9:32 AM Tuesday30 - June 2026
ಬ್ರೇಕಿಂಗ್ ನ್ಯೂಸ್
ಗೆಳೆಯ ವೈಶಾಖ್‌ ಆತ್ಮಹತ್ಯೆ ಪ್ರಕರಣ: ಫಸ್ಟ್‌ ರಿಯಾಕ್ಷನ್ ಕೊಟ್ಟ ನಟಿ ಕೃಷಿ ತಾಪಂಡ ರೆಸಾರ್ಟ್ ನ ಈಜುಕೊಳದಲ್ಲಿ ದುರಂತ | 10 ಅಡಿ ಎತ್ತರದಿಂದ 4 ಅಡಿ… 2 ದಿನಗಳ ರಾಜ್ಯ ಪ್ರವಾಸ ಮುಗಿಸಿದ ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರಿಗೆ… ಆರೆಸ್ಸೆಸ್ ವಿರುದ್ಧ ಪೋಸ್ಟ್ : ಗೃಹ ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್… ಕ್ರಿಪ್ಟೋ ಹೂಡಿಕೆ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಆರೋಪ: ತೀರ್ಥಹಳ್ಳಿ ಕಾಲೇಜು ಪ್ರಾಧ್ಯಾಪಕ… ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ತೂರಿದ ಪ್ರಕರಣ | 4 ಮಂದಿ… ಮುಂಬೈ | ಮೊಹರಂ ವೇಳೆ ಸಾಮೂಹಿಕ ವಿಷಪ್ರಾಶನಕ್ಕೆ ಸಂಚು: 14,900 ಕ್ಯಾಪ್ಸುಲ್‌ ವಶಕ್ಕೆ;… ತೀರ್ಥಹಳ್ಳಿ: ಪಲ್ಸ್ ಪೋಲಿಯೋ ಅಭಿಯಾನಕ್ಕೆ ಶಾಸಕ ಆರಗ ಜ್ಞಾನೇಂದ್ರ ಚಾಲನೆ ಟ್ರೆಕ್ಕಿಂಗ್ ವೇಳೆ ದುರಂತ: ಹೃದಯಾಘಾತದಿಂದ ಚಿತ್ರ ನಿರ್ಮಾಪಕ ಭಾ ಮಾ ಹರೀಶ್ ಪುತ್ರ… ವಿರಾಜಪೇಟೆ: ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಮಹಿಳೆ ಪಾರು

ಇತ್ತೀಚಿನ ಸುದ್ದಿ

ಅನ್ ಲಾಕ್: ಮಕ್ಕಳ ಜತೆ ಮಂಗಳೂರು ಸುತ್ತಿದ ಹೆತ್ತವರು: ಮಧ್ಯಾಹ್ನ 2.45 ಕಳೆದರೂ ತೆರವಾಗದ ಜನರು!!

23/06/2021, 16:35

ಚಿತ್ರ :ಅನುಷ್ ಪಂಡಿತ್ ಮಂಗಳೂರು

strong>ಮಂಗಳೂರು(reporterkarnataka news): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಧ್ಯಾಹ್ನ 2 ಗಂಟೆ ವರೆಗೆ ಅನ್ ಲಾಕ್ ಜಾರಿಯಲ್ಲಿರುವುದರಿಂದ ಮಂಗಳೂರಿನಲ್ಲಿ ವಾಹನಗಳ ಸಂಖ್ಯೆ ಹೆಚ್ಚಳಗೊಂಡಿದ್ದು, ನಗರಕ್ಕೆ ಆಗಮಿಸಿದವರಲ್ಲಿ ಹೆಚ್ಚಿನವರು ಜತೆಗೆ ಮಕ್ಕಳನ್ನು ಕೂಡ ಕರೆದು ತಂದಿರುವುದು ಹಲವೆಡೆ ಕಂಡು ಬಂತು. ಈ ನಡುವೆ ಮಂಗಳೂರು ನಗರದಲ್ಲಿ ಪೊಲೀಸ್ ತಪಾಸಣೆ ತೀವ್ರಗೊಂಡಿದೆ. 


ಕೊರೊನಾ 3ನೇ ಅಲೆಯ ಭೀತಿಯಿದ್ದರೂ, ಮಕ್ಕಳನ್ನು ಸುರಕ್ಷಿತವಾಗಿ ಮನೆಯಲ್ಲಿ ಇರಿಸಿಕೊಳ್ಳುವ ಬಗ್ಗೆ ಜಿಲ್ಲಾಡಳಿತ ಪದೇ ಪದೇ ವಿನಂತಿ ಮಾಡಿದರೂ ನಗರಕ್ಕೆ ಆಗಮಿಸಿದ ಹೆಚ್ಚಿನ ಪೋಷಕರ ಜತೆ 18 ವರ್ಷ ಕೆಳಗಿನ ಮಕ್ಕಳಿದ್ದರು.

ಮಧ್ಯಾಹ್ನ 2 ಗಂಟೆ ವರೆಗೆ ಅಂಗಡಿ ಮುಂಗಟ್ಟು ತೆರೆಯಲು ಹಾಗೂ ಸಾರ್ವಜನಿಕರಿಗೆ ಖರೀದಿಗೆ ಅವಕಾಶ ನೀಡಲಾಗಿತ್ತು.

ಆದರೆ ಮಧ್ಯಾಹ್ನ 2.45ರ ವರೆಗೆ ಕೂಡ ಕೆಲವು ಕಡೆಗಳಲ್ಲಿ ಜನರು ರಸ್ತೆಯಿಂದ, ಅಂಗಡಿ ಬಾಗಿಲಿನಿಂದ ತೆರವುಗೊಂಡಿರಲಿಲ್ಲ.

ಮಾಸ್ಕ್ ಧರಿಸದೆ ಓಡಾಡುವವರಿಗೆ ಮತ್ತು ಅನಗತ್ಯ ಸತ್ತಾಟಕ್ಕೆ ಬಂದವರಿಗೆ ಪೊಲೀಸರು ದಂಡ ವಿಧಿಸಿ ಎಚ್ಚರಿಕೆ ನೀಡಿ ಕಳುಹಿಸುತ್ತಿದ್ದರು. ಸಂಶಯಾಸ್ಪದ ವಾಹನಗಳನ್ನು ನಿಲ್ಲಿಸಿ ಆರ್ ಸಿ, ಡಿಎಲ್, ಇನ್ಸೂರೆನ್ಸ್ ತಪಾಸಣೆ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು