9:04 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಉಪಯೋಗಕ್ಕೆ ಬಾರದ ಮಸ್ಕಿ ಕೃಷಿ ಕೇಂದ್ರ: ಕರ್ನಾಟಕ ರೈತ ಸಂಘದಿಂದ ಮುತ್ತಿಗೆ, ಪ್ರತಿಭಟನೆ

22/10/2021, 09:27

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ 
ಅಂತರಗಂಗೆ ರಾಯಚೂರು
info.reporterkarnataka@gmail.com

ರೈತರಿಗಾಗಿ ಸರಕಾರ ಸಾವಿರಾರು ಕೋಟಿ ಅನುದಾನ ಬಿಡುಗಡೆ ಮಾಡುತ್ತದೆ. ಆದರೆ ಅದು ನಿಜವಾದ ರೈತರಿಗೆ ತಲುಪುವುದೇ ಇಲ್ಲ.

ಕೃಷಿ ಕೇಂದ್ರದಲ್ಲಿಯೂ ರೈತರಿಗೆ ಸರಿಯಾದ ರೀತಿಯ ಅಗತ್ಯ ವಸ್ತುಗಳು ಸಿಗುತ್ತಿಲ್ಲ. ಹೀಗಾದರೆ ದೇಶಕ್ಕೆ ಅನ್ನ ಹಾಕು ರೈತನ ಪಾಡು ಹೇಗೆ ಎಂದು ಮಸ್ಕಿ ರೈತ ಸಂಘದ ಅಧ್ಯಕ್ಷ ವಿಜಯ್ ಬಡಿಗೇರ್ ಆಕ್ರೋಶ ವ್ಯಕ್ತ ಪಡಿಸಿದರು.

ಮಸ್ಕಿಯಿಂದ ಎರಡು ಕಿಲೋಮೀಟರ್ ದೂರದಲ್ಲಿರುವ ಕೃಷಿ ಕೇಂದ್ರ ಯಾರು ವಾಸವಿರದ ಜಾಗದಲ್ಲಿದೆ. ಜನರು ಅಲ್ಲಿಂದ ನಡೆದುಕೊಂಡು ಬರಬೇಕು. ಅಲ್ಲದೆ ರೈತರಿಗೆ ಬೇಕಾಗುವ ಕೃಷಿಗೆ ಅಗತ್ಯ ವಸ್ತುಗಳು ಸಿಗುವುದೇ ಇಲ್ಲ. ಟ್ಯಾಕ್ಟರ್, ಬಿತ್ತುವ ಯಂತ್ರೋಪಕರಣಗಳು ಅರ್ಜಿ ಹಾಕಿ ಎರಡು ವರ್ಷಗಳಾದರೂ ಇನ್ನು ಬಂದಿಲ್ಲ. ಹೀಗಾದರೆ ರೈತರ ಪಾಡೇನು. ರೈತರಿಗೆ ಅನುಕೂಲವಾಗದ ಕೃಷಿ ಕೇಂದ್ರ ಇದ್ದು ಏನು ಪ್ರಯೋಜನ ಎಂದು ಆಕ್ರೋಶ ವ್ಯಕ್ತಪಡಿಸಿ ರೈತರು

ಮುತ್ತಿಗೆ ಹಾಕಿದರು. ಕೃಷಿ ಅಧಿಕಾರಿಗಳು ಮನವಿ ಪತ್ರಕ್ಕೆ ಸ್ಪಂದಿಸಿ ರೈತರು ಅನುಕೂಲವಾಗುವ ರೀತಿಯಲ್ಲಿ ಕೊಡಲಾಗುವುದು ಎಂದು ಹೇಳಿದರು.

ಅಮೀನ್ ಪಾಸ್ ದಿದ್ದಿಗಿ ಮಾತನಾಡಿ, ರೈತನ ಬಾಳು ಕಣ್ಣೀರಿನ ಗೋಳು. ರೈತ ಹೊಲದಲ್ಲಿ ಬೆಳೆದ ಬೆಳಗೆ ಬಂದ ಹಣ ದಲ್ಲಾಳಿಗಳು ತಿನ್ನುವ ಪರಿಸ್ಥಿತಿ ರೈತರಿಗೆ ಎದುರಾಗಿದೆ. ಸರಕಾರ ರೈತರ ಬಗ್ಗೆ ಕಿಂಚಿತ್ತು ಕಾಳಜಿ ಇಲ್ಲ. ಸಮರ್ಪಕವಾದ ಬೀಜಗಳನ್ನು, ಸಮರ್ಪಕ ಯಂತ್ರೋಪಕರಣಗಳ ರೈತರಿಗೆ ಒದಗಿಸಿಕೊಡಬೇಕೆಂದು ಅಧಿಕಾರಿಗಳ ಮನವಿ ಮಾಡಿದರು.
ಈ ಸಂದರ್ಭದಲ್ಲಿ ರೈತ ಸಂಘದ ಪದಾಧಿಕಾರಿಗಳು ರೈತ ಮುಖಂಡರು ಭಾಗವಹಿಸಿದ್ದರು .

ಇತ್ತೀಚಿನ ಸುದ್ದಿ

ಜಾಹೀರಾತು