3:25 AM Saturday19 - April 2025
ಬ್ರೇಕಿಂಗ್ ನ್ಯೂಸ್
Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್…

ಇತ್ತೀಚಿನ ಸುದ್ದಿ

ಉಪನ್ಯಾಸಕಿ ಶ್ರೀ ಮುದ್ರಾಡಿ ಅವರ ಚೊಚ್ಚಲ ಕವನ ಸಂಕಲನ ‘ಇಲ್ಲಗಳ ನಡುವೆ’ ನವೆಂಬರ್ 1ರಂದು ಲೋಕಾರ್ಪಣೆ

29/10/2021, 16:40

ಕಾರ್ಕಳ(reporterkarnataka.com): ನಿಟ್ಟೆ ಡಾ. ಎನ್. ಎಸ್. ಎ.ಎಂ. ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕಿ  ಶ್ರೀ ಮುದ್ರಾಡಿ ಅವರ ಚೊಚ್ಚಲ ಕವನ ಸಂಕಲನ ‘ಇಲ್ಲಗಳ ನಡುವೆ’ ನವೆಂಬರ್ 1ರಂದು ಬಿಡುಗಡೆಗೊಳ್ಳಲಿದೆ.

ಕೃತಿಯನ್ನು ನವೆಂಬರ್  1ರಂದು ಕರ್ನಾಟಕ ರಾಜ್ಯ ಫೆಡರೇಶನ್ ಆಫ್ ಕರ್ನಾಟಕ ಕ್ವಾರಿ ಸ್ಟೋನ್ ಕ್ರಷರ್ಸ್ ಓನರ್ಸ್ ಅಸೋಸಿಯೇಶನ್ ರಾಜ್ಯಾಧ್ಯಕ್ಷ ರವೀಂದ್ರ ಶೆಟ್ಟಿ ಬಜಗೋಳಿ ಅವರ ನಿವಾಸ ಎಸ್.ಪಿ. ಗಾರ್ಡನ್ ನಲ್ಲಿ ಪ್ರೇಮಾ ಸಾಧು ಶೆಟ್ಟಿ ಅವರು ಬಿಡುಗಡೆ ಮಾಡಲಿದ್ದಾರೆ. ಕಾರ್ಕಳದ ಹೊಸ ಸಂಜೆ ಪ್ರಕಾಶನದ ಹೆಮ್ಮೆಯ ಕೃತಿ ಇದಾಗಿದೆ.

ಕನ್ನಡ ಉಪನ್ಯಾಸಕಿಯಾದ ಶ್ರೀ ಮುದ್ರಾಡಿ ಅವರು ಪ್ರಸಿದ್ಧ ಸಾಹಿತಿ, ವಿಮರ್ಶಕ, ಅಷ್ಟಾವಧಾನಿ, ಹರಿದಾಸ ಹೀಗೆ ಬಹು ಕ್ಷೇತ್ರಗಳಲ್ಲಿ ಪಾಂಡಿತ್ಯ ಹೊಂದಿದ ಅಂಬಾತನಯ ಮುದ್ರಾಡಿ ಅವರ ಪುತ್ರಿ. ಶ್ರೀ ಮುದ್ರಾಡಿ ಅವರು ಮೂಲತಃ ಪತ್ರಕರ್ತೆ. ಅವರು ಮುಂಗಾರು ಪತ್ರಿಕೆಯಲ್ಲಿ ಉಪ ಸಂಪಾದಕಿಯಾಗಿ ಕಾರ್ಯನಿರ್ವಹಿಸಿದ್ದರು. ನಂತರ ಪತ್ರಿಕಾರಂಗದಿಂದ ಶಿಕ್ಷಣ ಕ್ಷೇತ್ರಕ್ಕೆ ಕಾಲಿಟ್ಟರು. ಶೈಕ್ಷಣಿಕ ಅಧ್ಯಯನಕ್ಕಾಗಿ ಸ್ಕಾಟ್ ಲ್ಯಾಂಡ್ ಗೆ ಕೂಡ ಹೋಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು