5:00 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಪಿಎಂ ಗ್ರಾಮ ಸಡಕ ಯೋಜನೆಗಿಂತ ಭಿನ್ನವಾಗಿ ಪ್ರಗತಿ ಪಥ ಯೋಜನೆ ತಿಂಗಳೊಳಗೆ ಜಾರಿ: ಸಚಿವ ಪ್ರಿಯಾಂಕ್ ಖರ್ಗೆ

23/02/2025, 11:47

ಮಂಗಳೂರು(reporterkarnataka.com): ಸರಕಾರದ ವಿರುದ್ಧ ದುಡ್ಡಿಲ್ಲ ಎಂದು ಸುಮ್ಮನೆ ಅಪಪ್ರಚಾರ ಮಾಡಲಾಗುತ್ತಿದೆ. ದುಡ್ಡಿಲ್ಲ ಎಂದು ಯಾವ ಕಾಮಗಾರಿಯನ್ನೂ ನಿಲ್ಲಿಸಲಾಗಿಲ್ಲ. ಪ್ರಧಾನ ಮಂತ್ರಿ ಗ್ರಾಮ ಸಡಕ ಯೋಜನೆಗಿಂತ ಭಿನ್ನವಾಗಿ ಪ್ರಗತಿ ಪಥ ಎಂಬ ಯೋಜನೆಯನ್ನು ರಾಜ್ಯ ಸರಕಾರ ಒಂದು ತಿಂಗಳೊಳಗೆ ಜಾರಿಗೊಳಿಸಲಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಗ್ರಾಮ ಸ್ವರಾಜ್ ಪ್ರತಿಷ್ಠಾನ ನೇತೃತ್ವದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಪಂಚಾಯತ್ ಹಾಗೂ ಇತರ ಸ್ಥಳೀಯಾಡಳಿತ ಸಂಸ್ಥೆಗಳ ಸಹಕಾರದೊಂದಿಗೆ ಮಂಗಳೂರು ಅಡ್ಯಾರ್ ಸಹ್ಯಾದ್ರಿ ಕ್ಯಾಂಪಸ್ ನಲ್ಲಿ ಶನಿವಾರ ನಡೆದ ‘ಹೊಂಬೆಳಕು’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿ ಪ್ರಗತಿ ಪಥ ಹೆಸರಿನಲ್ಲಿ 7110 ಕಿ.ಮೀ. ಗ್ರಾಮೀಣ ರಸ್ತೆಗಳಿಗೆ 5190 ಕೋಟಿ ರೂ.ಗಳನ್ನು ಖರ್ಚು ಮಾಡಲಾ ಗು‌ತ್ತದೆ. ಇಲ್ಲಿ ಪ್ರಗತಿ ಪಥವಾದರೆ, ನಮ್ಮಲ್ಲಿ ಕಲ್ಯಾಣ ಪಥದಡಿ 1150 ಕಿ.ಮೀ. ರಸ್ತೆಯನ್ನು 1 ಸಾವಿರ ಕೋಟಿ ರೂ.ಗಳಲ್ಲಿ ಅಭಿವೃದ್ಧಿಪಡಿಸಲಾಗುವುದು. ಮುಂದಿನ ಶನಿವಾರ ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಚಾಲನೆ ನೀಡಲಿದ್ದಾರೆ ಎಂದು ಅವರು ಹೇಳಿದರು.
ಪಾಕೃತಿಕ ವಿಕೋಪದಿಂದ ಹಾಳಾಗಿರುವ ಗ್ರಾಮೀಣ ರಸ್ತೆಗಳ ದುರಸ್ತಿಗೆ ಪ್ರತಿ ಕ್ಷೇತ್ರಕ್ಕೆ ತಲಾ 10 ಕೋಟಿ ರೂ.ಗಳಂತೆ 189 ಕ್ಷೇತ್ರಗಳಿಗೆ 1890 ಕೋಟಿ ರೂ. ಬಿಡುಗಡೆ ಕೆಲವೆಡೆ ಕೆಲಸ ಆರಂಭವಾಗಿದೆ. . ರಾಜ್ಯದ 5770 ಅರಿವು ಕೇಂದ್ರಗಳಲ್ಲಿ 51 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿದ್ದು, ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗುತ್ತಿದ್ದಾರೆ. ಕೆಎಎಸ್ ಪ್ರಿಲಿಮ್ಸ್‌ನಲ್ಲಿಯೂ ಅರಿವು ಕೇಂದ್ರದಲ್ಲಿ ತರಬೇತು ಹೊಂದಿದ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಭಾರತ ಸರಕಾರದ ಸ್ವಚ್ಛ ಭಾರತದ ಕನಸು ನನಸಾಗಿಸಲು ರಾಜ್ಯದಲ್ಲಿ 5712 ಘನತ್ಯಾಜ್ಯ ವಿಲೇವಾರಿ ಘಟಕಗಳಿಗೆ ತಲಾ 2 ಕೋಟಿ ರೂ. ಖರ್ಚು ಮಾಡಲಾಗುತ್ತಿದ್ದು, ಅವಿಭಜಿತ ದ.ಕ. ಜಿಲ್ಲೆಯಲ್ಲಿ ಈ ಘಟಕಗಳು ಅತ್ಯಂತ ಪರಿಣಾಮಕಾರಿ ಕಾರ್ಯಗತವಾಗುತ್ತಿವೆ ಎಂದು ಅವರು ಹೇಳಿದರು.
2005ರಲ್ಲಿ ಜಾರಿಗೆ ತಂದ ಉದ್ಯೋಗ ಖಾತ್ರಿ ಯೋಜನೆಯಡಿ ನಮ್ಮ ಇಲಾಖೆಯಿಂದ 13 ಕೋಟಿ ಮಾನವ ದಿನ ಸೃಷ್ಟಿಸುವ ಗುರಿ ಹೊಂದಲಾಗಿದೆ. 27 ಲಕ್ಷ ಕುಟುಂಬಗಳ 47 ಲಕ್ಷ ಜನ ಇದರ ಪ್ರಯೋಜನ ಪಡೆದಿದ್ದಾರೆ ಎಂದು ಸಚಿವರು ತಿಳಿಸಿದರು.
ಸರಕಾರ ಹಂತದಲ್ಲಿ ಆಗದ 1466000 ಸಣ್ಣ ಪುಟ್ಟ ಕಾಮಗಾರಿಗಳನ್ನು ಸ್ಥಳೀಯಾಡಳಿತದ ಮೂಲಕ ನಡೆಯುತ್ತಿದೆ. ಕೂಸಿನ ಮನೆ ಎಂಬ ವಿನೂತ 3867 ಕೂಸಿನ ಮನೆಗಳು ರಾಜ್ಯಾದ್ಯಂತ ನಡೆಯುತ್ತಿದೆ ಎಂದರು.
ವೇದಿಕೆಯಲ್ಲಿ, ಹಜ್ ಸಚಿವ ರಹೀಮ್ ಖಾನ್,ಸಂಸದ ಬ್ರಿಜೇಶ್ ಚೌಟ, ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಅಶೋಕ್ ರೈ, ಉಮಾನಾಥ ಕೋಟ್ಯಾನ್, ಐವನ್ ಡಿಸೋಜಾ, ಕಿಶೋರ್ ಕುಮಾರ್, ಮಾಜಿ ಶಾಸಕ ಅಭಯ ಚಂದ್ರ ಜೈನ್, ಶಕುಂತಳಾ ಶೆಟ್ಟಿ ಮತ್ತಿತರರು ಇದ್ದರು.
ಶಾಸಕ ಮಂಜುನಾಥ ಭಂಢಾರಿ ಸ್ವಾಗತಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು