9:06 PM Saturday9 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

ಅನ್ ಲಾಕ್: ಮಕ್ಕಳ ಜತೆ ಮಂಗಳೂರು ಸುತ್ತಿದ ಹೆತ್ತವರು: ಮಧ್ಯಾಹ್ನ 2.45 ಕಳೆದರೂ ತೆರವಾಗದ ಜನರು!!

23/06/2021, 16:35

ಚಿತ್ರ :ಅನುಷ್ ಪಂಡಿತ್ ಮಂಗಳೂರು

strong>ಮಂಗಳೂರು(reporterkarnataka news): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಧ್ಯಾಹ್ನ 2 ಗಂಟೆ ವರೆಗೆ ಅನ್ ಲಾಕ್ ಜಾರಿಯಲ್ಲಿರುವುದರಿಂದ ಮಂಗಳೂರಿನಲ್ಲಿ ವಾಹನಗಳ ಸಂಖ್ಯೆ ಹೆಚ್ಚಳಗೊಂಡಿದ್ದು, ನಗರಕ್ಕೆ ಆಗಮಿಸಿದವರಲ್ಲಿ ಹೆಚ್ಚಿನವರು ಜತೆಗೆ ಮಕ್ಕಳನ್ನು ಕೂಡ ಕರೆದು ತಂದಿರುವುದು ಹಲವೆಡೆ ಕಂಡು ಬಂತು. ಈ ನಡುವೆ ಮಂಗಳೂರು ನಗರದಲ್ಲಿ ಪೊಲೀಸ್ ತಪಾಸಣೆ ತೀವ್ರಗೊಂಡಿದೆ. 


ಕೊರೊನಾ 3ನೇ ಅಲೆಯ ಭೀತಿಯಿದ್ದರೂ, ಮಕ್ಕಳನ್ನು ಸುರಕ್ಷಿತವಾಗಿ ಮನೆಯಲ್ಲಿ ಇರಿಸಿಕೊಳ್ಳುವ ಬಗ್ಗೆ ಜಿಲ್ಲಾಡಳಿತ ಪದೇ ಪದೇ ವಿನಂತಿ ಮಾಡಿದರೂ ನಗರಕ್ಕೆ ಆಗಮಿಸಿದ ಹೆಚ್ಚಿನ ಪೋಷಕರ ಜತೆ 18 ವರ್ಷ ಕೆಳಗಿನ ಮಕ್ಕಳಿದ್ದರು.

ಮಧ್ಯಾಹ್ನ 2 ಗಂಟೆ ವರೆಗೆ ಅಂಗಡಿ ಮುಂಗಟ್ಟು ತೆರೆಯಲು ಹಾಗೂ ಸಾರ್ವಜನಿಕರಿಗೆ ಖರೀದಿಗೆ ಅವಕಾಶ ನೀಡಲಾಗಿತ್ತು.

ಆದರೆ ಮಧ್ಯಾಹ್ನ 2.45ರ ವರೆಗೆ ಕೂಡ ಕೆಲವು ಕಡೆಗಳಲ್ಲಿ ಜನರು ರಸ್ತೆಯಿಂದ, ಅಂಗಡಿ ಬಾಗಿಲಿನಿಂದ ತೆರವುಗೊಂಡಿರಲಿಲ್ಲ.

ಮಾಸ್ಕ್ ಧರಿಸದೆ ಓಡಾಡುವವರಿಗೆ ಮತ್ತು ಅನಗತ್ಯ ಸತ್ತಾಟಕ್ಕೆ ಬಂದವರಿಗೆ ಪೊಲೀಸರು ದಂಡ ವಿಧಿಸಿ ಎಚ್ಚರಿಕೆ ನೀಡಿ ಕಳುಹಿಸುತ್ತಿದ್ದರು. ಸಂಶಯಾಸ್ಪದ ವಾಹನಗಳನ್ನು ನಿಲ್ಲಿಸಿ ಆರ್ ಸಿ, ಡಿಎಲ್, ಇನ್ಸೂರೆನ್ಸ್ ತಪಾಸಣೆ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು