7:20 PM Monday23 - March 2026
ಬ್ರೇಕಿಂಗ್ ನ್ಯೂಸ್
ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್… ಮಸ್ಕಿ ಪುರಸಭೆ ಮುಖ್ಯಾಧಿಕಾರಿಗೆ ಹೆಚ್ಚುವರಿ ಹೊಣೆ: ಹೆಚ್ಚುತ್ತಿರುವ ರಸ್ತೆ, ನೀರು, ಸ್ವಚ್ಛತೆ ಸಮಸ್ಯೆ ರಂಗೇರಿದ ದಾವಣಗೆರೆ ಉಪ ಚುನಾವಣೆ ಸಮರ: ಕೈ-ಕಮಲ ಅಭ್ಯರ್ಥಿಗಳ ಆಸ್ತಿ ವಿವರ ಘೋಷಣೆ ದಾವಣಗೆರೆ ದಕ್ಷಿಣ ಬೈ ಎಲೆಕ್ಷನ್: ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ನಾಮಪತ್ರ ಸಲ್ಲಿಕೆ ದಾವಣಗೆರೆ ದಕ್ಷಿಣ ಉಪ ಚುನಾವಣೆ: ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮುನ್ನವೇ ಸಮರ್ಥ್‌ ಶಾಮನೂರು… ಬಾಗಲಕೋಟೆ ಉಪ ಚುನಾವಣೆ: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಬಿಸಿಲ‌ ಧಗೆ: ಕುದುರೆಮುಖ ರಾಷ್ಟ್ರೀಯ ಉದ್ಯಾನವನದ 25ಕ್ಕೂ ಹೆಚ್ಚು ಕಡೆಯಲ್ಲಿ ಶೋಲಾ ಹುಲ್ಲುಗಾವಲಿಗೆ… Kodagu | ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಆಟೋ ಚಾಲಕ ಅರೆಸ್ಟ್

ಇತ್ತೀಚಿನ ಸುದ್ದಿ

ಅನ್ ಲಾಕ್: ಮತ್ತೆ ನಗರದತ್ತ ಮುಖ ಮಾಡಿದ ಭಾರಿ  ಜನಸ್ತೋಮ; ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ ಫುಲ್ ಫುಲ್

21/06/2021, 14:54

ನವದೆಹಲಿ(reporterkarnataka news):  ದೇಶದ ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡು, ದೆಹಲಿ ಹಾಗೂ ಪಂಜಾಬ್ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಎರಡನೇ ಹಂತದ ಅನ್‌ಲಾಕ್‌ ಪ್ರಕ್ರಿಯೆ ಆರಂಭವಾಗುತ್ತಿದ್ದಂತೆ ಜನರು ಮತ್ತೆ ನಗರದತ್ತ ಮುಖ ಮಾಡಿದ್ದಾರೆ. ಸಾವಿರಾರು ಜನರು ದಿಲ್ಲಿ, ಮುಂಬೈ, ಬೆಂಗಳೂರು, ಚೆನ್ನೈ ನಗರವನ್ನು ಪ್ರವೇಶಿಸುತ್ತಿದ್ದಾರೆ. ಇದರ ಜತೆಗೆ ಅಂಗಡಿ ಮುಂಗಟ್ಟುಗಳು, ವ್ಯಾಪಾರೋದ್ಯಮ, ವಾಣಿಜ್ಯ ಚಟುವಟಿಕೆಗಳು ಮತ್ತೆ ಗರಿ ಬಿಚ್ಚಿದೆ.

ಮುಂಬೈ, ದೆಹಲಿ, ಚೆನ್ನೈ, ಬೆಂಗಳೂರಿನಂತಹ ಮಹಾನಗರಗಳಿಂದ ತಮ್ಮ ತಮ್ಮ ಊರಿಗೆ ತೆರಳಿದ್ದ ಜನರು ಮತ್ತೆ ಹಿಂತಿರುಗುತ್ತಿದ್ದಾರೆ. ಬದುಕು ಕಟ್ಟಲು ಮತ್ತೆ ನಗರಗಳತ್ತ ಮುಖ ಮಾಡುತ್ತಿದ್ದಾರೆ. ಸಾವಿರಾರು ಸಂಖ್ಯೆಯ ಜನರು ಏಕಾಏಕಿ ನಗರಗಳನ್ನು ಪ್ರವೇಶಿಸುತ್ತಿದ್ದಾರೆ. ಮುಂಬೈ, ಬೆಂಗಳೂರು, ಚೆನ್ನೈ,  ದೆಹಲಿ,ಚಂಡಿಗಢ ಮುಂತಾದ ಕಡೆಗಳಲ್ಲಿ ಮಾರುಕಟ್ಟೆಗಳು, ಬಸ್‌ ನಿಲ್ಧಾಣ, ರೈಲ್ವೆ ನಿಲ್ದಾಣಗಳು ಜನ ಜಂಗುಳಿಯಿಂದ ತುಂಬಿ ಹೋಗಿದೆ.

ಅನ್‌ಲಾಕ್ ಪ್ರಕ್ರಿಯೆಯಿಂದ ನಗರಗಳಲ್ಲಿ ಉಂಟಾಗುತ್ತಿರುವ ಜನ ದಟ್ಟಣೆಯನ್ನುತಡೆಯಲು ಸೂಕ್ತ ಕ್ರಮಕೈಗೊಳ್ಳುವಂತೆ ಕೇಂದ್ರ ಸರ್ಕಾರ ರಾಜ್ಯಗಳಿಗೆ ಸೂಚಿಸಿದೆ. ಕೆಲಸದ ಸ್ಥಳಗಳಲ್ಲಿ ಸಾಮಾಜಿಕ ಅಂತರ, ಮಾಸ್ಕ್‌, ಸ್ಯಾನಿಟೈಜರ್ ನಿಯಮಗಳು ಕಟ್ಟುನಿಟ್ಟಾಗಿ ಪಾಲನೆಯಾಗುವಂತೆ ನೋಡಿಕೊಳ್ಳುವುದು ರಾಜ್ಯಗಳ ಜವಾಬ್ದಾರಿ ಎಂದಿರುವ ಕೇಂದ್ರ ಸರ್ಕಾರ ಸಲಹೆ ನೀಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು