5:13 PM Thursday18 - June 2026
ಬ್ರೇಕಿಂಗ್ ನ್ಯೂಸ್
ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3… ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು

ಇತ್ತೀಚಿನ ಸುದ್ದಿ

ಉಪನ್ಯಾಸಕಿ ಶ್ರೀ ಮುದ್ರಾಡಿ ಅವರ ಚೊಚ್ಚಲ ಕವನ ಸಂಕಲನ ‘ಇಲ್ಲಗಳ ನಡುವೆ’ ನವೆಂಬರ್ 1ರಂದು ಲೋಕಾರ್ಪಣೆ

29/10/2021, 16:40

ಕಾರ್ಕಳ(reporterkarnataka.com): ನಿಟ್ಟೆ ಡಾ. ಎನ್. ಎಸ್. ಎ.ಎಂ. ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕಿ  ಶ್ರೀ ಮುದ್ರಾಡಿ ಅವರ ಚೊಚ್ಚಲ ಕವನ ಸಂಕಲನ ‘ಇಲ್ಲಗಳ ನಡುವೆ’ ನವೆಂಬರ್ 1ರಂದು ಬಿಡುಗಡೆಗೊಳ್ಳಲಿದೆ.

ಕೃತಿಯನ್ನು ನವೆಂಬರ್  1ರಂದು ಕರ್ನಾಟಕ ರಾಜ್ಯ ಫೆಡರೇಶನ್ ಆಫ್ ಕರ್ನಾಟಕ ಕ್ವಾರಿ ಸ್ಟೋನ್ ಕ್ರಷರ್ಸ್ ಓನರ್ಸ್ ಅಸೋಸಿಯೇಶನ್ ರಾಜ್ಯಾಧ್ಯಕ್ಷ ರವೀಂದ್ರ ಶೆಟ್ಟಿ ಬಜಗೋಳಿ ಅವರ ನಿವಾಸ ಎಸ್.ಪಿ. ಗಾರ್ಡನ್ ನಲ್ಲಿ ಪ್ರೇಮಾ ಸಾಧು ಶೆಟ್ಟಿ ಅವರು ಬಿಡುಗಡೆ ಮಾಡಲಿದ್ದಾರೆ. ಕಾರ್ಕಳದ ಹೊಸ ಸಂಜೆ ಪ್ರಕಾಶನದ ಹೆಮ್ಮೆಯ ಕೃತಿ ಇದಾಗಿದೆ.

ಕನ್ನಡ ಉಪನ್ಯಾಸಕಿಯಾದ ಶ್ರೀ ಮುದ್ರಾಡಿ ಅವರು ಪ್ರಸಿದ್ಧ ಸಾಹಿತಿ, ವಿಮರ್ಶಕ, ಅಷ್ಟಾವಧಾನಿ, ಹರಿದಾಸ ಹೀಗೆ ಬಹು ಕ್ಷೇತ್ರಗಳಲ್ಲಿ ಪಾಂಡಿತ್ಯ ಹೊಂದಿದ ಅಂಬಾತನಯ ಮುದ್ರಾಡಿ ಅವರ ಪುತ್ರಿ. ಶ್ರೀ ಮುದ್ರಾಡಿ ಅವರು ಮೂಲತಃ ಪತ್ರಕರ್ತೆ. ಅವರು ಮುಂಗಾರು ಪತ್ರಿಕೆಯಲ್ಲಿ ಉಪ ಸಂಪಾದಕಿಯಾಗಿ ಕಾರ್ಯನಿರ್ವಹಿಸಿದ್ದರು. ನಂತರ ಪತ್ರಿಕಾರಂಗದಿಂದ ಶಿಕ್ಷಣ ಕ್ಷೇತ್ರಕ್ಕೆ ಕಾಲಿಟ್ಟರು. ಶೈಕ್ಷಣಿಕ ಅಧ್ಯಯನಕ್ಕಾಗಿ ಸ್ಕಾಟ್ ಲ್ಯಾಂಡ್ ಗೆ ಕೂಡ ಹೋಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು