9:19 PM Friday19 - June 2026
ಬ್ರೇಕಿಂಗ್ ನ್ಯೂಸ್
ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.…

ಇತ್ತೀಚಿನ ಸುದ್ದಿ

ಅನ್ ಲಾಕ್ ಆಗುತ್ತಿದ್ದಂತೆ ರಥಬೀದಿಯಲ್ಲಿ ಫುಟ್ ಪಾತ್ ಏರುವ ವಾಹನಗಳು !: ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ !!

05/07/2021, 14:52

ಮಂಗಳೂರು(reporterkarnataka news): 

ಇಡೀ ರಾಜ್ಯವೇ ಅನ್ ಲಾಕ್ ಆಗುತ್ತಿದ್ದಂತೆ ಕಡಲನಗರಿ ಮಂಗಳೂರು ಕೂಡ ಸೋಮವಾರದಿಂದ ಪೂರ್ಣ ಪ್ರಮಾಣದಲ್ಲಿ ತೆರೆದುಕೊಂಡಿದೆ. ಎರಡು ತಿಂಗಳ ಲಾಕ್ ಡೌನ್ ಬಳಿಕ ನಗರದಲ್ಲಿ ಮತ್ತೆ ಚಟುವಟಿಕೆಗಳು ಗರಿಗೆದರುತ್ತಿದ್ದಂತೆ, ಇತ್ತ ನಗರದ ರಥಬೀದಿಯಲ್ಲಿ ಮಾನವ ನಿರ್ಮಿತ ಸಮಸ್ಯೆಗಳು ತಲೆ ಎತ್ತಲಾರಂಭಿದೆ. ‘ಹಿರಿಯಕ್ಕನ ಚಾಳಿ ಮನೆ ಮಂದಿಗೆ’ ಎನ್ನುವಂತೆ ರಥಬೀದಿಯಲ್ಲಿ ಫುಟ್ ಪಾತ್ ಮೇಲೆ ವಾಹನ ಪಾರ್ಕ್ ಮಾಡುವ ಕೆಟ್ಟ ಪರಂಪರೆ ಮತ್ತೆ ಮುಂದುವರಿದಿದೆ.

ಕಡಲನಗರಿಯ ಒಡಲಿನಲ್ಲಿರುವ ರಥಬೀದಿಯ ನಿವಾಸಿಗಳ ದಶಕಗಳ ಹೋರಾಟದ ಫಲವಾಗಿ ಇಲ್ಲಿನ ರಸ್ತೆ ಅಗಲೀಕರಣ ನಡೆದಿದೆ. ಕಿತ್ತು ಹೋದ ಫುಟ್ ಪಾತ್ ಗಳಿಗೆ ಬಣ್ಣದ ಹಾಸುಗಲ್ಲುಗಳನ್ನು ಹಾಸಲಾಗಿದೆ. ಆದರೆ ಇವೆಲ್ಲವೂ ‘ಎಲ್ಲ ಬಣ್ಣವನ್ನು ಮಸಿ ನುಂಗಿತು’ ಎನ್ನುವ ಹಾಗೆ ಆಗಿದೆ. ಜನರು ಓಡಾಡಲು ಮಾಡಿರುವ ಸುಸಜ್ಜಿತ ಫುಟ್ ಪಾತ್ ಕೆಲವರಿಗೆ ಕಾರು ಪಾರ್ಕಿಂಗ್ ಮಾಡುವ ಸ್ಥಳವಾಗಿ ಪರಿವರ್ತನೆಗೊಂಡಿದೆ. ಇದರಿಂದ ಪಾದಚಾರಿಗಳು ತೊಂದರೆ ಅನುಭವಿಸಬೇಕಾಗಿದೆ.

ಈ ಕುರಿತು ರಿಪೋರ್ಟರ್ ಕರ್ನಾಟಕ ಮಾರ್ಚ್ 13 ಮತ್ತು ಮಾರ್ಚ್ 21ರ ಸಂಚಿಕೆಯಲ್ಲಿ ಸಚಿತ್ರ ವರದಿ ಮಾಡಿತ್ತು. ಇದರ ಪರಿಣಾಮ ಕೆಲವು ದಿನ ಇಲ್ಲಿನ ಫುಟ್ ಪಾತ್ ಗಳು ವಾಹನ ಮುಕ್ತವಾಗಿದ್ದರೂ ಇದೀಗ ಮತ್ತೆ ಅದೇ ದೃಶ್ಯ ಕೆಲವು ಕಡೆ ಕಂಡು ಬರಲಾರಂಭಿಸಿದೆ. ಮಂಗಳೂರು ಅನ್ ಲಾಕ್ ಆಗುತ್ತಿದ್ದಂತೆ ಫುಟ್ ಪಾತ್ ಗೆ ಅಡ್ಡವಾಗಿ ಕಾರು, ದ್ವಿಚಕ್ರ ವಾಹನಗಳನ್ನು ನಿಲ್ಲಿಸುವುದು ಶುರುವಾಗಿದೆ.

ಫುಟ್ ಪಾತ್ ನಲ್ಲಿ ಒಂದಿಬ್ಬರು ವಾಹನಗಳನ್ನು ನಿಲ್ಲಿಸಿದರೆ ಸಾಕು. ನಂತರ ವಾಹನಗಳ ಮಾಲೀಕರು ಸ್ಪರ್ಧೆಗೆ ಇಳಿದಂತೆ ತಮ್ಮ ವಾಹನಗಳನ್ನು ಫುಟ್ ಪಾತ್ ಏರಿಸುತ್ತಾರೆ. ಇವರಿಗಂತು ತಾನು ನಿಯಮ ಮುರಿಯುತ್ತಿದ್ದೇನೆ, ಕಾನೂನು ಉಲ್ಲಘಿಸುತ್ತಿದ್ದೇನೆ ಎಂಬ ಪಾಪ ಪ್ರಜ್ಞೆಯೇ ಇರುವುದಿಲ್ಲ. ಆದರೆ ಜನರು ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡುವಂತೆ ಮಾಡುವ ಪೊಲೀಸ್ ಇಲಾಖೆಯಾದರೂ ಏನು ಮಾಡುತ್ತಿದೆ? ಟ್ರಾಫಿಕ್ ಪೊಲೀಸರು ಇಲ್ಲಿಗೆ ಡ್ಯೂಟಿಗೆ ಬರುವುದಿಲ್ವೇ? ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು