3:46 PM Thursday23 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ಉಪ ಚುನಾವಣೆಯಲ್ಲಿ ಆಡಳಿತರೂಢ ಪಕ್ಷದ ಅಭ್ಯರ್ಥಿಗಳು ಗೆಲ್ಲುವುದು ಸಾಮಾನ್ಯ: ಪ್ರತಿಪಕ್ಷದ ನಾಯಕ ಆರ್. ಅಶೋಕ್

23/11/2024, 19:29

ಬೆಂಗಳೂರು(reporterkarnataka.com): ಉಪ ಚುನಾವಣೆಗಳಲ್ಲಿ ಆಡಳಿತರೂಢ ಪಕ್ಷ ಗೆಲ್ಲುವುದು ಸಾಮಾನ್ಯವಾಗಿದೆ. ಬಿಜೆಪಿ ಅಧಿಕಾರದಲ್ಲಿದ್ದಾಗ ನಡೆದ ಉಪ ಚುನಾವಣೆಯಲ್ಲಿ ನಾವು ಗೆದ್ದಿದ್ದೇವೆ. ಇದೀಗ ಕಾಂಗ್ರೆಸ್ ಅಧಿಕಾರದಲ್ಲಿರುವುದರಿಂದ ಅವರು ಗೆದ್ದಿದ್ದಾರೆ ಎಂದು ಪ್ರತಿಪಕ್ಷದ ನಾಯಕ ಆರ್. ಅಶೋಕ್ ಹೇಳಿದ್ದಾರೆ.
ಮಾಧ್ಯಮ ಜತೆ ಮಾತನಾಡಿದ ಅವರು, ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ವಿಳಂಬವಾಗಿರುವುದು ನಮ್ಮ ಹಿನ್ನಡೆಗೆ ಕಾರಣವಾಗಿದೆ. ಚನ್ನಪಟ್ಟಣ ದಲ್ಲಿ ನಿಖಿಲ್ ಕುಮಾರಸ್ವಾಮಿ ಚುನಾವಣೆಗೆ ನಿಲ್ಲುವುದಿಲ್ಲ ಅಂತ ಹೇಳುತ್ತಲೇ ಬಂದಿದ್ದರು. ಆದರೆ ಹೈಕಮಾಂಡ್ ಸೂಚನೆಯಂತೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ. ಅವರ ಅದೃಷ್ಟ ಚೆನ್ನಾಗಿಲ್ಲ. ಎರಡು ಬಾರಿ ಸೋತಿದ್ದಾರೆ. ಇಲ್ಲಿ ಗೆಲ್ಲುತ್ತಾರೆ ಎಂಬ ವಿಶ್ವಾಸವಿತ್ತು. ಆದರೆ ಗೆಲ್ಲಲಿಲ್ಲ ಎಂದರು.
ನಮಗೆ ಎರಡು ಕ್ಷೇತ್ರ ಗೆಲ್ಲುವ ವಿಶ್ವಾಸವಿತ್ತು. ಆದರೆ ಮತದಾರರು ನಾನಾ ಕಾರಣಗಳಿಗಾಗಿ ಆಡಳಿತರೂಢ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಿದ್ದಾರೆ. ಶಿಗ್ಗಾವಿಯಲ್ಲಿ ಕೂಡ ಭರತ್ ಬೊಮ್ಮಾಯಿ ಅವರನ್ನು ನಿಲ್ಲಿಸಲು ಬಸವರಾಜ ಬೊಮ್ಮಾಯಿ ಅವರಿಗೆ ಮನಸ್ಸಿರಲಿಲ್ಲ. ನನ್ನಲ್ಲೇ ಈ ವಿಚಾರವನ್ನು ಹೇಳಿದ್ದರು. ಆದರೆ ಹೈಕಮಾಂಡ್ ಸೂಚನೆಯ ಹಿನ್ನೆಲೆಯಲ್ಲಿ ಒಪ್ಪಿಕೊಂಡಿದ್ದರು ಎಂದು ಅಶೋಕ್ ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು