3:41 PM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಯುನಿಸೆಕ್ಸ್ ಸಲೂನ್, ಮಸಾಜ್ ಪಾರ್ಲರ್ ಹೆಸರಿನಲ್ಲಿ ಅನೈತಿಕ ದಂಧೆ ನಿಲ್ಲಿಸಿ: ಪೊಲೀಸ್ ಕಮಿಷನರ್ ಗೆ ಶಾಸಕ ಕಾಮತ್ ಆಗ್ರಹ

25/01/2025, 20:20

ಮಂಗಳೂರು(reporterkarnataka.com):ನಗರದಾದ್ಯಂತ ಯುನಿಸೆಕ್ಸ್ ಸಲೂನ್, ಮಸಾಜ್ ಪಾರ್ಲರ್ ಹೆಸರಿನಲ್ಲಿ ವೇಶ್ಯಾವಾಟಿಕೆ, ಅನೈತಿಕ ದಂಧೆ ನಡೆಯುತ್ತಿರುವ ಬಗ್ಗೆ ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಿ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಶಾಸಕ ವೇದವ್ಯಾಸ್ ಕಾಮತ್ ‌ಅವರು ನಗರ ಪೊಲೀಸ್ ಆಯುಕ್ತರನ್ನು ಆಗ್ರಹಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಜಿಲ್ಲೆಯಲ್ಲಿ ಅನೈತಿಕ ಚಟುವಟಿಕೆಗಳು ಯಾವುದೇ ಭಯವಿಲ್ಲದೇ ನಡೆಯಲಾರಂಭಿಸಿವೆ. ಈ ಬಗ್ಗೆ ವಿಶ್ವ ಹಿಂದೂ ಪರಿಷತ್ ಮಂಗಳೂರು ರವರು ನನ್ನ ಸಹಿತ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಗೂ ಮನವಿ ಸಲ್ಲಿಸಿದ್ದು ಅವರ ಕಾಳಜಿಗೆ ನನ್ನ ಸಂಪೂರ್ಣ ಸಹಕಾರವಿದೆ. ನಿಯಮಬದ್ಧವಾಗಿ ನಡೆಯುವ ಯುನಿಸೆಕ್ಸ್ ಸಲೂನ್ ಗಳಿಗೆ ಯಾರದ್ದೂ ಅಭ್ಯಂತರವಿಲ್ಲ. ಆದರೆ ಯುನಿಸೆಕ್ಸ್ ಸೆಲೂನ್, ಮಸಾಜ್ ಪಾರ್ಲರ್ ಹೆಸರಿನಲ್ಲಿ ನಡೆಯುತ್ತಿರುವ ಡ್ರಗ್ಸ್ ಮಾಫಿಯಾ, ಸೆಕ್ಸ್ ಮಾಫಿಯಾ, ಅನೈತಿಕ ದಂಧೆಗಳಿಗೆ ಎಲ್ಲರ ವಿರೋಧವಿದ್ದು ಇಂತಹವುಗಳ ಪರವಾನಿಗೆಯನ್ನೇ ರದ್ದುಗೊಳಿಸಬೇಕು ಎಂದರು.
ಅಪ್ರಾಪ್ತ ವಯಸ್ಸಿನ ಮಕ್ಕಳು ಸಹ ಈ ದಂಧೆಯ ಬಲಿಪಶುಗಳಾಗುತ್ತಿರುವುದು ಗಂಭೀರ ಸ್ವರೂಪದ್ದಾಗಿದ್ದು ಇನ್ನೂ ಸಹ ನಿರ್ಲಕ್ಷ್ಯ ವಹಿಸಿ ಮತ್ತೇನಾದರೂ ಅಹಿತಕರ ಘಟನೆಗಳು ನಡೆದರೆ ಅದರ ನೇರ ಹೊಣೆಯನ್ನು ಸರ್ಕಾರ ಹಾಗೂ ಪೊಲೀಸ್ ಇಲಾಖೆಯೇ ಹೊರಬೇಕಾಗುತ್ತದೆ ಎಂದು ಶಾಸಕರು ಎಚ್ಚರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು