2:23 PM Wednesday29 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಯುನಿಸೆಕ್ಸ್ ಸಲೂನ್, ಮಸಾಜ್ ಪಾರ್ಲರ್ ಹೆಸರಿನಲ್ಲಿ ಅನೈತಿಕ ದಂಧೆ ನಿಲ್ಲಿಸಿ: ಪೊಲೀಸ್ ಕಮಿಷನರ್ ಗೆ ಶಾಸಕ ಕಾಮತ್ ಆಗ್ರಹ

25/01/2025, 20:20

ಮಂಗಳೂರು(reporterkarnataka.com):ನಗರದಾದ್ಯಂತ ಯುನಿಸೆಕ್ಸ್ ಸಲೂನ್, ಮಸಾಜ್ ಪಾರ್ಲರ್ ಹೆಸರಿನಲ್ಲಿ ವೇಶ್ಯಾವಾಟಿಕೆ, ಅನೈತಿಕ ದಂಧೆ ನಡೆಯುತ್ತಿರುವ ಬಗ್ಗೆ ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಶಾಸಕ ವೇದವ್ಯಾಸ್ ಕಾಮತ್ ‌ಅವರು ನಗರ ಪೊಲೀಸ್ ಆಯುಕ್ತರನ್ನು ಆಗ್ರಹಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಜಿಲ್ಲೆಯಲ್ಲಿ ಅನೈತಿಕ ಚಟುವಟಿಕೆಗಳು ಯಾವುದೇ ಭಯವಿಲ್ಲದೇ ನಡೆಯಲಾರಂಭಿಸಿವೆ. ಈ ಬಗ್ಗೆ ವಿಶ್ವ ಹಿಂದೂ ಪರಿಷತ್ ಮಂಗಳೂರು ರವರು ನನ್ನ ಸಹಿತ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಗೂ ಮನವಿ ಸಲ್ಲಿಸಿದ್ದು ಅವರ ಕಾಳಜಿಗೆ ನನ್ನ ಸಂಪೂರ್ಣ ಸಹಕಾರವಿದೆ. ನಿಯಮಬದ್ಧವಾಗಿ ನಡೆಯುವ ಯುನಿಸೆಕ್ಸ್ ಸಲೂನ್ ಗಳಿಗೆ ಯಾರದ್ದೂ ಅಭ್ಯಂತರವಿಲ್ಲ. ಆದರೆ ಯುನಿಸೆಕ್ಸ್ ಸೆಲೂನ್, ಮಸಾಜ್ ಪಾರ್ಲರ್ ಹೆಸರಿನಲ್ಲಿ ನಡೆಯುತ್ತಿರುವ ಡ್ರಗ್ಸ್ ಮಾಫಿಯಾ, ಸೆಕ್ಸ್ ಮಾಫಿಯಾ, ಅನೈತಿಕ ದಂಧೆಗಳಿಗೆ ಎಲ್ಲರ ವಿರೋಧವಿದ್ದು ಇಂತಹವುಗಳ ಪರವಾನಿಗೆಯನ್ನೇ ರದ್ದುಗೊಳಿಸಬೇಕು ಎಂದರು.
ಅಪ್ರಾಪ್ತ ವಯಸ್ಸಿನ ಮಕ್ಕಳು ಸಹ ಈ ದಂಧೆಯ ಬಲಿಪಶುಗಳಾಗುತ್ತಿರುವುದು ಗಂಭೀರ ಸ್ವರೂಪದ್ದಾಗಿದ್ದು ಇನ್ನೂ ಸಹ ನಿರ್ಲಕ್ಷ್ಯ ವಹಿಸಿ ಮತ್ತೇನಾದರೂ ಅಹಿತಕರ ಘಟನೆಗಳು ನಡೆದರೆ ಅದರ ನೇರ ಹೊಣೆಯನ್ನು ಸರ್ಕಾರ ಹಾಗೂ ಪೊಲೀಸ್ ಇಲಾಖೆಯೇ ಹೊರಬೇಕಾಗುತ್ತದೆ ಎಂದು ಶಾಸಕರು ಎಚ್ಚರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು