11:04 AM Sunday3 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಅನ್ ಲಾಕ್ ಆಗುತ್ತಿದ್ದಂತೆ ರಥಬೀದಿಯಲ್ಲಿ ಫುಟ್ ಪಾತ್ ಏರುವ ವಾಹನಗಳು !: ಕಣ್ಮುಚ್ಚಿ ಕುಳಿತ ಪೊಲೀಸ್ ಇಲಾಖೆ !!

05/07/2021, 14:52

ಮಂಗಳೂರು(reporterkarnataka news): 

ಇಡೀ ರಾಜ್ಯವೇ ಅನ್ ಲಾಕ್ ಆಗುತ್ತಿದ್ದಂತೆ ಕಡಲನಗರಿ ಮಂಗಳೂರು ಕೂಡ ಸೋಮವಾರದಿಂದ ಪೂರ್ಣ ಪ್ರಮಾಣದಲ್ಲಿ ತೆರೆದುಕೊಂಡಿದೆ. ಎರಡು ತಿಂಗಳ ಲಾಕ್ ಡೌನ್ ಬಳಿಕ ನಗರದಲ್ಲಿ ಮತ್ತೆ ಚಟುವಟಿಕೆಗಳು ಗರಿಗೆದರುತ್ತಿದ್ದಂತೆ, ಇತ್ತ ನಗರದ ರಥಬೀದಿಯಲ್ಲಿ ಮಾನವ ನಿರ್ಮಿತ ಸಮಸ್ಯೆಗಳು ತಲೆ ಎತ್ತಲಾರಂಭಿದೆ. ‘ಹಿರಿಯಕ್ಕನ ಚಾಳಿ ಮನೆ ಮಂದಿಗೆ’ ಎನ್ನುವಂತೆ ರಥಬೀದಿಯಲ್ಲಿ ಫುಟ್ ಪಾತ್ ಮೇಲೆ ವಾಹನ ಪಾರ್ಕ್ ಮಾಡುವ ಕೆಟ್ಟ ಪರಂಪರೆ ಮತ್ತೆ ಮುಂದುವರಿದಿದೆ.

ಕಡಲನಗರಿಯ ಒಡಲಿನಲ್ಲಿರುವ ರಥಬೀದಿಯ ನಿವಾಸಿಗಳ ದಶಕಗಳ ಹೋರಾಟದ ಫಲವಾಗಿ ಇಲ್ಲಿನ ರಸ್ತೆ ಅಗಲೀಕರಣ ನಡೆದಿದೆ. ಕಿತ್ತು ಹೋದ ಫುಟ್ ಪಾತ್ ಗಳಿಗೆ ಬಣ್ಣದ ಹಾಸುಗಲ್ಲುಗಳನ್ನು ಹಾಸಲಾಗಿದೆ. ಆದರೆ ಇವೆಲ್ಲವೂ ‘ಎಲ್ಲ ಬಣ್ಣವನ್ನು ಮಸಿ ನುಂಗಿತು’ ಎನ್ನುವ ಹಾಗೆ ಆಗಿದೆ. ಜನರು ಓಡಾಡಲು ಮಾಡಿರುವ ಸುಸಜ್ಜಿತ ಫುಟ್ ಪಾತ್ ಕೆಲವರಿಗೆ ಕಾರು ಪಾರ್ಕಿಂಗ್ ಮಾಡುವ ಸ್ಥಳವಾಗಿ ಪರಿವರ್ತನೆಗೊಂಡಿದೆ. ಇದರಿಂದ ಪಾದಚಾರಿಗಳು ತೊಂದರೆ ಅನುಭವಿಸಬೇಕಾಗಿದೆ.

ಈ ಕುರಿತು ರಿಪೋರ್ಟರ್ ಕರ್ನಾಟಕ ಮಾರ್ಚ್ 13 ಮತ್ತು ಮಾರ್ಚ್ 21ರ ಸಂಚಿಕೆಯಲ್ಲಿ ಸಚಿತ್ರ ವರದಿ ಮಾಡಿತ್ತು. ಇದರ ಪರಿಣಾಮ ಕೆಲವು ದಿನ ಇಲ್ಲಿನ ಫುಟ್ ಪಾತ್ ಗಳು ವಾಹನ ಮುಕ್ತವಾಗಿದ್ದರೂ ಇದೀಗ ಮತ್ತೆ ಅದೇ ದೃಶ್ಯ ಕೆಲವು ಕಡೆ ಕಂಡು ಬರಲಾರಂಭಿಸಿದೆ. ಮಂಗಳೂರು ಅನ್ ಲಾಕ್ ಆಗುತ್ತಿದ್ದಂತೆ ಫುಟ್ ಪಾತ್ ಗೆ ಅಡ್ಡವಾಗಿ ಕಾರು, ದ್ವಿಚಕ್ರ ವಾಹನಗಳನ್ನು ನಿಲ್ಲಿಸುವುದು ಶುರುವಾಗಿದೆ.

ಫುಟ್ ಪಾತ್ ನಲ್ಲಿ ಒಂದಿಬ್ಬರು ವಾಹನಗಳನ್ನು ನಿಲ್ಲಿಸಿದರೆ ಸಾಕು. ನಂತರ ವಾಹನಗಳ ಮಾಲೀಕರು ಸ್ಪರ್ಧೆಗೆ ಇಳಿದಂತೆ ತಮ್ಮ ವಾಹನಗಳನ್ನು ಫುಟ್ ಪಾತ್ ಏರಿಸುತ್ತಾರೆ. ಇವರಿಗಂತು ತಾನು ನಿಯಮ ಮುರಿಯುತ್ತಿದ್ದೇನೆ, ಕಾನೂನು ಉಲ್ಲಘಿಸುತ್ತಿದ್ದೇನೆ ಎಂಬ ಪಾಪ ಪ್ರಜ್ಞೆಯೇ ಇರುವುದಿಲ್ಲ. ಆದರೆ ಜನರು ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡುವಂತೆ ಮಾಡುವ ಪೊಲೀಸ್ ಇಲಾಖೆಯಾದರೂ ಏನು ಮಾಡುತ್ತಿದೆ? ಟ್ರಾಫಿಕ್ ಪೊಲೀಸರು ಇಲ್ಲಿಗೆ ಡ್ಯೂಟಿಗೆ ಬರುವುದಿಲ್ವೇ? ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು