5:05 PM Wednesday25 - March 2026
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ

ಇತ್ತೀಚಿನ ಸುದ್ದಿ

ನಟ ಅನಂತನಾಗ್ ದಂಪತಿಯ ಭೇಟಿಯಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ; ಮಾಜಿ ಡಿಸಿಎಂ ಡಾ.ಸಿ.ಎನ್. ಅಶ್ವತ್ಥನಾರಾಯಣ ಉಪಸ್ಥಿತಿ

14/03/2025, 20:48

ಬೆಂಗಳೂರು(reporterkarnataka.com): ಕನ್ನಡ ಚಿತ್ರರಂಗದ ಹಿರಿಯ ನಟ, ಪದ್ಮಭೂಷಣ ಡಾ.ಅನಂತನಾಗ್ ದಂಪತಿಗೆ ಇಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಹೋಳಿ ಹಬ್ಬದ ಶುಭಾಶಯ ಕೋರಿ ಸನ್ಮಾನಿಸಿ ಕುಶಲೋಪರಿ ವಿಚಾರಿಸಿದರು.


ನಟ ಅನಂತನಾಗ ಅವರ ಬೆಂಗಳೂರಿನ ನಿವಾಸಕ್ಕೆ ಇಂದು ಸೌಹಾರ್ದಯುತ ಭೇಟಿ ನೀಡಿದ ಸಚಿವರು ಅನಂತನಾಗ ಮತ್ತು ಗಾಯತ್ರಿ ಅನಂತನಾಗ ಅವರಿಗೆ ಶಾಲು ಹೊದಿಸಿ, ಸುಸ್ಥಿರ ಹಸಿರು ಇಂಧನಕ್ಕೆ ಕೊಡುಗೆ ಎನ್ನುವಂತೆ ಗಿಡ ನೀಡಿ ಅಭಿನಂದಿಸಿದರು. ದಂಪತಿಯ ಕುಶಲೋಪರಿ ವಿಚಾರಿಸಿದ ಸಚಿವರು ಪರಸ್ಪರ ಹೋಳಿ ಹಬ್ಬದ ಶುಭಾಶಯ ಕೋರಿದರು. ಅನಂತನಾಗ್ ಅವರ ಗೃಹದಲ್ಲಿ ನಿರ್ಮಿಸಿದ್ದ ಆರ್ಟ್ ಗ್ಯಾಲರಿ ವೀಕ್ಷಿಸಿ ಸಂತಸಪಟ್ಟರು ಜೋಶಿ.
ಇದೇ ವೇಳೆ ಸಚಿವ ಪ್ರಲ್ಹಾದ ಜೋಶಿ ಮತ್ತು ಕಲಾವಿದ ಅನಂತನಾಗ ಅವರು ಕನ್ನಡ ಚಿತ್ರರಂಗದಲ್ಲಿನ ಪ್ರಸ್ತುತ ವಿದ್ಯಮಾನಗಳ ಬಗ್ಗೆ ಸಹಜ ಚರ್ಚೆ ನಡೆಸಿದರು. ನಮ್ಮ ಕಾಲದ ಸಿನಿ ರಂಗಕ್ಕೂ ಈಗಿನ ಚಿತ್ರೋದ್ಯಮಕ್ಕೂ ತುಂಬಾ ವ್ಯತ್ಯಾಸವಿದೆ. ಸರ್ವ ದಿಶೆಯಲ್ಲೂ ಸ್ಯಾಂಡಲ್ ವುಡ್ ಬದಲಾವಣೆ ಕಂಡಿದೆ ಎಂದು ಸುಪ್ರಸಿದ್ಧ ನಟ ಅನಂತನಾಗ ಅನಿಸಿಕೆ ಹಂಚಿಕೊಂಡರು.
ಪ್ರಸ್ತುತ ದಿನಮಾನದಲ್ಲಿ ಭಾರತದ ಅಭಿವೃದ್ಧಿಪರ ಓಟ, ದೇಶದ ವಿಶಿಷ್ಠ ಇತಿಹಾಸ ಹೀಗೆ ವಿಭಿನ್ನ ವಿಷಯಗಳ ಕುರಿತಂತೆ ಪರಸ್ಪರ ಮಾತುಕತೆ ನಡೆಸಿದರು. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಭಾರತ ಸರ್ಕಾರ ವಿವಿಧ ಕ್ಷೇತ್ರಗಳಲ್ಲಿ ಹೇಗೆ ಪರಿಣಾಮಕಾರಿ ಕೆಲಸ ಮಾಡುತ್ತಿದೆ ಎಂಬುದನ್ನು ಸಚಿವ ಜೋಶಿ ವಿವರಿಸಿದರು.
ಈ ವೇಳೆ ಮಾಜಿ ಉಪಮುಖ್ಯಮಂತ್ರಿ, ಬಿಜೆಪಿ ಶಾಸಕ ಡಾ.ಸಿ.ಎನ್.ಅಶ್ವತ್ಥನಾರಾಯಣ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು