9:16 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಯುನಿಸೆಕ್ಸ್ ಸಲೂನ್, ಮಸಾಜ್ ಪಾರ್ಲರ್ ಹೆಸರಿನಲ್ಲಿ ಅನೈತಿಕ ದಂಧೆ ನಿಲ್ಲಿಸಿ: ಪೊಲೀಸ್ ಕಮಿಷನರ್ ಗೆ ಶಾಸಕ ಕಾಮತ್ ಆಗ್ರಹ

25/01/2025, 20:20

ಮಂಗಳೂರು(reporterkarnataka.com):ನಗರದಾದ್ಯಂತ ಯುನಿಸೆಕ್ಸ್ ಸಲೂನ್, ಮಸಾಜ್ ಪಾರ್ಲರ್ ಹೆಸರಿನಲ್ಲಿ ವೇಶ್ಯಾವಾಟಿಕೆ, ಅನೈತಿಕ ದಂಧೆ ನಡೆಯುತ್ತಿರುವ ಬಗ್ಗೆ ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಶಾಸಕ ವೇದವ್ಯಾಸ್ ಕಾಮತ್ ‌ಅವರು ನಗರ ಪೊಲೀಸ್ ಆಯುಕ್ತರನ್ನು ಆಗ್ರಹಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಜಿಲ್ಲೆಯಲ್ಲಿ ಅನೈತಿಕ ಚಟುವಟಿಕೆಗಳು ಯಾವುದೇ ಭಯವಿಲ್ಲದೇ ನಡೆಯಲಾರಂಭಿಸಿವೆ. ಈ ಬಗ್ಗೆ ವಿಶ್ವ ಹಿಂದೂ ಪರಿಷತ್ ಮಂಗಳೂರು ರವರು ನನ್ನ ಸಹಿತ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಗೂ ಮನವಿ ಸಲ್ಲಿಸಿದ್ದು ಅವರ ಕಾಳಜಿಗೆ ನನ್ನ ಸಂಪೂರ್ಣ ಸಹಕಾರವಿದೆ. ನಿಯಮಬದ್ಧವಾಗಿ ನಡೆಯುವ ಯುನಿಸೆಕ್ಸ್ ಸಲೂನ್ ಗಳಿಗೆ ಯಾರದ್ದೂ ಅಭ್ಯಂತರವಿಲ್ಲ. ಆದರೆ ಯುನಿಸೆಕ್ಸ್ ಸೆಲೂನ್, ಮಸಾಜ್ ಪಾರ್ಲರ್ ಹೆಸರಿನಲ್ಲಿ ನಡೆಯುತ್ತಿರುವ ಡ್ರಗ್ಸ್ ಮಾಫಿಯಾ, ಸೆಕ್ಸ್ ಮಾಫಿಯಾ, ಅನೈತಿಕ ದಂಧೆಗಳಿಗೆ ಎಲ್ಲರ ವಿರೋಧವಿದ್ದು ಇಂತಹವುಗಳ ಪರವಾನಿಗೆಯನ್ನೇ ರದ್ದುಗೊಳಿಸಬೇಕು ಎಂದರು.
ಅಪ್ರಾಪ್ತ ವಯಸ್ಸಿನ ಮಕ್ಕಳು ಸಹ ಈ ದಂಧೆಯ ಬಲಿಪಶುಗಳಾಗುತ್ತಿರುವುದು ಗಂಭೀರ ಸ್ವರೂಪದ್ದಾಗಿದ್ದು ಇನ್ನೂ ಸಹ ನಿರ್ಲಕ್ಷ್ಯ ವಹಿಸಿ ಮತ್ತೇನಾದರೂ ಅಹಿತಕರ ಘಟನೆಗಳು ನಡೆದರೆ ಅದರ ನೇರ ಹೊಣೆಯನ್ನು ಸರ್ಕಾರ ಹಾಗೂ ಪೊಲೀಸ್ ಇಲಾಖೆಯೇ ಹೊರಬೇಕಾಗುತ್ತದೆ ಎಂದು ಶಾಸಕರು ಎಚ್ಚರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು