3:57 PM Wednesday1 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ರಂಗೇರಿದ ಉಪ ಚುನಾವಣಾ ಕಣ: ಅಖಾಡಕ್ಕಿಳಿದ ಸಿಎಂ ಸಿದ್ದರಾಮಯ್ಯ, ವಿಜಯೇಂದ್ರ; ಕೈ, ಕಮಲ… ಕೌಟುಂಬಿಕ ಕಲಹ: ಭದ್ರಾ ಬಲದಂಡೆ ನಾಲೆ ಬ್ರಿಡ್ಜ್ ನಿಂದ ಹಾರಿ ಸೂಪರ್ ವೈಸರ್…

ಇತ್ತೀಚಿನ ಸುದ್ದಿ

ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ ನಾಳೆ ಮಂಗಳೂರಿಗೆ: ರಾಷ್ಟ್ರೀಯ ಶಿಕ್ಷಣ ನೀತಿ 2020 ಉದ್ಘಾಟನೆ

29/08/2021, 11:23

ಮಂಗಳೂರು (reporterkarnataka.com): ಉನ್ನತ ಶಿಕ್ಷಣ,  ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ, ವಿದ್ಯುನ್ಮಾನ, ಐಟಿ ಹಾಗೂ ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಡಾ. ಅಶ್ವಥ್ ನಾರಾಯಣ ಸಿ.ಎನ್. ಅವರು ಇದೇ ಆ. 30ರ ಸೋಮವಾರ ಜಿಲ್ಲೆಯ ಪ್ರವಾಸ ಕೈಗೊಳ್ಳಲಿದ್ದಾರೆ.

30ರ ಸೋಮವಾರ ಬೆಳಗ್ಗೆ ಬೆಂಗಳೂರಿನಿಂದ ವಿಮಾನದ ಮೂಲಕ 10.50ಕ್ಕೆ ದಕ್ಷಿಣ ಕನ್ನಡ ವಿಮಾನನಿಲ್ದಾಣಕ್ಕೆ ಆಗಮಿಸುವರು.

ಬೆಳಿಗ್ಗೆ 11ಗಂಟೆಗೆ ಅಲ್ಲಿಂದ ಹೊರಟು 11.45ಕ್ಕೆ ಮಂಗಳೂರು ವಿಶ್ವವಿದ್ಯಾಲಯಕ್ಕೆ ಆಗಮಿಸುವರು. 12 ರಿಂದ 1.30 ರವರೆಗೆ ಮಂಗಳೂರು ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿರುವ ರಾಷ್ಟ್ರೀಯ ಶಿಕ್ಷಣ ನೀತಿ 2020 ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 2.30 ರಿಂದ 3 ಗಂಟೆಯವರೆಗೆ ಕನ್ನಡ ಸಾಹಿತ್ಯ ದಿಗ್ಗಜರೊಂದಿಗೆ ಸಮಾಲೋಚನೆಯಲ್ಲಿ ಭಾಗವಹಿಸುವರು. ಮಧ್ಯಾಹ್ನ 3 ರಿಂದ 3.45 ರವರೆಗೆ ಐಟಿ-ಬಿಟಿ ಉದ್ದಿಮೆದಾರರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸುವರು. 3.45ಕ್ಕೆ ಮಂಗಳೂರು ವಿಶ್ವವಿದ್ಯಾಲಯದಿಂದ ರಸ್ತೆ ಮೂಲಕ ಮುಡಿಪು ಗ್ರಾಮಕ್ಕೆ ತೆರಳುವರು.  ಸಂಜೆ 4 ಗಂಟೆಗೆ ಮುಡುಪು ಗ್ರಾಮದಲ್ಲಿ ಮಾದರಿ ಸ್ವಸಹಾಯ ಸಂಘ ಕರುನಾಡು ಗ್ರಾಮ ಪಂಚಾಯಿತಿ ಭೇಟಿ ನೀಡುವರು. ಸಂಜೆ 4.30ಕ್ಕೆ ಆರೆಸ್ಸೆಸ್ ಕಚೇರಿಗೆ ಪ್ರಯಾಣಿಸುವರು. ಸಂಜೆ 4.45 ರಿಂದ 5.15ರವರೆಗೆ ಆರೆಸ್ಸೆಸ್ ಕಚೇರಿಗೆ ಭೇಟಿ ನೀಡುವರು.  ಸಂಜೆ  5.15ರಿಂದ 5.45 ರವರೆಗೆ ಬಿಜೆಪಿ ಕಚೇರಿಗೆ ಭೇಟಿ ನೀಡುವರು. 5. 45ಕ್ಕೆ ವಿಮಾನ ನಿಲ್ದಾಣಕ್ಕೆ  ಪ್ರಯಾಣಿಸಿ 6.55 ಕ್ಕೆ ಮಂಗಳೂರು ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು