10:00 AM Sunday15 - June 2025
ಬ್ರೇಕಿಂಗ್ ನ್ಯೂಸ್
Kalburgi | ಮೀಸಲಾತಿ, ಜಾತಿ ಗಣತಿ ಕಾಂಗ್ರೆಸ್ಸಿನ ರಾಜಕೀಯ ಡ್ರಾಮಾ: ಕೇಂದ್ರ ಸಚಿವ… ಆರೋಗ್ಯ ಆವಿಷ್ಕಾರ’ದಂತಹ ಕಾರ್ಯಕ್ರಮ ಬಿಜೆಪಿ ಕಲ್ಪನೆಗೂ ಬರಲಿಕ್ಕೆ ಸಾಧ್ಯವಿಲ್ಲ: ಆರೋಗ್ಯ ಸಚಿವ ದಿನೇಶ್… Mangaluru | ಕೋಮು ಹಿಂಸಾಚಾರ ಹತ್ತಿಕ್ಕಲು ವಿಶೇಷ ಕಾರ್ಯಪಡೆ ರೆಡಿ: 4 ತುಕಡಿಗಳ… ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಮರು ಸಮೀಕ್ಷೆಗೆ ಸಚಿವ ಸಂಪುಟ ತೀರ್ಮಾನ: ಮುಖ್ಯಮಂತ್ರಿ… ಲಕ್ಕೀ ಲೇಡಿ: ಟ್ರಾಫಿಕ್ ನಲ್ಲಿ 10 ನಿಮಿಷ ಸಿಲುಕಿದ ಮಹಿಳೆಗೆ ಫ್ಲೈಟ್ ಮಿಸ್;… ಅಹಮದಾಬಾದ್: ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಏರ್ ಇಂಡಿಯಾ ಬೋಯಿಂಗ್ ಪತನ; ಬೆಂಕಿಯುಂಡೆಯಾದ… New Delhi | ಕೇಂದ್ರ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ… Mangaluru | ಕೋಮು ನಿಗ್ರಹ ಪಡೆ ಮುಖ್ಯಸ್ಥರಾಗಿ ಅಮಿತ್ ಸಿಂಗ್ ನೇಮಕ: ತುಳುನಾಡು,… ಕುಂಭಮೇಳದಲ್ಲಿ ನಾಪತ್ತೆಯಾಗಿದ್ದ ಚಿಕ್ಕಮಗಳೂರು ಜಿಲ್ಲೆಯ ವೃದ್ಧ 6 ತಿಂಗಳ ಬಳಿಕ ಪತ್ತೆ!: ಕಡೂರು… ಪೆಹಲ್ಗಾಮ್ ನಲ್ಲಿ 26 ಜನ ಸತ್ರು, ಕೇಂದ್ರದ ಫೆಯ್ಯ್ಲೂರು, ನಾವು ಪ್ರಧಾನಿ ರಾಜೀನಾಮೆ…

ಇತ್ತೀಚಿನ ಸುದ್ದಿ

ಅನ್ ಲಾಕ್ ಆಗುತ್ತಿದ್ದಂತೆ ರಥಬೀದಿಯಲ್ಲಿ ಫುಟ್ ಪಾತ್ ಏರುವ ವಾಹನಗಳು !: ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ !!

05/07/2021, 14:52

ಮಂಗಳೂರು(reporterkarnataka news): 

ಇಡೀ ರಾಜ್ಯವೇ ಅನ್ ಲಾಕ್ ಆಗುತ್ತಿದ್ದಂತೆ ಕಡಲನಗರಿ ಮಂಗಳೂರು ಕೂಡ ಸೋಮವಾರದಿಂದ ಪೂರ್ಣ ಪ್ರಮಾಣದಲ್ಲಿ ತೆರೆದುಕೊಂಡಿದೆ. ಎರಡು ತಿಂಗಳ ಲಾಕ್ ಡೌನ್ ಬಳಿಕ ನಗರದಲ್ಲಿ ಮತ್ತೆ ಚಟುವಟಿಕೆಗಳು ಗರಿಗೆದರುತ್ತಿದ್ದಂತೆ, ಇತ್ತ ನಗರದ ರಥಬೀದಿಯಲ್ಲಿ ಮಾನವ ನಿರ್ಮಿತ ಸಮಸ್ಯೆಗಳು ತಲೆ ಎತ್ತಲಾರಂಭಿದೆ. ‘ಹಿರಿಯಕ್ಕನ ಚಾಳಿ ಮನೆ ಮಂದಿಗೆ’ ಎನ್ನುವಂತೆ ರಥಬೀದಿಯಲ್ಲಿ ಫುಟ್ ಪಾತ್ ಮೇಲೆ ವಾಹನ ಪಾರ್ಕ್ ಮಾಡುವ ಕೆಟ್ಟ ಪರಂಪರೆ ಮತ್ತೆ ಮುಂದುವರಿದಿದೆ.

ಕಡಲನಗರಿಯ ಒಡಲಿನಲ್ಲಿರುವ ರಥಬೀದಿಯ ನಿವಾಸಿಗಳ ದಶಕಗಳ ಹೋರಾಟದ ಫಲವಾಗಿ ಇಲ್ಲಿನ ರಸ್ತೆ ಅಗಲೀಕರಣ ನಡೆದಿದೆ. ಕಿತ್ತು ಹೋದ ಫುಟ್ ಪಾತ್ ಗಳಿಗೆ ಬಣ್ಣದ ಹಾಸುಗಲ್ಲುಗಳನ್ನು ಹಾಸಲಾಗಿದೆ. ಆದರೆ ಇವೆಲ್ಲವೂ ‘ಎಲ್ಲ ಬಣ್ಣವನ್ನು ಮಸಿ ನುಂಗಿತು’ ಎನ್ನುವ ಹಾಗೆ ಆಗಿದೆ. ಜನರು ಓಡಾಡಲು ಮಾಡಿರುವ ಸುಸಜ್ಜಿತ ಫುಟ್ ಪಾತ್ ಕೆಲವರಿಗೆ ಕಾರು ಪಾರ್ಕಿಂಗ್ ಮಾಡುವ ಸ್ಥಳವಾಗಿ ಪರಿವರ್ತನೆಗೊಂಡಿದೆ. ಇದರಿಂದ ಪಾದಚಾರಿಗಳು ತೊಂದರೆ ಅನುಭವಿಸಬೇಕಾಗಿದೆ.

ಈ ಕುರಿತು ರಿಪೋರ್ಟರ್ ಕರ್ನಾಟಕ ಮಾರ್ಚ್ 13 ಮತ್ತು ಮಾರ್ಚ್ 21ರ ಸಂಚಿಕೆಯಲ್ಲಿ ಸಚಿತ್ರ ವರದಿ ಮಾಡಿತ್ತು. ಇದರ ಪರಿಣಾಮ ಕೆಲವು ದಿನ ಇಲ್ಲಿನ ಫುಟ್ ಪಾತ್ ಗಳು ವಾಹನ ಮುಕ್ತವಾಗಿದ್ದರೂ ಇದೀಗ ಮತ್ತೆ ಅದೇ ದೃಶ್ಯ ಕೆಲವು ಕಡೆ ಕಂಡು ಬರಲಾರಂಭಿಸಿದೆ. ಮಂಗಳೂರು ಅನ್ ಲಾಕ್ ಆಗುತ್ತಿದ್ದಂತೆ ಫುಟ್ ಪಾತ್ ಗೆ ಅಡ್ಡವಾಗಿ ಕಾರು, ದ್ವಿಚಕ್ರ ವಾಹನಗಳನ್ನು ನಿಲ್ಲಿಸುವುದು ಶುರುವಾಗಿದೆ.

ಫುಟ್ ಪಾತ್ ನಲ್ಲಿ ಒಂದಿಬ್ಬರು ವಾಹನಗಳನ್ನು ನಿಲ್ಲಿಸಿದರೆ ಸಾಕು. ನಂತರ ವಾಹನಗಳ ಮಾಲೀಕರು ಸ್ಪರ್ಧೆಗೆ ಇಳಿದಂತೆ ತಮ್ಮ ವಾಹನಗಳನ್ನು ಫುಟ್ ಪಾತ್ ಏರಿಸುತ್ತಾರೆ. ಇವರಿಗಂತು ತಾನು ನಿಯಮ ಮುರಿಯುತ್ತಿದ್ದೇನೆ, ಕಾನೂನು ಉಲ್ಲಘಿಸುತ್ತಿದ್ದೇನೆ ಎಂಬ ಪಾಪ ಪ್ರಜ್ಞೆಯೇ ಇರುವುದಿಲ್ಲ. ಆದರೆ ಜನರು ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡುವಂತೆ ಮಾಡುವ ಪೊಲೀಸ್ ಇಲಾಖೆಯಾದರೂ ಏನು ಮಾಡುತ್ತಿದೆ? ಟ್ರಾಫಿಕ್ ಪೊಲೀಸರು ಇಲ್ಲಿಗೆ ಡ್ಯೂಟಿಗೆ ಬರುವುದಿಲ್ವೇ? ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು