2:51 AM Monday24 - August 2026
ಬ್ರೇಕಿಂಗ್ ನ್ಯೂಸ್
ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು

ಇತ್ತೀಚಿನ ಸುದ್ದಿ

ಅಂಜನೇಯ ರಥ ಎಳೆದು ಭಕ್ತಿ ಸಮರ್ಪಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ: ಮನೆದೇವರು ಕುಲಗೋಡು ಹನುಮನಿಗೆ ವಿಶೇಷ ಪೂಜೆ

12/04/2025, 15:46

ಹುಬ್ಬಳ್ಳಿ(reporterkarnataka.com): ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಇಂದು ಹನುಮ ಜಯಂತಿ ಪ್ರಯುಕ್ತ ಬೆಳಗಾವಿ ಜಿಲ್ಲೆ ಕುಲಗೋಡ ಗ್ರಾಮದ ಪ್ರಸಿದ್ಧ ಶ್ರೀ ಆಂಜನೇಯ ದೇವಸ್ಥಾನಕ್ಕೆ ವಿಶೇಷ ಪೂಜೆ ನೆರವೇರಿಸಿದರು.


ಶನಿವಾರ ಮುಂಜಾನೆಯೇ ತಮ್ಮ ಮನೆದೇವರಾದ ಕುಲಗೋಡ ಶ್ರೀ ಹನುಮ ಮಂದಿರಕ್ಕೆ ಕುಟುಂಬ ಸಮೇತ ತೆರಳಿದ ಸಚಿವರು ರಾಮದೂತ ಹನುಮನನ್ನು ಸ್ತುತಿಸುತ್ತ ಭಕ್ತಿ ಸಮರ್ಪಿಸಿದರು. ಶ್ರೀರಾಮ ಮತ್ತು ಹನುಮ ದೇವರ ಭಜನೆಗೈದು ದೇವರ ಕೃಪೆಗೆ ಪಾತ್ರರಾದರು.
ದೇಗುಲದ ಪ್ರಾಂಗಣದಲ್ಲಿ ಶ್ರೀ ಆಂಜನೇಯ ಅಲಂಕೃತ ರಥವನ್ನೆಳೆದು ಲೋಕ ಕಲ್ಯಾಣಕ್ಕೆ ಪ್ರಾರ್ಥಿಸಿದರು. ಸಹೋದರ ಗೋವಿಂದ ಜೋಶಿ ಮತ್ತು ಕುಟುಂಬದ ಸದಸ್ಯರೂ ಈ ವಿಶೇಷ ಧಾರ್ಮಿಕ ಕಾರ್ಯದಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು