ನು ‘ಕಾಂಗ್ರೆಸ್ ಭವನ’ಗಳಿಗೆ ಮೀಸಲಿಟ್ಟಿರುವುದು ರಾಜ್ಯದ ಜನತೆಗೆ ಮಾಡಿದ ದ್ರೋಹ ಎಂದು ಖಂಡಿಸಿದ್ದಾರೆ.
ಒಂದೆಡೆ ಬಡವರಿಗೆ ನಿವೇಶನ ನೀಡಲು ಜಾಗವಿಲ್ಲ ಎನ್ನುವ ಈ ಕಾಂಗ್ರೆಸ್ ಸರ್ಕಾರ, ಇನ್ನೊಂದೆಡೆ ತನ್ನ ಪಕ್ಷದ ಕಚೇರಿಗಳಿಗೆ ಬಳಸಿಕೊಳ್ಳುತ್ತಿದೆ. ಈ ಮೂಲಕ ಸಾರ್ವಜನಿಕ ಆಸ್ತಿಯನ್ನು ಕಬಳಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯದ ಸಾರ್ವಜನಿಕ ಆಸ್ತಿಯನ್ನು ಕಾಂಗ್ರೆಸ್ ಪಕ್ಷ ತನ್ನ ಪಿತ್ರಾರ್ಜಿತ ಆಸ್ತಿ ಎಂಬಂತೆ ಬಳಸಿಕೊಳ್ಳುತ್ತಿದೆ. ಬಡವರ ಹಿತ ಕಾಯುವ ಬದಲು ಕಾಂಗ್ರೆಸ್‌ ತನ್ನ ‘ಪಕ್ಷದ ಹಿತ’ಕ್ಕೆ ಸಾರ್ವಜನಿಕ ಆಸ್ತಿಯನ್ನು ಲೂಟಿ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

*ನಿವೇಶನ ವಾಪಸ್ಗೆ ಆಗ್ರಹ:* ಲೂಟಿ ಹೊಡೆಯುವುದೇ ಕಾಂಗ್ರೆಸ್‌ನ ಮೂಲ ಸಿದ್ಧಾಂತ ಎಂಬುದು ಮತ್ತೊಮ್ಮೆ ಸಾಬೀತಾಗಿದೆ ಎಂದಿರುವ ಜೋಶಿ, ಪಕ್ಷದ ಕಚೇರಿಗಳಿಗೆ ಮಾಡಿರುವ ಈ ಅಕ್ರಮ ಹಂಚಿಕೆಯನ್ನು ಕೂಡಲೇ ಹಿಂಪಡೆಯಬೇಕೆಂದು ಆಗ್ರಹಿಸಿದ್ದಾರೆ.

*ಬಿಜೆಪಿಯಿಂದ ಬೃಹತ್ ಹೋರಾಟ:*
ರಾಜ್ಯ ಕಾಂಗ್ರೆಸ್ ಸರ್ಕಾರ ಇದನ್ನು ವಾಪಸ್ ಪಡೆಯದಿದ್ದರೆ ಬಿಜೆಪಿ ಬೃಹತ್ ಹೋರಾಟ ಹಮ್ಮಿಕೊಳ್ಳಲಿದೆ ಎಂದು ಸಚಿವ ಪ್ರಲ್ಹಾದ ಜೋಶಿ ಎಚ್ಚರಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು