11:34 PM Monday15 - September 2025
ಬ್ರೇಕಿಂಗ್ ನ್ಯೂಸ್
ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು… Kodagu | ಕಾಲೇಜಿನಲ್ಲಿ ಮಚ್ಚು ಹಿಡಿದು ರೀಲ್ಸ್: ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು;… Kodagu | ಕೇರಳದ ಕಸಾಯಿಖಾನೆಗೆ ಕೋಣಗಳ ಸಾಗಾಟ: 34 ಕೋಣಗಳ ರಕ್ಷಣೆ ಸಂತೋಷದ ಬಾಗಿಲಿನತ್ತ ಪೂಜಾಳ ಪಯಣ: ಬಿಹಾರದಲ್ಲಿರುವ ಕುಟುಂಬ ಜತೆ ಪುನರ್ಮಿಲನ

ಇತ್ತೀಚಿನ ಸುದ್ದಿ

ಉಪ ಚುನಾವಣೆಯಲ್ಲಿ ಆಡಳಿತರೂಢ ಪಕ್ಷದ ಅಭ್ಯರ್ಥಿಗಳು ಗೆಲ್ಲುವುದು ಸಾಮಾನ್ಯ: ಪ್ರತಿಪಕ್ಷದ ನಾಯಕ ಆರ್. ಅಶೋಕ್

23/11/2024, 19:29

ಬೆಂಗಳೂರು(reporterkarnataka.com): ಉಪ ಚುನಾವಣೆಗಳಲ್ಲಿ ಆಡಳಿತರೂಢ ಪಕ್ಷ ಗೆಲ್ಲುವುದು ಸಾಮಾನ್ಯವಾಗಿದೆ. ಬಿಜೆಪಿ ಅಧಿಕಾರದಲ್ಲಿದ್ದಾಗ ನಡೆದ ಉಪ ಚುನಾವಣೆಯಲ್ಲಿ ನಾವು ಗೆದ್ದಿದ್ದೇವೆ. ಇದೀಗ ಕಾಂಗ್ರೆಸ್ ಅಧಿಕಾರದಲ್ಲಿರುವುದರಿಂದ ಅವರು ಗೆದ್ದಿದ್ದಾರೆ ಎಂದು ಪ್ರತಿಪಕ್ಷದ ನಾಯಕ ಆರ್. ಅಶೋಕ್ ಹೇಳಿದ್ದಾರೆ.
ಮಾಧ್ಯಮ ಜತೆ ಮಾತನಾಡಿದ ಅವರು, ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ವಿಳಂಬವಾಗಿರುವುದು ನಮ್ಮ ಹಿನ್ನಡೆಗೆ ಕಾರಣವಾಗಿದೆ. ಚನ್ನಪಟ್ಟಣ ದಲ್ಲಿ ನಿಖಿಲ್ ಕುಮಾರಸ್ವಾಮಿ ಚುನಾವಣೆಗೆ ನಿಲ್ಲುವುದಿಲ್ಲ ಅಂತ ಹೇಳುತ್ತಲೇ ಬಂದಿದ್ದರು. ಆದರೆ ಹೈಕಮಾಂಡ್ ಸೂಚನೆಯಂತೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ಅವರ ಅದೃಷ್ಟ ಚೆನ್ನಾಗಿಲ್ಲ. ಎರಡು ಬಾರಿ ಸೋತಿದ್ದಾರೆ. ಇಲ್ಲಿ ಗೆಲ್ಲುತ್ತಾರೆ ಎಂಬ ವಿಶ್ವಾಸವಿತ್ತು. ಆದರೆ ಗೆಲ್ಲಲಿಲ್ಲ ಎಂದರು.
ನಮಗೆ ಎರಡು ಕ್ಷೇತ್ರ ಗೆಲ್ಲುವ ವಿಶ್ವಾಸವಿತ್ತು. ಆದರೆ ಮತದಾರರು ನಾನಾ ಕಾರಣಗಳಿಗಾಗಿ ಆಡಳಿತರೂಢ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿದ್ದಾರೆ. ಶಿಗ್ಗಾವಿಯಲ್ಲಿ ಕೂಡ ಭರತ್ ಬೊಮ್ಮಾಯಿ ಅವರನ್ನು ನಿಲ್ಲಿಸಲು ಬಸವರಾಜ ಬೊಮ್ಮಾಯಿ ಅವರಿಗೆ ಮನಸ್ಸಿರಲಿಲ್ಲ. ನನ್ನಲ್ಲೇ ಈ ವಿಚಾರವನ್ನು ಹೇಳಿದ್ದರು. ಆದರೆ ಹೈಕಮಾಂಡ್ ಸೂಚನೆಯ ಹಿನ್ನೆಲೆಯಲ್ಲಿ ಒಪ್ಪಿಕೊಂಡಿದ್ದರು ಎಂದು ಅಶೋಕ್ ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು