3:29 AM Monday7 - July 2025
ಬ್ರೇಕಿಂಗ್ ನ್ಯೂಸ್
ಶೈಕ್ಷಣಿಕ ಧನ ಸಹಾಯ ಪಾವತಿಸಲು ಆಗ್ರಹಿಸಿ ಜುಲೈ 9ರಂದು ಕಟ್ಟಡ ಕಾರ್ಮಿಕರ ರಾಜ್ಯವ್ಯಾಪಿ… Kodagu | 19 ವರ್ಷದಲ್ಲಿ ದಾಖಲೆ ಸೃಷ್ಟಿಸಿದ ಹಾರಂಗಿ ಡ್ಯಾಮ್: ಜಲಾಶಯಕ್ಕೆ ಹರಿದು… Madikeri | ಕೊಡಗಿನಲ್ಲಿ ವ್ಯಾಪಕ ಅಬ್ಬರದ ಬಿರುಗಾಳಿ ಸಹಿತ ಮಳೆ: ಇಂದು ಶಾಲಾ-… ಕಾಫಿನಾಡು ಪ್ರವೇಶಿಸದಂತೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಗೆ… Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ಕೊಡಕಾಲ ವೈದ್ಯನಾಥ ರಸ್ತೆಯ ನಾಮಫಲಕ ಅನಾವರಣ: ಶಾಸಕ ವೇದವ್ಯಾಸ ಕಾಮತ್ ಚಾಲನೆ

13/04/2025, 20:21

ಮಂಗಳೂರು(reporterkarnataka.com): ನಗರ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅಳಪೆ ಉತ್ತರ 51ನೇ ವಾರ್ಡಿನ ಕೊಡಕಾಲ ವೈದ್ಯನಾಥ ರಸ್ತೆಯ ಅಭಿವೃದ್ಧಿ ಸಹಿತ ರಸ್ತೆಗೆ “ಶ್ರೀ ವೈದ್ಯನಾಥ ರಸ್ತೆ” ಎಂಬ ಅಧಿಕೃತ ಹೆಸರಿನ ನಾಮಫಲಕವನ್ನು ಶಾಸಕ ವೇದವ್ಯಾಸ ಕಾಮತ್ ಅವರು ಉದ್ಘಾಟಿಸಿದರು.

ನಂತರ ಮಾತನಾಡಿದ ಶಾಸಕರು, ನಗರದ ಅತ್ಯಂತ ಪುರಾತನ ದೈವಸ್ಥಾನಗಳಲ್ಲೊಂದಾದ ಕಣ್ಣೂರು ಅಳಪೆ ಪ್ರದೇಶದ ಕೊಡಕಾಲನ ವೈದ್ಯನಾಥ ದೈವಸ್ಥಾನಕ್ಕೆ ಹಾದು ಹೋಗುವ ರಸ್ತೆಯನ್ನು ಸ್ಥಳೀಯರ ಕೋರಿಕೆಯಂತೆ ಅಭಿವೃದ್ಧಿಪಡಿಸಿ ಉದ್ಘಾಟನೆಗೊಳಿಸುತ್ತಿರುವ ಈ ಸಂದರ್ಭದಲ್ಲಿ, ಇಲ್ಲಿನ ಮುಖ್ಯ ರಸ್ತೆಯನ್ನು “ಶ್ರೀ ವೈದ್ಯನಾಥ ರಸ್ತೆ” ಎಂದು ಅಧಿಕೃತವಾಗಿ ನಾಮಕರಣಗೊಳಿಸಲಾಗುತ್ತಿದೆ. ಈ ಬಗ್ಗೆ ಇಲ್ಲಿನ ನಿಕಟ ಪೂರ್ವ ಪಾಲಿಕೆ ಸದಸ್ಯೆ ರೂಪಶ್ರೀ ಪೂಜಾರಿಯವರು ಪಾಲಿಕೆಯಲ್ಲಿ ಪ್ರಸ್ತಾವನೆಯನ್ನು ಸಲ್ಲಿಸಿ ಆ ಹೆಸರೇ ಅಧಿಕೃತವಾಗುವಂತೆ ನೋಡಿಕೊಂಡಿದ್ದಾರೆ. ಹಿಂದೆ ಇದನ್ನು ಅನಧಿಕೃತವಾಗಿ ಯೂಸುಫ್ ನಗರ ಎಂದು ಕರೆಯಲಾಗುತ್ತಿದ್ದ ಬಗ್ಗೆ ಅನೇಕರ ಗಮನಕ್ಕೆ ಬಂದಿತ್ತು. ಆದರೆ ಮಹಾನಗರ ಪಾಲಿಕೆಯ ದಾಖಲೆಗಳಲ್ಲಿ ಆ ಹೆಸರು ಅಧಿಕೃತವಾಗಿ ಇರಲೇ ಇಲ್ಲ. ಇನ್ನು ಮೇಲಾದರೂ ಇಂದಿನಿಂದ ಅಧಿಕೃತವಾಗಿರುವ ಹೆಸರನ್ನೇ ಸ್ಥಳೀಯರು ಹೆಚ್ಚಾಗಿ ಬಳಸಿ, ಎಲ್ಲೆಡೆ ಅದೇ ಹೆಸರು ನಮೂದಾಗುವಂತೆ ನೋಡಿಕೊಳ್ಳಬೇಕು. ಇದಕ್ಕೆ ಗೂಗಲ್ ಮ್ಯಾಪ್ ನಂತಹ ತಂತ್ರಜ್ಞಾನದ ಸಹಾಯವನ್ನೂ ಪಡೆಯಿರಿ ಎಂದು ಶಾಸಕರು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ವೈದ್ಯನಾಥ ದೈವಸ್ಥಾನದ ಗುತ್ತು ಮನೆತನದ ಪ್ರಮುಖರು, ಸ್ಥಳೀಯ ಬಿಜೆಪಿ ಪ್ರಮುಖರಾದ ಪ್ರವೀಣ್ ನಿಡ್ಡೇಲ್, ಸುರೇಶ್ ಆಚಾರ್ಯ, ನರೇಶ್ ಸರಿಪಲ್ಲ, ಕೊಡಕಾಲ ಹಿಂದೂ ಹಿತ ರಕ್ಷಣಾ ಸಮಿತಿಯ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು, ಸ್ಥಳೀಯ ಸಂಘ ಸಂಸ್ಥೆಗಳ ಹಾಗೂ ಬಿಜೆಪಿಯ ಪ್ರಮುಖರು ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು