3:11 AM Sunday25 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಉಪನ್ಯಾಸಕಿ ಶ್ರೀ ಮುದ್ರಾಡಿ ಅವರ ಚೊಚ್ಚಲ ಕವನ ಸಂಕಲನ ‘ಇಲ್ಲಗಳ ನಡುವೆ’ ನವೆಂಬರ್ 1ರಂದು ಲೋಕಾರ್ಪಣೆ

29/10/2021, 16:40

ಕಾರ್ಕಳ(reporterkarnataka.com): ನಿಟ್ಟೆ ಡಾ. ಎನ್. ಎಸ್. ಎ.ಎಂ. ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕಿ  ಶ್ರೀ ಮುದ್ರಾಡಿ ಅವರ ಚೊಚ್ಚಲ ಕವನ ಸಂಕಲನ ‘ಇಲ್ಲಗಳ ನಡುವೆ’ ನವೆಂಬರ್ 1ರಂದು ಬಿಡುಗಡೆಗೊಳ್ಳಲಿದೆ.

ಕೃತಿಯನ್ನು ನವೆಂಬರ್  1ರಂದು ಕರ್ನಾಟಕ ರಾಜ್ಯ ಫೆಡರೇಶನ್ ಆಫ್ ಕರ್ನಾಟಕ ಕ್ವಾರಿ ಸ್ಟೋನ್ ಕ್ರಷರ್ಸ್ ಓನರ್ಸ್ ಅಸೋಸಿಯೇಶನ್ ರಾಜ್ಯಾಧ್ಯಕ್ಷ ರವೀಂದ್ರ ಶೆಟ್ಟಿ ಬಜಗೋಳಿ ಅವರ ನಿವಾಸ ಎಸ್.ಪಿ. ಗಾರ್ಡನ್ ನಲ್ಲಿ ಪ್ರೇಮಾ ಸಾಧು ಶೆಟ್ಟಿ ಅವರು ಬಿಡುಗಡೆ ಮಾಡಲಿದ್ದಾರೆ. ಕಾರ್ಕಳದ ಹೊಸ ಸಂಜೆ ಪ್ರಕಾಶನದ ಹೆಮ್ಮೆಯ ಕೃತಿ ಇದಾಗಿದೆ.

ಕನ್ನಡ ಉಪನ್ಯಾಸಕಿಯಾದ ಶ್ರೀ ಮುದ್ರಾಡಿ ಅವರು ಪ್ರಸಿದ್ಧ ಸಾಹಿತಿ, ವಿಮರ್ಶಕ, ಅಷ್ಟಾವಧಾನಿ, ಹರಿದಾಸ ಹೀಗೆ ಬಹು ಕ್ಷೇತ್ರಗಳಲ್ಲಿ ಪಾಂಡಿತ್ಯ ಹೊಂದಿದ ಅಂಬಾತನಯ ಮುದ್ರಾಡಿ ಅವರ ಪುತ್ರಿ. ಶ್ರೀ ಮುದ್ರಾಡಿ ಅವರು ಮೂಲತಃ ಪತ್ರಕರ್ತೆ. ಅವರು ಮುಂಗಾರು ಪತ್ರಿಕೆಯಲ್ಲಿ ಉಪ ಸಂಪಾದಕಿಯಾಗಿ ಕಾರ್ಯನಿರ್ವಹಿಸಿದ್ದರು. ನಂತರ ಪತ್ರಿಕಾರಂಗದಿಂದ ಶಿಕ್ಷಣ ಕ್ಷೇತ್ರಕ್ಕೆ ಕಾಲಿಟ್ಟರು. ಶೈಕ್ಷಣಿಕ ಅಧ್ಯಯನಕ್ಕಾಗಿ ಸ್ಕಾಟ್ ಲ್ಯಾಂಡ್ ಗೆ ಕೂಡ ಹೋಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು