4:19 AM Friday11 - September 2026
ಬ್ರೇಕಿಂಗ್ ನ್ಯೂಸ್
ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;…

ಇತ್ತೀಚಿನ ಸುದ್ದಿ

ಕೊಡಕಾಲ ವೈದ್ಯನಾಥ ರಸ್ತೆಯ ನಾಮಫಲಕ ಅನಾವರಣ: ಶಾಸಕ ವೇದವ್ಯಾಸ ಕಾಮತ್ ಚಾಲನೆ

13/04/2025, 20:21

ಮಂಗಳೂರು(reporterkarnataka.com): ನಗರ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅಳಪೆ ಉತ್ತರ 51ನೇ ವಾರ್ಡಿನ ಕೊಡಕಾಲ ವೈದ್ಯನಾಥ ರಸ್ತೆಯ ಅಭಿವೃದ್ಧಿ ಸಹಿತ ರಸ್ತೆಗೆ “ಶ್ರೀ ವೈದ್ಯನಾಥ ರಸ್ತೆ” ಎಂಬ ಅಧಿಕೃತ ಹೆಸರಿನ ನಾಮಫಲಕವನ್ನು ಶಾಸಕ ವೇದವ್ಯಾಸ ಕಾಮತ್ ಅವರು ಉದ್ಘಾಟಿಸಿದರು.

ನಂತರ ಮಾತನಾಡಿದ ಶಾಸಕರು, ನಗರದ ಅತ್ಯಂತ ಪುರಾತನ ದೈವಸ್ಥಾನಗಳಲ್ಲೊಂದಾದ ಕಣ್ಣೂರು ಅಳಪೆ ಪ್ರದೇಶದ ಕೊಡಕಾಲನ ವೈದ್ಯನಾಥ ದೈವಸ್ಥಾನಕ್ಕೆ ಹಾದು ಹೋಗುವ ರಸ್ತೆಯನ್ನು ಸ್ಥಳೀಯರ ಕೋರಿಕೆಯಂತೆ ಅಭಿವೃದ್ಧಿಪಡಿಸಿ ಉದ್ಘಾಟನೆಗೊಳಿಸುತ್ತಿರುವ ಈ ಸಂದರ್ಭದಲ್ಲಿ, ಇಲ್ಲಿನ ಮುಖ್ಯ ರಸ್ತೆಯನ್ನು “ಶ್ರೀ ವೈದ್ಯನಾಥ ರಸ್ತೆ” ಎಂದು ಅಧಿಕೃತವಾಗಿ ನಾಮಕರಣಗೊಳಿಸಲಾಗುತ್ತಿದೆ. ಈ ಬಗ್ಗೆ ಇಲ್ಲಿನ ನಿಕಟ ಪೂರ್ವ ಪಾಲಿಕೆ ಸದಸ್ಯೆ ರೂಪಶ್ರೀ ಪೂಜಾರಿಯವರು ಪಾಲಿಕೆಯಲ್ಲಿ ಪ್ರಸ್ತಾವನೆಯನ್ನು ಸಲ್ಲಿಸಿ ಆ ಹೆಸರೇ ಅಧಿಕೃತವಾಗುವಂತೆ ನೋಡಿಕೊಂಡಿದ್ದಾರೆ. ಹಿಂದೆ ಇದನ್ನು ಅನಧಿಕೃತವಾಗಿ ಯೂಸುಫ್ ನಗರ ಎಂದು ಕರೆಯಲಾಗುತ್ತಿದ್ದ ಬಗ್ಗೆ ಅನೇಕರ ಗಮನಕ್ಕೆ ಬಂದಿತ್ತು. ಆದರೆ ಮಹಾನಗರ ಪಾಲಿಕೆಯ ದಾಖಲೆಗಳಲ್ಲಿ ಆ ಹೆಸರು ಅಧಿಕೃತವಾಗಿ ಇರಲೇ ಇಲ್ಲ. ಇನ್ನು ಮೇಲಾದರೂ ಇಂದಿನಿಂದ ಅಧಿಕೃತವಾಗಿರುವ ಹೆಸರನ್ನೇ ಸ್ಥಳೀಯರು ಹೆಚ್ಚಾಗಿ ಬಳಸಿ, ಎಲ್ಲೆಡೆ ಅದೇ ಹೆಸರು ನಮೂದಾಗುವಂತೆ ನೋಡಿಕೊಳ್ಳಬೇಕು. ಇದಕ್ಕೆ ಗೂಗಲ್ ಮ್ಯಾಪ್ ನಂತಹ ತಂತ್ರಜ್ಞಾನದ ಸಹಾಯವನ್ನೂ ಪಡೆಯಿರಿ ಎಂದು ಶಾಸಕರು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ವೈದ್ಯನಾಥ ದೈವಸ್ಥಾನದ ಗುತ್ತು ಮನೆತನದ ಪ್ರಮುಖರು, ಸ್ಥಳೀಯ ಬಿಜೆಪಿ ಪ್ರಮುಖರಾದ ಪ್ರವೀಣ್ ನಿಡ್ಡೇಲ್, ಸುರೇಶ್ ಆಚಾರ್ಯ, ನರೇಶ್ ಸರಿಪಲ್ಲ, ಕೊಡಕಾಲ ಹಿಂದೂ ಹಿತ ರಕ್ಷಣಾ ಸಮಿತಿಯ ಅಧ್ಯಕ್ಷರು ಹಾಗೂ ಸರ್ವ ಸದಸ್ಯರು, ಸ್ಥಳೀಯ ಸಂಘ ಸಂಸ್ಥೆಗಳ ಹಾಗೂ ಬಿಜೆಪಿಯ ಪ್ರಮುಖರು ಕಾರ್ಯಕರ್ತರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು