3:58 PM Saturday5 - July 2025
ಬ್ರೇಕಿಂಗ್ ನ್ಯೂಸ್
ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ… ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನ ದೂರವಿಲ್ಲ: ಬೀದರ್ ನಲ್ಲಿ ಸಚಿವೆ ಲಕ್ಷ್ಮೀ… ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ…

ಇತ್ತೀಚಿನ ಸುದ್ದಿ

ಉಪಯೋಗಕ್ಕೆ ಬಾರದ ಮಸ್ಕಿ ಕೃಷಿ ಕೇಂದ್ರ: ಕರ್ನಾಟಕ ರೈತ ಸಂಘದಿಂದ ಮುತ್ತಿಗೆ, ಪ್ರತಿಭಟನೆ

22/10/2021, 09:27

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ 
ಅಂತರಗಂಗೆ ರಾಯಚೂರು
info.reporterkarnataka@gmail.com

ರೈತರಿಗಾಗಿ ಸರಕಾರ ಸಾವಿರಾರು ಕೋಟಿ ಅನುದಾನ ಬಿಡುಗಡೆ ಮಾಡುತ್ತದೆ. ಆದರೆ ಅದು ನಿಜವಾದ ರೈತರಿಗೆ ತಲುಪುವುದೇ ಇಲ್ಲ.

ಕೃಷಿ ಕೇಂದ್ರದಲ್ಲಿಯೂ ರೈತರಿಗೆ ಸರಿಯಾದ ರೀತಿಯ ಅಗತ್ಯ ವಸ್ತುಗಳು ಸಿಗುತ್ತಿಲ್ಲ. ಹೀಗಾದರೆ ದೇಶಕ್ಕೆ ಅನ್ನ ಹಾಕು ರೈತನ ಪಾಡು ಹೇಗೆ ಎಂದು ಮಸ್ಕಿ ರೈತ ಸಂಘದ ಅಧ್ಯಕ್ಷ ವಿಜಯ್ ಬಡಿಗೇರ್ ಆಕ್ರೋಶ ವ್ಯಕ್ತ ಪಡಿಸಿದರು.

ಮಸ್ಕಿಯಿಂದ ಎರಡು ಕಿಲೋಮೀಟರ್ ದೂರದಲ್ಲಿರುವ ಕೃಷಿ ಕೇಂದ್ರ ಯಾರು ವಾಸವಿರದ ಜಾಗದಲ್ಲಿದೆ. ಜನರು ಅಲ್ಲಿಂದ ನಡೆದುಕೊಂಡು ಬರಬೇಕು. ಅಲ್ಲದೆ ರೈತರಿಗೆ ಬೇಕಾಗುವ ಕೃಷಿಗೆ ಅಗತ್ಯ ವಸ್ತುಗಳು ಸಿಗುವುದೇ ಇಲ್ಲ. ಟ್ಯಾಕ್ಟರ್, ಬಿತ್ತುವ ಯಂತ್ರೋಪಕರಣಗಳು ಅರ್ಜಿ ಹಾಕಿ ಎರಡು ವರ್ಷಗಳಾದರೂ ಇನ್ನು ಬಂದಿಲ್ಲ. ಹೀಗಾದರೆ ರೈತರ ಪಾಡೇನು. ರೈತರಿಗೆ ಅನುಕೂಲವಾಗದ ಕೃಷಿ ಕೇಂದ್ರ ಇದ್ದು ಏನು ಪ್ರಯೋಜನ ಎಂದು ಆಕ್ರೋಶ ವ್ಯಕ್ತಪಡಿಸಿ ರೈತರು

ಮುತ್ತಿಗೆ ಹಾಕಿದರು. ಕೃಷಿ ಅಧಿಕಾರಿಗಳು ಮನವಿ ಪತ್ರಕ್ಕೆ ಸ್ಪಂದಿಸಿ ರೈತರು ಅನುಕೂಲವಾಗುವ ರೀತಿಯಲ್ಲಿ ಕೊಡಲಾಗುವುದು ಎಂದು ಹೇಳಿದರು.

ಅಮೀನ್ ಪಾಸ್ ದಿದ್ದಿಗಿ ಮಾತನಾಡಿ, ರೈತನ ಬಾಳು ಕಣ್ಣೀರಿನ ಗೋಳು. ರೈತ ಹೊಲದಲ್ಲಿ ಬೆಳೆದ ಬೆಳಗೆ ಬಂದ ಹಣ ದಲ್ಲಾಳಿಗಳು ತಿನ್ನುವ ಪರಿಸ್ಥಿತಿ ರೈತರಿಗೆ ಎದುರಾಗಿದೆ. ಸರಕಾರ ರೈತರ ಬಗ್ಗೆ ಕಿಂಚಿತ್ತು ಕಾಳಜಿ ಇಲ್ಲ. ಸಮರ್ಪಕವಾದ ಬೀಜಗಳನ್ನು, ಸಮರ್ಪಕ ಯಂತ್ರೋಪಕರಣಗಳ ರೈತರಿಗೆ ಒದಗಿಸಿಕೊಡಬೇಕೆಂದು ಅಧಿಕಾರಿಗಳ ಮನವಿ ಮಾಡಿದರು.
ಈ ಸಂದರ್ಭದಲ್ಲಿ ರೈತ ಸಂಘದ ಪದಾಧಿಕಾರಿಗಳು ರೈತ ಮುಖಂಡರು ಭಾಗವಹಿಸಿದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು